AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ, ಹರಿಯಾಣದಲ್ಲಿ ಪಟಾಕಿ ಮೇಲಿನ ನಿಷೇಧ ವಿಸ್ತರಿಸಿದ ಸುಪ್ರೀಂ ಕೋರ್ಟ್ 

ಎನ್‌ಸಿಆರ್‌ನ ಭಾಗವಾಗಿರುವ ಎಲ್ಲಾ ರಾಜ್ಯಗಳು ದೆಹಲಿ ಸರ್ಕಾರ ಮತ್ತು ರಾಜಸ್ಥಾನ ಸರ್ಕಾರ ವಿಧಿಸಿರುವ ಪಟಾಕಿ ನಿಷೇಧವನ್ನು ಅನುಸರಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ. NCR ಪ್ರದೇಶದ ಅಡಿಯಲ್ಲಿ ಬರುವ ಪ್ರದೇಶಗಳಲ್ಲಿಯೂ ಪಟಾಕಿಗಳ ಮೇಲೆ ಶಾಶ್ವತ ನಿಷೇಧವನ್ನು ವಿಧಿಸಲು ಉತ್ತರ ಪ್ರದೇಶ ಮತ್ತು ಹರಿಯಾಣ ಸರ್ಕಾರಗಳು ನಿರ್ಧರಿಸಿದಾಗ ಮಾತ್ರ ವರ್ಷವಿಡೀ ಪಟಾಕಿಗಳ ಬಳಕೆಯ ಮೇಲಿನ ಸಂಪೂರ್ಣ ನಿಷೇಧವು ಪರಿಣಾಮಕಾರಿಯಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಕಳೆದ ವರ್ಷ ಡಿಸೆಂಬರ್ 19ರಂದು ಹೇಳಿತ್ತು.

ಉತ್ತರ ಪ್ರದೇಶ, ಹರಿಯಾಣದಲ್ಲಿ ಪಟಾಕಿ ಮೇಲಿನ ನಿಷೇಧ ವಿಸ್ತರಿಸಿದ ಸುಪ್ರೀಂ ಕೋರ್ಟ್ 
Firecrackers
ಸುಷ್ಮಾ ಚಕ್ರೆ
|

Updated on: Jan 17, 2025 | 7:08 PM

Share

ನವದೆಹಲಿ: ಸುಪ್ರೀಂ ಕೋರ್ಟ್ ಇಂದು (ಜನವರಿ 17) ಎನ್​ಸಿಆರ್​ ಅಡಿಯಲ್ಲಿ ಬರುವ ಉತ್ತರ ಪ್ರದೇಶ ಮತ್ತು ಹರಿಯಾಣ ಜಿಲ್ಲೆಗಳಲ್ಲಿ ಪಟಾಕಿಗಳ ಬಳಕೆಯ ಮೇಲಿನ ಸಂಪೂರ್ಣ ನಿಷೇಧವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿದೆ. ದೆಹಲಿ ಮತ್ತು NCRನಲ್ಲಿ ವಾಯು ಮಾಲಿನ್ಯಕ್ಕೆ ಸಂಬಂಧಿಸಿದ ವಿಷಯದ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಪಟಾಕಿಗಳ ಮೇಲಿನ ಸಂಪೂರ್ಣ ನಿಷೇಧವನ್ನು ವಿಸ್ತರಿಸಿದೆ.

ಉತ್ತರ ಪ್ರದೇಶ ಸರ್ಕಾರ ಇಂದಿನವರೆಗೆ (ಜನವರಿ 17) ಎಲ್ಲಾ ರೀತಿಯ ಪಟಾಕಿಗಳ ಬಳಕೆಯ ಮೇಲೆ ಸಂಪೂರ್ಣ ನಿಷೇಧ ಹೇರಿತ್ತು. ಆದ್ದರಿಂದ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿದೆ ಎಂದು ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿದೆ. ಪಟಾಕಿಗಳ ಮೇಲೆ ತಾತ್ಕಾಲಿಕ ನಿಷೇಧವನ್ನು ಕೋರಿಲ್ಲ. ದೆಹಲಿ ಸರ್ಕಾರದ ಮಾದರಿಯಲ್ಲಿ ಶಾಶ್ವತ ನಿಷೇಧವನ್ನು ಪರಿಗಣಿಸಲು ನಿರ್ದೇಶಿಸಲಾಗಿದೆ ಎಂದು ನ್ಯಾಯಪೀಠವು ಉತ್ತರ ಪ್ರದೇಶದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಅವರನ್ನು ಕೇಳಿತು.

ಇದನ್ನೂ ಓದಿ: ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ; ಉತ್ತರ ಪ್ರದೇಶ, ಹರಿಯಾಣದಲ್ಲಿ ಪಟಾಕಿ ಸಂಪೂರ್ಣ ಬ್ಯಾನ್

ಇಂದಿನವರೆಗೆ ಜಾರಿಯಲ್ಲಿದ್ದ ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳು NCR ಭಾಗಗಳಿಗೆ ವಿಧಿಸಿರುವ ನಿಷೇಧವನ್ನು ಮುಂದಿನ ಆದೇಶಗಳು ಜಾರಿಗೆ ಬರುವವರೆಗೆ ವಿಸ್ತರಿಸಲಾಗಿದೆ.

NCRನ ಭಾಗವಾಗಿರುವ ಎಲ್ಲಾ ರಾಜ್ಯಗಳು ದೆಹಲಿ ಸರ್ಕಾರ ಮತ್ತು ರಾಜಸ್ಥಾನ ಸರ್ಕಾರ ವಿಧಿಸಿರುವ ನಿಷೇಧವನ್ನು ಅನುಸರಿಸಿದಾಗ ಮತ್ತು NCR ಪ್ರದೇಶದ ಅಡಿಯಲ್ಲಿ ಬರುವ ಪ್ರದೇಶಗಳಲ್ಲಿ ಇದೇ ರೀತಿಯ ಶಾಶ್ವತ ನಿಷೇಧವನ್ನು ವಿಧಿಸಲು ಉತ್ತರ ಪ್ರದೇಶ ಮತ್ತು ಹರಿಯಾಣ ಸರ್ಕಾರಗಳನ್ನು ಕೇಳಿದಾಗ ಮಾತ್ರ ವರ್ಷವಿಡೀ ಪಟಾಕಿಗಳ ಬಳಕೆಯ ಮೇಲಿನ ಸಂಪೂರ್ಣ ನಿಷೇಧವು ಪರಿಣಾಮಕಾರಿಯಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಕಳೆದ ವರ್ಷ ಡಿಸೆಂಬರ್ 19ರಂದು ಹೇಳಿತ್ತು.

ಇದನ್ನೂ ಓದಿ: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 6 ಕಾರ್ಮಿಕರು ಸಾವು

ವಾಯು ಮಾಲಿನ್ಯವನ್ನು ತಡೆಗಟ್ಟಲು ಮಾತ್ರವಲ್ಲದೆ ಶಬ್ದ ಮಾಲಿನ್ಯವನ್ನೂ ತಡೆಯಲು ಪಟಾಕಿಗಳ ಮೇಲೆ ನಿಷೇಧ ಹೇರುವುದು ಅಗತ್ಯ ಎಂದು ಹೇಳುತ್ತಾ ವರ್ಷವಿಡೀ ಪಟಾಕಿಗಳ ಬಳಕೆಯ ಮೇಲೆ ಸಂಪೂರ್ಣ ನಿಷೇಧವನ್ನು ಪರಿಗಣಿಸಲು ಮತ್ತು ಈ ನಿಟ್ಟಿನಲ್ಲಿ ತಮ್ಮ ನಿರ್ಧಾರಗಳನ್ನು ತನ್ನ ಮುಂದೆ ಇಡಲು ಸುಪ್ರೀಂ ಕೋರ್ಟ್ ಈ ಹಿಂದೆ NCR ರಾಜ್ಯಗಳಿಗೆ ನಿರ್ದೇಶನ ನೀಡಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ