Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಾನ್​ನಲ್ಲಿನ ಕೆಲವು ಭಾಗಗಳು ದೇಶದ ಕಾನೂನಿಗೆ ವಿರುದ್ಧ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ 50 ಸಾವಿರ ದಂಡ ವಿಧಿಸಿದ ಸುಪ್ರೀಂಕೋರ್ಟ್

ಕುರಾನ್​ನಲ್ಲಿನ ಕೆಲವು ಆಯತ್​ಗಳು ದೇಶದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುತ್ತವೆ ಎಂದು ವಾಸೀಂ ರಿಜ್ವಿ ದೂರಿದ್ದರು. ಅಲ್ಲದೇ ಪಿಐಎಲ್ ಸಲ್ಲಿಸಿದ್ದ ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸೀಂ ರಿಜ್ವಿಗೆ 50 ಸಾವಿರ ದಂಡವನ್ನು ಸಹ ಸುಪ್ರೀಂಕೋರ್ಟ್ ವಿಧಿಸಿದೆ.

ಕುರಾನ್​ನಲ್ಲಿನ ಕೆಲವು ಭಾಗಗಳು ದೇಶದ ಕಾನೂನಿಗೆ ವಿರುದ್ಧ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ 50 ಸಾವಿರ ದಂಡ ವಿಧಿಸಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್ ಮತ್ತು ಪವಿತ್ರ ಕುರಾನ್
Follow us
guruganesh bhat
|

Updated on:Apr 12, 2021 | 3:00 PM

ದೆಹಲಿ: ಮುಸ್ಲಿಂಮರ ಪವಿತ್ರ ಧಾರ್ಮಿಕ ಗ್ರಂಥ ಕುರಾನ್​ನಲ್ಲಿನ ಕೆಲವು ಭಾಗಗಳು ದೇಶದ ಕಾನೂನಿಗೆ ವಿರುದ್ಧವಾಗಿವೆ ಮತ್ತು ಭಯೋತ್ಪಾದನೆಗೆ ಪ್ರಚೋದನೆ ನಡೆಸುತ್ತವೆ ಎಂದು ದೂರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ. ಅಲ್ಲದೇ ಪಿಐಎಲ್ ಸಲ್ಲಿಸಿದ್ದ ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸೀಂ ರಿಜ್ವಿಗೆ 50 ಸಾವಿರ ದಂಡವನ್ನು ಸಹ ಸುಪ್ರೀಂಕೋರ್ಟ್ ವಿಧಿಸಿದೆ.

ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ  ಫಾಲಿ ನಾರೀಮನ್, ಬಿ ಆರ್, ಗವೈ ಹೃಷಿಕೇಶ್ ರಾಯ್ ಅವರುಗಳಿದ್ದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಕುರಾನ್​ನಲ್ಲಿನ ಕೆಲವು ಆಯತ್​ಗಳು ದೇಶದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುತ್ತವೆ ಎಂದು ವಾಸೀಂ ರಿಜ್ವಿ ದೂರಿದ್ದರು. ಅಲ್ಲದೇ ಅಂತಹ ಭಾಗಗಳನ್ನು ಅಸಾಂವಿಧಾನಿಕ, ಪರಿಣಾಮಕಾರಿಯಲ್ಲದ, ಯಾವುದೇ ಕಾರ್ಯನಿರ್ವಹಿಸಿದ ಭಾಗಗಳೆಂದು ಘೋಷಿಸಲು ಅವರು ಅರ್ಜಿಯಲ್ಲಿ ಮನವಿ ಮಾಡಿದ್ದರು.

ಉತ್ತರ ಪ್ರದೇಶದ ಕೇಂದ್ರೀಯ ವಕ್ಫ್ ಬೋರ್ಡ್​ನ ಮಾಜಿ ಅಧ್ಯಕ್ಷ, ಆಲ್ ಇಂಡಿಯಾ ಶಿಯಾ ಯತೀಮ್ ಖಾನಾದ ಅಧ್ಯಕ್ಷರೂ ಆಗಿರುವ ವಾಸಿಂ ರಿಜ್ವಿ ಕೆಲವು ದಿನಗಳ ಹಿಂದೆಯೇ ಈ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿದ್ದರು. ಅವರ ವಿರುದ್ಧ ಕೋಪಗೊಂಡಿದ್ದ ಕೆಲವು ಮುಸ್ಲಿಂ ಧಾರ್ಮಿಕ ಸಂಘಟನೆಗಳು ಎಫ್ಐಆರ್ ಸಹ ದಾಖಲಿಸಿದ್ದವು. ಅಲ್ಲಾಹುವಿನ ಪವಿತ್ರ ಸಂದೇಶಗಳ ಗ್ರಂಥರೂಪ ಬರೆಯಲ್ಪಟ್ಟಿದ್ದ ಪವಿತ್ರ ಕುರಾನ್ನಲ್ಲಿ ಕೆಲವು ನಕಾರಾತ್ಮಕ ಮತ್ತು ದ್ವೇಷಪೂರಿತ ಅಂಶಗಳಿವೆ ಎಂದು ಅವರು ಅರ್ಜಿಯಲ್ಲಿ ದೂರಿದ್ದರು.

ಇದೀಗ ಈ ಆದೇಶದ ಮೂಲಕ ಸುಪ್ರೀಂಕೋರ್ಟ್ ಕುರಾನ್​ ವಿರುದ್ಧದ ಅರ್ಜಿಯನ್ನು ತಳ್ಳಿಹಾಕಿದಂತಾಗಿದೆ. ಉತ್ತರ ಪ್ರದೇಶದ ಕೇಂದ್ರೀಯ ವಕ್ಫ್ ಬೋರ್ಡ್​ನ ಮಾಜಿ ಅಧ್ಯಕ್ಷ, ವಾಸಿಂ ರಿಜ್ವಿ ಅವರ ಅರ್ಜಿಯನ್ನು ವಜಾಗೊಳಿಸಿ, ಅವರಿಗೆ 50 ಸಾವಿರ ರೂಪಾಯಿಗಳ ದಂಡ ವಿಧಿಸಿದೆ. ಈ ಪ್ರಕರಣದ ಕುರಿತು ದೇಶದ ಮುಸ್ಲಿಂ ಸಮುದಾಯ ಹೇಗೆ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ‘ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರೆಸುತ್ತೀರಿ?‘: ಸುಪ್ರೀಂಕೋರ್ಟ್

ಮಹಿಳೆಯರ ಪಾಲಿಗೆ ಸಿಹಿಸುದ್ದಿ ನೀಡಿದ ಸುಪ್ರೀಂಕೋರ್ಟ್; ದೈಹಿಕ ಸಾಮರ್ಥ್ಯ ಆಧರಿತ ಕೆಲಸಗಳಲ್ಲಿ ನಿವೃತ್ತಿ ವಯಸ್ಸಿನವರೆಗೂ ಮುಂದುವರೆಯಲು ಅವಕಾಶ

(Supreme Court dismisses plea seeking deletion of certain verses from the Quran imposes costs of Rs. 50,000 on petitioner Syed Waseem Rizvi)

Published On - 2:37 pm, Mon, 12 April 21

Daily horoscope: ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
Daily horoscope: ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?