AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಶಾ ಫೌಂಡೇಷನ್​ಗೆ ಬಿಗ್​ ರಿಲೀಫ್​: ಶೋಕಾಸ್‌ ನೋಟಿಸ್‌ ರದ್ದತಿಯನ್ನು ಎತ್ತಿ ಹಿಡಿದ ಸುಪ್ರೀಂ

ಗುರು ಜಗ್ಗಿ ವಾಸುದೇವ್‌ ನಡೆಸುತ್ತಿರುವ ಈಶಾ ಫೌಂಡೇಶನ್​ಗೆ ಸುಪ್ರೀಂಕೋರ್ಟ್​ ಬಿಗ್ ರಿಲೀಫ್​ ನೀಡಿದೆ. ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಯು ಇಶಾ ಫೌಂಡೇಶನ್​ಗೆ ನೀಡಿದ್ದ ಶೋಕಾಸ್ ನೋಟಿಸ್ ಅನ್ನು ಮದ್ರಾಸ್ ಹೈಕೋರ್ಟ್​ ರದ್ದುಗೊಳಿಸಿತ್ತು. ಇದೀಗ ಮದ್ರಾಸ್ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಈಗ ಸುಪ್ರೀಂಕೋರ್ಟ್​ ಸಹ ಎತ್ತಿ ಹಿಡಿದೆ.

ಇಶಾ ಫೌಂಡೇಷನ್​ಗೆ ಬಿಗ್​ ರಿಲೀಫ್​: ಶೋಕಾಸ್‌ ನೋಟಿಸ್‌ ರದ್ದತಿಯನ್ನು ಎತ್ತಿ ಹಿಡಿದ ಸುಪ್ರೀಂ
Isha Foundation
TV9 Web
| Edited By: |

Updated on: Feb 28, 2025 | 10:12 PM

Share

ನವದೆಹಲಿ, (ಫೆಬ್ರವರಿ 28): ಅಧ್ಯಾತ್ಮಿಕ ಗುರು ಜಗ್ಗಿ ವಾಸುದೇವ್‌ ನಡೆಸುತ್ತಿರುವ ಇಶಾ ಫೌಂಡೇಶನ್‌ನ ಕೊಯಮತ್ತೂರು ಕ್ಯಾಂಪಸ್‌ನಲ್ಲಿ ನಿರ್ಮಾಣ ಚಟುವಟಿಕೆಗಳ ವಿರುದ್ಧ ನೀಡಲಾಗಿದ್ದ ಶೋಕಾಸ್ ನೋಟಿಸ್ ರದ್ದುಗೊಳಿಸಿ ಮದ್ರಾಸ್ ಹೈಕೋರ್ಟ್‌ 2022ರಲ್ಲಿ ಆದೇಶ ನೀಡಿತ್ತು. ಇದೀಗ ಆ ತೀರ್ಪುನ್ನು ಇಂದು (ಫೆಬ್ರವರಿ 28) ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿದೆ. ಇಶಾ ಫೌಂಡೇಷನ್‌ನ ಯೋಗ ಮತ್ತು ಧ್ಯಾನ ಕೇಂದ್ರಕ್ಕೆ ಸಂಬಂಧಿಸಿದಂತೆ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್‌ ಕೆ ಸಿಂಗ್ ಅವರ ಪೀಠವು ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಗೆ (ಟಿಎನ್‌ಸಿಪಿಬಿ) ಸೂಚಿಸಿ ಆದೇಶ ಹೊರಡಿಸಿದೆ.

ಇದೇ ವೇಳೆ, ತಾನು ಎಲ್ಲಾ ಕಾನೂನುಗಳನ್ನು ಪಾಲಿಸುವುದಾಗಿ ಇಶಾ ಫೌಂಡೇಶನ್ ನೀಡಿರುವ ಹೇಳಿಕೆಯನ್ನು ನ್ಯಾಯಾಲಯವು ದಾಖಲಿಸಿಕೊಂಡಿತು. ಭವಿಷ್ಯದಲ್ಲಿ ವಿಸ್ತರಣಾ ಚಟುವಟಿಕೆ ಅಗತ್ಯವಿದ್ದಲ್ಲಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಸೂಚಿಸಿದೆ.

ಕೊಯಮತ್ತೂರಿನಲ್ಲಿ ಇಶಾ ಕೇಂದ್ರದ ಆವರಣದಲ್ಲಿ 2006 ರಿಂದ 2014ರಲ್ಲಿ ಅನುಮತಿ ಪಡೆಯದೆ ನಿರ್ಮಾಣ ಚಟುವಟಿಕೆಗಳನ್ನು ಕೈಗೊಂಡಿದ್ದಕ್ಕಾಗಿ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಯು ಇಶಾ ಫೌಂಡೇಶನ್‌ಗೆ 2021ರಲ್ಲಿ ಶೋಕಾಸ್ ನೋಟಿಸ್ ನೀಡಿತ್ತು. ಇದನ್ನು 2022ರ ಡಿಸೆಂಬರ್‌ನಲ್ಲಿ ಮದ್ರಾಸ್‌ ಹೈಕೋರ್ಟ್‌ ರದ್ದುಪಡಿಸಿತ್ತು.

ಶೋಕಾಸ್‌ ನೋಟಿಸ್‌ ರದ್ದುಪಡಿಸುವ ವೇಳೆ ಮದ್ರಾಸ್ ಹೈಕೋರ್ಟ್ ಇಶಾ ಫೌಂಡೇಶನ್ ಸಾಮೂಹಿಕ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಯೋಗ ಕೇಂದ್ರವನ್ನು ನಡೆಸುವುದರಿಂದ, ಅದನ್ನು ಶಿಕ್ಷಣ ಸಂಸ್ಥೆ ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ, ನಿರ್ಮಾಣ ಚಟುವಟಿಕೆಗಳಿಗೆ ಪೂರ್ವಭಾವಿ ಅನುಮತಿಯನ್ನು ಕೋರುವ ನಿಯಮಾವಳಿಗಳಿಗೆ ಕೇಂದ್ರ ಸರ್ಕಾರವು ನೀಡಿರುವ ವಿನಾಯತಿಗೆ ಅರ್ಹವಾಗಿದೆ ಎಂದು ಹೇಳಿತ್ತು. ಈ ತೀರ್ಪನ್ನು ಇದೀಗ ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ