AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಮೂರ್ತಿ ರಮಣ ವಿರುದ್ಧ ಆಂಧ್ರ ಸಿಎಂ ಸುಪ್ರೀಂಕೋರ್ಟ್​ಗೆ ನೀಡಿದ್ದ ದೂರಿನ ಅರ್ಜಿ ವಜಾ; ಗೌಪ್ಯ ವಿಚಾರಣೆ ಬಹಿರಂಗ ಪಡಿಸಲು ಸಾಧ್ಯವಿಲ್ಲವೆಂದ ಪೀಠ

ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿದ್ದಾಗ ನಡೆದಿದೆ ಎಂದು ಆರೋಪಿಸಲಾದ ಅಮರಾವತಿ ಭೂ ಹಗರಣದ ಪ್ರಕರಣ ವಿಚಾರಣೆ ಆಂಧ್ರಪ್ರದೇಶದ ಹೈಕೋರ್ಟ್​ ಮೆಟ್ಟಿಲೇರಿದೆ. ಆದರೆ ಇದರ ವಿಚಾರಣೆ ಸರಿಯಾಗಿ ಆಗುತ್ತಿಲ್ಲ ಎಂಬುದು ಈಗಿನ ಸಿಎಂ ಜಗನ್​ ಅವರ ಆರೋಪ.

ನ್ಯಾಯಮೂರ್ತಿ ರಮಣ ವಿರುದ್ಧ ಆಂಧ್ರ ಸಿಎಂ ಸುಪ್ರೀಂಕೋರ್ಟ್​ಗೆ ನೀಡಿದ್ದ ದೂರಿನ ಅರ್ಜಿ ವಜಾ; ಗೌಪ್ಯ ವಿಚಾರಣೆ ಬಹಿರಂಗ ಪಡಿಸಲು ಸಾಧ್ಯವಿಲ್ಲವೆಂದ ಪೀಠ
ಎನ್​.ವಿ.ರಮಣ ಮತ್ತು ಜಗನ್ ಮೋಹನ್​ ರೆಡ್ಡಿ
Lakshmi Hegde
|

Updated on: Mar 24, 2021 | 4:28 PM

Share

ಸುಪ್ರಿಂಕೋರ್ಟ್ ನ್ಯಾಯಮೂರ್ತಿ ಎನ್​.ವಿ.ರಮಣ ವಿರುದ್ಧ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್​​ ರೆಡ್ಡಿ ಅವರು ನೀಡಿದ್ದ ದೂರಿನ ಅರ್ಜಿಯನ್ನು ಸುಪ್ರೀಂಕೋರ್ಟ್​ ಇಂದು ವಜಾಗೊಳಿಸಿದೆ. ಈ ಹಿಂದೆ ಆಂಧ್ರಪ್ರದೇಶ ಹೈಕೋರ್ಟ್​ನ ಮುಖ್ಯ ನಾಯಮೂರ್ತಿಯೂ ಆಗಿದ್ದ ರಮಣ ಅವರು, ಈಗ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿದ್ದಾರೆ. ಆದರೆ ಈಗಲೂ ಆಂಧ್ರಪ್ರದೇಶ ಸರ್ಕಾರವನ್ನು ಅಸ್ಥಿರಗೊಳಿಸಲು, ಇಲ್ಲಿನ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಜಗನ್​ ರೆಡ್ಡಿ ದೂರಿನಲ್ಲಿ ತಿಳಿಸಿದ್ದರು. ಇದು ಅಮಾರವತಿ ಭೂ ಹಗರಣಕ್ಕೆ ಸಂಬಂಧ ಪ್ರಕರಣವಾಗಿತ್ತು. ಇದೀಗ ಅರ್ಜಿಯನ್ನು ವಜಾಗೊಳಿಸಿದ್ದಾಗಿ ಸುಪ್ರೀಂಕೋರ್ಟ್​ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿಯವರ ದೂರಿನ ಬಗ್ಗೆ ಗೌಪ್ಯ ವಿಚಾರಣೆ ನಡೆಸಲಾಗಿದೆ. ಇಲ್ಲಿ ನಡೆದ ವಿಚಾರಣೆಗಳನ್ನು ಸಾರ್ವಜನಿಕವಾಗಿ ಬಹಿರಂಗ ಮಾಡಲು ಸಾಧ್ಯವಿಲ್ಲ. ಅರ್ಜಿಯಲ್ಲಿ ಉಲ್ಲೇಖವಾದ ವಿಚಾರಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಲಾಗಿದೆ. ಈ ಬಳಿಕವಷ್ಟೇ ದೂರಿನ ಅರ್ಜಿ ವಜಾಗೊಳಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ಏನಿದು ದೂರು? ಪ್ರಕರಣ? ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿದ್ದಾಗ ನಡೆದಿದೆ ಎಂದು ಆರೋಪಿಸಲಾದ ಅಮರಾವತಿ ಭೂ ಹಗರಣದ ಪ್ರಕರಣ ವಿಚಾರಣೆ ಆಂಧ್ರಪ್ರದೇಶದ ಹೈಕೋರ್ಟ್​ ಮೆಟ್ಟಿಲೇರಿದೆ. ಆದರೆ ಇದರ ವಿಚಾರಣೆ ಸರಿಯಾಗಿ ಆಗುತ್ತಿಲ್ಲ ಎಂಬುದು ಈಗಿನ ಸಿಎಂ ಜಗನ್​ ಅವರ ಆರೋಪ. ಎನ್​.ವಿ.ರಮಣ ಅವರು ಚಂದ್ರಬಾಬು ನಾಯ್ಡು ಅವರಿಗೆ ಆಪ್ತರಾಗಿದ್ದು, ಅಮರಾವತಿ ಭೂಹಗರಣ ವಿಚಾರಣೆ ಪಾರದರ್ಶಕವಾಗಿ ನಡೆಯಲು ಬಿಡುತ್ತಿಲ್ಲ. ಸುಪ್ರೀಂಕೋರ್ಟ್​​ನ ನ್ಯಾಯಮೂರ್ತಿಯಾಗಿದ್ದುಕೊಂಡು, ಆಂಧ್ರಪ್ರದೇಶ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರುಗಳ ಸಭೆಗಳ ಮೇಲೆ ಕೂಡ ಪ್ರಭಾವ ಬೀರುತ್ತಿದ್ದಾರೆ. ಈ ಮೂಲಕ ತಮಗೆ ಬೇಕಾದಂತೆ ಜಡ್ಜ್​​ಮೆಂಟ್​​ಗಳನ್ನು ಹೊರಗೆ ತರುತ್ತಿದ್ದಾರೆ ಎಂದು ಆರೋಪಿಸಿ ಜಗನ್​ 2020 ರ ಆಕ್ಟೋಬರ್​ 6ರಂದು ಸಿಜೆಐ ಬೋಬ್ಡೆ ಅವರಿಗೆ ಪತ್ರ ಬರೆದಿದ್ದರು. ಹೀಗೆ ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಯೊಬ್ಬರ ವಿರುದ್ಧ ಸಿಎಂ, ಮುಖ್ಯನ್ಯಾಯಮೂರ್ತಿಗೆ ಪತ್ರ ಬರೆದಿದ್ದು, ದೇಶದ ನ್ಯಾಯಾಂಗ ಇತಿಹಾಸದಲ್ಲೇ ಮಹತ್ವದ ಬೆಳವಣಿಗೆಯಾಗಿತ್ತು.

ಸುಪ್ರೀಂಕೋರ್ಟ್​ನ ಮುಂದಿನ ಸಿಜೆಐ ರಮಣ? ಇನ್ನು ಎನ್​.ವಿ.ರಮಣ ಸುಪ್ರೀಂಕೋರ್ಟ್​ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗುವ ಸಾಧ್ಯತೆ ದಟ್ಟವಾಗಿದೆ. ಏಪ್ರಿಲ್​ 30ರಂದು ಬೋಬ್ಡೆ ನಿವೃತ್ತರಾಗಲಿದ್ದು, ತಮ್ಮ ಉತ್ತರಾಧಿಕಾರಿಯಾಗಿ ಎನ್​.ವಿ.ರಮಣ ಅವರ ಹೆಸರನ್ನೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಇನ್ನು ಸುಪ್ರೀಂಕೋರ್ಟ್​ನಲ್ಲಿ ಬೋಬ್ಡೆಯವರನ್ನು ಹೊರತುಪಡಿಸಿದರೆ ಹಿರಿಯ ನ್ಯಾಯಮೂರ್ತಿಯಾಗಿ ಇದ್ದವರೇ ಎನ್​.ವಿ.ರಮಣ. ಇದೀಗ ಜಗನ್​ ಮಾಡಿದ್ದ ಆರೋಪದಿಂದಲೂ ಅವರಿಗೆ ಕ್ಲೀನ್​ಚಿಟ್​ ಸಿಕ್ಕಂತಾಗಿದೆ.

ಇದನ್ನೂ ಓದಿ:ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

 Andhra Pradesh Local Body Election Results: ಆಂಧ್ರ ನಗರಾಡಳಿತ ಸಂಸ್ಥೆ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಜಗನ್ ಮೋಹನ್ ರೆಡ್ಡಿಯ ವೈಎಸ್​ಆರ್​ಸಿಪಿ ಪಕ್ಷ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು