AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನವಮಿ ವೇಳೆ ಕೋಮು ಗಲಭೆ ಬಗ್ಗೆ ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್ ಮತ್ತು ಬಿಆರ್ ಗವಾಯಿ ಅವರ ಪೀಠವು ಅರ್ಜಿಯನ್ನು ಕ್ಷುಲ್ಲಕ ಎಂದು ಪರಿಗಣಿಸಿದೆ. “ಈ ಅರ್ಜಿಯಲ್ಲಿ ಯಾವ ರೀತಿಯ ಪರಿಹಾರಕ್ಕಾಗಿ ಕೇಳಿಕೊಳ್ಳಲಾಗುತ್ತಿದೆ?.

ರಾಮನವಮಿ ವೇಳೆ ಕೋಮು ಗಲಭೆ ಬಗ್ಗೆ ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 26, 2022 | 10:04 PM

ದೆಹಲಿ: ರಾಮನವಮಿ (Ram Navami) ಆಚರಣೆಯ ನಂತರ ದೇಶಾದ್ಯಂತ ನಡೆಯುತ್ತಿರುವ ಕೋಮು ಹಿಂಸಾಚಾರದ (communal violence) ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ (Supreme Court) ಮಂಗಳವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್ ಮತ್ತು ಬಿಆರ್ ಗವಾಯಿ ಅವರ ಪೀಠವು ಅರ್ಜಿಯನ್ನು ಕ್ಷುಲ್ಲಕ ಎಂದು ಪರಿಗಣಿಸಿದೆ. “ಈ ಅರ್ಜಿಯಲ್ಲಿ ಯಾವ ರೀತಿಯ ಪರಿಹಾರಕ್ಕಾಗಿ ಕೇಳಿಕೊಳ್ಳಲಾಗುತ್ತಿದೆ?. ಈ ಘಟನೆಗಳ ವಿರುದ್ಧ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ನೇತೃತ್ವದಲ್ಲಿ ನ್ಯಾಯಾಂಗ ಆಯೋಗದ ತನಿಖೆಯನ್ನು ನೀವು ಬಯಸುತ್ತಿರಾ? ಎಂದು ಅದು ಹೇಳಿದೆ.”ಅಂತಹ ನಿರ್ದೇಶನಗಳನ್ನು ರವಾನಿಸಲು ನಮ್ಮನ್ನು ಕೇಳಬೇಡಿ. ಯಾವುದೇ ಮಾಜಿ ಸಿಜೆಐ ಇದಕ್ಕೆ ಮುಕ್ತರಾಗುತ್ತಾರೆ ಎಂದು ನೀವು ಭಾವಿಸುತ್ತೀರಾ? ರಾಜಸ್ಥಾನ, ದೆಹಲಿ, ಮಧ್ಯಪ್ರದೇಶ ಮತ್ತು ಗುಜರಾತ್‌ನಲ್ಲಿ ಕೋಮು ಘರ್ಷಣೆಯ ನಂತರ ಆಯಾ ರಾಜ್ಯ ಸರ್ಕಾರಗಳು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿವೆ. ಆದರೆ ಅವುಗಳಿಂದ ಏನೂ ಹೊರಬಂದಿಲ್ಲ ಎಂದು ವಕೀಲ ವಿಶಾಲ್ ತಿವಾರಿ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ. ಜನರಿಗೆ ನ್ಯಾಯಾಂಗದ ಮೇಲೆ ನಂಬಿಕೆಯಿದ್ದು, ಈ ಘಟನೆಗಳ ಹಿಂದಿನ ಸತ್ಯಾಂಶವನ್ನು ಪರಿಶೀಲಿಸಬೇಕು ಎಂದರು.

ತಾರತಮ್ಯ ಮತ್ತು ಸಾಬೀತಾದ ಅಪರಾಧಿಗಳಲ್ಲದ ವ್ಯಕ್ತಿಗಳ ವಿರುದ್ಧ ಯಾವುದೇ ಸಮರ್ಥನೀಯ ಕಾರಣವಿಲ್ಲದೆ “ಬುಲ್ಡೋಜರ್ ನ್ಯಾಯ” ನೀಡಲಾಗುತ್ತಿದೆ. ಇಂತಹ ಕ್ರಮಗಳು ತಾರತಮ್ಯ ಮತ್ತು ಪ್ರಜಾಪ್ರಭುತ್ವ ಮತ್ತು ಕಾನೂನಿನ ನಿಯಮವನ್ನು ಉಲ್ಲಂಘಿಸುತ್ತದೆ ಎಂದು ಅವರು ಹೇಳಿದರು. “ಸಂವಿಧಾನದ 14 ಮತ್ತು 21 ನೇ ವಿಧಿಯ ಅಡಿಯಲ್ಲಿ ಜೀವನ ಮತ್ತು ಸಮಾನತೆಯ ಹಕ್ಕಿನ ಅಡಿಯಲ್ಲಿ ಅಂತಹ ವ್ಯಕ್ತಿಗಳ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ.” ಎಂದು ಅರ್ಜಿಯು ಹೇಳಿದೆ.

ಏಪ್ರಿಲ್ 16 ರಂದು ಕೋಮು ಹಿಂಸಾಚಾರದ ನಂತರ ದೆಹಲಿಯ ಜಹಾಂಗೀರ್​​ಪುರಿಯಲ್ಲಿ ನಡೆಸಲಾದ ಧ್ವಂಸಗಳ ವಿರುದ್ಧ ಪೀಠವು ವಿಚಾರಣೆ ನಡೆಸುತ್ತಿರುವ ಇತರ ಪ್ರಕರಣದೊಂದಿಗೆ ತನ್ನ ಮನವಿಯನ್ನು ಸೇರಿಸಲು ತಿವಾರಿ ಮನವಿ ಮಾಡಿದ್ದೂ ಆ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿತು.

ಇದನ್ನೂ ಓದಿ: ಧರಮ್ ಸಂಸದ್​​ ಕುರಿತು ಉತ್ತರಾಖಂಡ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ