Rape Case: ಸಂತ್ರಸ್ತೆಯೇ ಮುಂದೆ ಬಂದರೂ ಅತ್ಯಾಚಾರಿ ಜೊತೆ ಮದುವೆಗೆ ಒಪ್ಪಿಗೆ ನೀಡದ ಸುಪ್ರೀಂ ಕೋರ್ಟ್

ಕೇರಳದ ಕೊಟ್ಟಿಯೂರ್​ನ ಅಪ್ರಾಪ್ತೆಯ ಮೇಲೆ 2017ರಲ್ಲಿ ಚರ್ಚ್​ನ ಫಾದರ್ ಅತ್ಯಾಚಾರವೆಸಗಿದ್ದರು. ಬಳಿಕ ಆಕೆ ಮಗುವಿಗೆ ಜನ್ಮ ನೀಡಿದ್ದಳು. ಇದೀಗ ಆಕೆ ಆತನನ್ನೇ ಮದುವೆಯಾಗಲು ನಿರ್ಧರಿಸಿದ್ದು, ಪ್ರಕರಣವನ್ನು ವಜಾ ಮಾಡಬೇಕೆಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಳು.

Rape Case: ಸಂತ್ರಸ್ತೆಯೇ ಮುಂದೆ ಬಂದರೂ ಅತ್ಯಾಚಾರಿ ಜೊತೆ ಮದುವೆಗೆ ಒಪ್ಪಿಗೆ ನೀಡದ ಸುಪ್ರೀಂ ಕೋರ್ಟ್
ಕೇರಳದ ಅತ್ಯಾಚಾರ ಆರೋಪಿ
Follow us
| Updated By: ಸುಷ್ಮಾ ಚಕ್ರೆ

Updated on: Aug 02, 2021 | 3:31 PM

ನವದೆಹಲಿ: ತನ್ನ ಮೇಲೆ ಅತ್ಯಾಚಾರವೆಸಗಿದ್ದ ಕ್ಯಾಥೋಲಿಕ್ ಚರ್ಚ್ ಫಾದರ್​​ನನ್ನು (Priest) ಮದುವೆಯಾಗಲು ಅನುಮತಿ ನೀಡುವಂತೆ ಸಂತ್ರಸ್ತೆಯೇ ಮನವಿ ಮಾಡಿದ್ದರೂ ಆಕೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಆರೋಪಿಗೆ ಈಗಾಗಲೇ 20 ವರ್ಷಗಳ ಕಾಲ ಕಾರಾಗೃಹ ಶಿಕ್ಷೆಯನ್ನು ಘೋಷಿಸಲಾಗಿದ್ದು, ಆತನನ್ನು ಬಿಡುಗಡೆ ಮಾಡಿ, ಸಂತ್ರಸ್ತೆಯೊಂದಿಗೆ ಮದುವೆಯಾಗಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಕೇರಳದ ಕೊಟ್ಟಿಯೂರ್​ನ ಅಪ್ರಾಪ್ತೆಯ ಮೇಲೆ ಚರ್ಚ್​ನ ಫಾದರ್ ಅತ್ಯಾಚಾರವೆಸಗಿದ್ದರು. ಬಳಿಕ ಆಕೆ ಮಗುವಿಗೆ ಜನ್ಮ ನೀಡಿದ್ದಳು. ಈ ಪ್ರಕರಣದಲ್ಲಿ ಈಗಾಗಲೇ ಆರೋಪಿಗೆ ಹೈಕೋರ್ಟ್​ನಿಂದ 20 ವರ್ಷಗಳ ಶಿಕ್ಷೆ ನೀಡಲಾಗಿದೆ. ಆದರೆ, ಆ ಶಿಕ್ಷೆಯನ್ನು ವಜಾಗೊಳಿಸಿ ಆತನನ್ನು ಬಿಡುಗಡೆ ಮಾಡಿದರೆ ನಾವಿಬ್ಬರೂ ಮದುವೆಯಾಗಲು ಬಯಸಿರುವುದಾಗಿ ಸಂತ್ರಸ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಳು.

ಈ ಹಿನ್ನೆಲೆಯಲ್ಲಿ ತನಗೆ ಜಾಮೀನು ನೀಡಬೇಕೆಂದು ಕ್ಯಾಥೋಲಿಕ್ ಚರ್ಚ್ ಮಾಜಿ ಫಾದರ್ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಕೂಡ ತಿರಸ್ಕರಿಸಿರುವ ನ್ಯಾಯಮೂರ್ತಿ ವಿನೀತ್ ಶರಣ್ ಮತ್ತು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರ ನ್ಯಾಯಪೀಠ ಆರೋಪಿಯ ಅರ್ಜಿಯನ್ನು ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಎಲ್ಲವನ್ನೂ ಗಮನಿಸಿ ಹೈಕೋರ್ಟ್​ ಆರೋಪಿಗೆ 20 ವರ್ಷಗಳ ಶಿಕ್ಷೆ ಘೋಷಿಸಿದೆ. ಹೀಗಾಗಿ, ಈ ಪ್ರಕರಣದಲ್ಲಿ ನಾವು ಮಧ್ಯ ಪ್ರವೇಶಿಸಲು ಬಯಸುವುದಿಲ್ಲ. ಹೈಕೋರ್ಟ್ ನೀಡಿರುವ ತೀರ್ಪು ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಅತ್ಯಾಚಾರವೆಸಗಿದ್ದ ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಇದೀಗ 53 ವರ್ಷವಾಗಿರುವ ಆರೋಪಿ 21 ವರ್ಷದ ಸಂತ್ರಸ್ತೆ ಅಪ್ರಾಪ್ತೆಯಾಗಿರುವಾಗಲೇ ಅತ್ಯಾಚಾರವೆಸಗಿದ್ದರು. ಇದರಿಂದ ಆಕೆ ಗರ್ಭಿಣಿಯಾಗಿದ್ದಳು. ಇದೀಗ ಆಕೆಯೇ ತನ್ನ ಮೇಲೆ ಅತ್ಯಾಚಾರವೆಸಗಿದವನನ್ನು ಬಿಡುಗಡೆಗೊಳಿಸಿ ಎಂದು ಹೇಳಿದರೂ ಆತನ ಶಿಕ್ಷೆ ಮುಗಿಯುವವರೆಗೂ ಅದು ಅಸಾಧ್ಯ ಎಂದು ಸಂತ್ರಸ್ತೆಯ ಮನವಿಯನ್ನು ಕೂಡ ತಿರಸ್ಕರಿಸಿದೆ. ಆ ಸಂತ್ರಸ್ತೆ ಟ್ರಯಲ್ ಕೋರ್ಟ್​ಗೆ ಅರ್ಜಿ ಸಲ್ಲಿಸಿ, ಆರೋಪಿಯನ್ನು ಮದುವೆಯಾಗಲು ಅನುಮತಿ ನೀಡುವಂತೆ ಮನವಿ ಮಾಡಬಹುದು ಎಂದು ಸಲಹೆ ನೀಡಿದೆ.

2017ರಲ್ಲಿ ಕೇರಳದಲ್ಲಿ ಈ ಅತ್ಯಾಚಾರ ಪ್ರಕರಣ ನಡೆದಿತ್ತು. ಆಗ ಸಂತ್ರಸ್ತೆಗೆ 18 ವರ್ಷ ತುಂಬಿರಲಿಲ್ಲ. ಆಕೆಯ ಮೇಲೆ ಕ್ಯಾಥೋಲಿಕ್ ಚರ್ಚ್ ಫಾದರ್ ಆಗಿದ್ದ ರಾಬಿನ್ ವಡಕ್ಕಾಂಚೇರಿ ಅತ್ಯಾಚಾರ ನಡೆಸಿದ್ದರು. ಆಗ ಆತನಿಗೆ 20 ವರ್ಷ ಜೈಲು ಶಿಕ್ಷೆ ಘೋಷಣೆಯಾಗಿತ್ತು. ಆದರೆ, ಯುವತಿ ಮಗುವಿಗೆ ಜನ್ಮ ನೀಡಿದ ಬಳಿಕ ಆ ಫಾದರ್​ನನ್ನು ಮದುವೆಯಾಗಲು ನಿರ್ಧರಿಸಿದ್ದಳು. ಇದಕ್ಕೆ ಆತನೂ ಒಪ್ಪಿಗೆ ನೀಡಿದ್ದ. ಹೀಗಾಗಿ, ಈ ಪ್ರಕರಣವನ್ನು ಖುಲಾಸೆ ಮಾಡಿ, ಆರೋಪಿಯನ್ನು ಬಿಡುಗಡೆ ಮಾಡಬೇಕೆಂದು ಆಕೆ ಕೇರಳ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಳು. ಅಲ್ಲಿ ಆಕೆಯ ಅರ್ಜಿ ತಿರಸ್ಕೃತಗೊಂಡಿದ್ದರಿಂದ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಳು. ಅಲ್ಲಿ ಕೂಡ ಆಕೆಯ ಅರ್ಜಿ ತಿರಸ್ಕೃತಗೊಂಡಿದೆ.

ಇದನ್ನೂ ಓದಿ: ಮದುವೆಗೆ ಒಪ್ಪದೆ ಅತ್ಯಾಚಾರಿ ಪರಾರಿ; ಪೊಲೀಸ್ ಠಾಣೆಯಲ್ಲೇ ಮಗುವಿಗೆ ಜನ್ಮ ಕೊಟ್ಟ 14 ವರ್ಷದ ಬಾಲಕಿ!

ಗೋವಾ ಸಾಮೂಹಿಕ ಅತ್ಯಾಚಾರ ಪ್ರಕರಣ: ಹೆಣ್ಣು ಮಕ್ಕಳು ರಾತ್ರಿ ಹೊರಗೆ ಹೋಗಿದ್ದೇಕೆ ಎಂದು ಕೇಳಿದ ಸಿಎಂ ಪ್ರಮೋದ್ ಸಾವಂತ್

(Supreme Court Dismisses Pleas Of Kerala Rape Survivor To Marry Her Assaulter Ex Catholic Priest)

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ