AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಮೀಸಲಾತಿ ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ಪರಿಶಿಷ್ಟ ಜಾತಿಗಳ ಉಪವರ್ಗೀಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಒಳಮೀಸಲಾತಿಗೆ ಅವಕಾಶ ನೀಡಿ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದ ತೀರ್ಪು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ಒಪ್ಪಿಲ್ಲ.

ಒಳಮೀಸಲಾತಿ ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ
ಸುಪ್ರೀಂ ಕೋರ್ಟ್
ಸುಷ್ಮಾ ಚಕ್ರೆ
|

Updated on: Oct 04, 2024 | 7:00 PM

Share

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಪರಿಶಿಷ್ಟ ಜಾತಿಗಳ ಉಪವರ್ಗೀಕರಣಕ್ಕೆ ಅವಕಾಶ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಈ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತನ್ನ ಹಿಂದಿನ ತೀರ್ಪಿನಲ್ಲಿ ಯಾವುದೇ ದೋಷವಿಲ್ಲ ಎಂದು ಹೇಳಿದೆ.

ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದ ನಂತರ, ಆ ದಾಖಲೆಯಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದ್ದರಿಂದ ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೆಪ್ಟೆಂಬರ್ 23ರಂದು ವಂಚಿತ್ ಬಹುಜನ ಅಘಾಡಿ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಅವರು ಪರಿಶಿಷ್ಟ ಜಾತಿಗಳ ಉಪವರ್ಗೀಕರಣವನ್ನು ಎತ್ತಿಹಿಡಿಯುವ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ತಮ್ಮ ಸಂಘಟನೆಯು ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ ಎಂದು ಹೇಳಿದರು.

ಇದನ್ನೂ ಓದಿ: ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ: ಖುಷಿ ಹಂಚಿಕೊಂಡ ಜನಾರ್ದನ ರೆಡ್ಡಿ

ಕಳೆದ ತಿಂಗಳು ಬಹುಮತದ ತೀರ್ಪಿನಲ್ಲಿ ಹೆಚ್ಚು ಹಿಂದುಳಿದ ಜಾತಿಗಳನ್ನು ಉನ್ನತೀಕರಿಸಲು ಮೀಸಲಾತಿ ವರ್ಗದೊಳಗೆ ಕೋಟಾಗಳನ್ನು ನೀಡಲು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಉಪ-ವರ್ಗೀಕರಣಗಳನ್ನು ಮಾಡಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಾಧೀಶರ ಸಾಂವಿಧಾನಿಕ ಪೀಠವು ರಾಜ್ಯಗಳಿಂದ ಎಸ್‌ಸಿ ಮತ್ತು ಎಸ್‌ಟಿಗಳನ್ನು ಮತ್ತಷ್ಟು ಉಪ-ವರ್ಗೀಕರಣಕ್ಕೆ ಈ ಗುಂಪುಗಳೊಳಗಿನ ಹೆಚ್ಚು ಹಿಂದುಳಿದ ಜಾತಿಗಳಿಗೆ ಕೋಟಾವನ್ನು ನೀಡಬಹುದು ಎಂದು ಹೇಳಿದೆ.

ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ; ಸುಪ್ರೀಂ ಕೋರ್ಟ್ ವಿಚಾರಣೆ ನಾಳೆಗೆ ಮುಂದೂಡಿಕೆ

ಸುಪ್ರೀಂ ಕೋರ್ಟ್‌ನ 7 ನ್ಯಾಯಾಧೀಶರ ಸಂವಿಧಾನ ಪೀಠ, 6:1 ಬಹುಮತದಿಂದ, ರಾಜ್ಯಗಳು ಎಸ್‌ಸಿ ವರ್ಗಗಳಲ್ಲಿ ಹೆಚ್ಚು ಹಿಂದುಳಿದವರನ್ನು ಗುರುತಿಸಬಹುದು ಮತ್ತು ಕೋಟಾದೊಳಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅವರನ್ನು ಉಪ-ವರ್ಗೀಕರಿಸಬಹುದು ಎಂದು ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!