AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರಕ್ಕಾಗಿ ಸಮಯ ನಿಗದಿಪಡಿಸಿದ ಸುಪ್ರೀಂ ಕೋರ್ಟ್​

ಮಾರ್ಚ್ 20ರ ಮೊದಲು ಸಂಭವಿಸಿದ ಸಾವುಗಳಿಗೆ ಕ್ಲೇಮ್‌ಗಳನ್ನು 60 ದಿನಗಳಲ್ಲಿ ಸಲ್ಲಿಸಬೇಕು. ಆದರೆ, ಮಾರ್ಚ್​ 20ರ ನಂತರದ ಸಾವುಗಳಿಗೆ ಎಕ್ಸ್ ಗ್ರೇಷಿಯಾವನ್ನು ಸಲ್ಲಿಸಲು 90 ದಿನಗಳ ಸಮಯವನ್ನು ನೀಡಲಾಗಿದೆ.

ಕೊವಿಡ್​ನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರಕ್ಕಾಗಿ ಸಮಯ ನಿಗದಿಪಡಿಸಿದ ಸುಪ್ರೀಂ ಕೋರ್ಟ್​
ಸುಪ್ರೀಂಕೋರ್ಟ್
TV9 Web
| Updated By: ಸುಷ್ಮಾ ಚಕ್ರೆ|

Updated on:Apr 11, 2022 | 2:45 PM

Share

ನವದೆಹಲಿ: ಕೊವಿಡ್​ನಿಂದ (COVID-19) ಸಾವನ್ನಪ್ಪಿರುವವರ ಕುಟುಂಬಸ್ಥರು ಪರಿಹಾರಕ್ಕಾಗಿ ಕ್ಲೇಮ್ ಮಾಡಲು ಸುಪ್ರೀಂ ಕೋರ್ಟ್ (Supreme Court) ಸಮಯವನ್ನು ನಿಗದಿಪಡಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಮಾರ್ಚ್ 20ರ ಮೊದಲು ಸಂಭವಿಸಿದ ಕೊವಿಡ್ ಸಾವುಗಳಿಗೆ ಕ್ಲೇಮ್‌ಗಳನ್ನು 60 ದಿನಗಳಲ್ಲಿ ಸಲ್ಲಿಸಬೇಕು. ಆದರೆ, ಮಾರ್ಚ್​ 20ರ ನಂತರದ ಸಾವುಗಳಿಗೆ ಎಕ್ಸ್ ಗ್ರೇಷಿಯಾವನ್ನು ಸಲ್ಲಿಸಲು 90 ದಿನಗಳ ಸಮಯವನ್ನು ನೀಡಲಾಗಿದೆ. ಕ್ಲೇಮ್‌ಗಳನ್ನು ಪ್ರಕ್ರಿಯೆಗೊಳಿಸಲು ಮತ್ತು ಕ್ಲೇಮ್‌ನ ಸ್ವೀಕೃತಿಯ ದಿನಾಂಕದಿಂದ 30 ದಿನಗಳ ಅವಧಿಯೊಳಗೆ ಪರಿಹಾರದ ಪಾವತಿಯನ್ನು ಮಾಡಲು ಹಿಂದಿನ ಆದೇಶವನ್ನು ಜಾರಿಗೊಳಿಸುವುದನ್ನು ಮುಂದುವರಿಸಲಾಗುತ್ತದೆ.

ಆದರೆ, ಯಾವುದೇ ಹಕ್ಕುದಾರರು ನಿಗದಿತ ಸಮಯದೊಳಗೆ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗದಿದ್ದರೆ ಹಕ್ಕುದಾರರು ಕುಂದುಕೊರತೆ ಪರಿಹಾರ ಸಮಿತಿಯನ್ನು ಸಂಪರ್ಕಿಸಬಹುದು. ಅದನ್ನು ಪರಿಗಣಿಸುವ ಪ್ಯಾನೆಲ್ ಮೂಲಕ ಕ್ಲೇಮ್ ಮಾಡಲು ನ್ಯಾಯಾಲಯವು ನಿರ್ದೇಶಿಸಿದೆ. ಪ್ರಕರಣದ ಆಧಾರದ ಮೇಲೆ, ಮತ್ತು ನಿರ್ದಿಷ್ಟ ಹಕ್ಕುದಾರರು ನಿಗದಿತ ಸಮಯದೊಳಗೆ ಹಕ್ಕು ಸಲ್ಲಿಸಲು ಸಾಧ್ಯವಾಗಲಿಲ್ಲ ಎಂಬುದು ಸಮಿತಿಯ ಗಮನಕ್ಕೆ ಬಂದರೆ ಅರ್ಹತೆಯ ಆಧಾರದಲ್ಲಿ ಆ ಪ್ರಕರಣವನ್ನು ಪರಿಗಣಿಸಬಹುದು ಎಂದು ಸರ್ಕಾರ ಹೇಳಿದೆ.

ಇದಲ್ಲದೆ, ನಕಲಿ ಕ್ಲೇಮ್‌ಗಳ ಅಪಾಯವನ್ನು ಕಡಿಮೆ ಮಾಡುವ ಸಲುವಾಗಿ ಕ್ಲೇಮ್ ಅರ್ಜಿಗಳ ಶೇ.5ರಷ್ಟು ಪರಿಶೀಲನೆಯನ್ನು ಮೊದಲ ನಿದರ್ಶನದಲ್ಲಿ ಮಾಡಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ. ಯಾರಾದರೂ ನಕಲಿ ಕ್ಲೈಮ್ ಮಾಡಿರುವುದು ಕಂಡುಬಂದರೆ DM ಆಕ್ಟ್, 2005ರ ಸೆಕ್ಷನ್ 52ರ ಅಡಿಯಲ್ಲಿ ಪರಿಗಣಿಸಲಾಗುತ್ತದೆ. ಅದಕ್ಕೆ ಅನುಗುಣವಾಗಿ ಶಿಕ್ಷೆಗೆ ಗುರಿಯಾಗುತ್ತಾರೆ.

861 ಹೊಸ ಪ್ರಕರಣಗಳೊಂದಿಗೆ ಭಾರತದ ಕೋವಿಡ್-19 ಸಂಖ್ಯೆ 4,30,36,132ಕ್ಕೆ ಏರಿದೆ. ಆದರೆ, ಕೊವಿಡ್ ರೋಗದ ಸಾವಿನ ಸಂಖ್ಯೆ 5,21,691ಕ್ಕೆ ಏರಿದೆ. 6 ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ. ಆದರೆ, ಕೊವಿಡ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 11,058ಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳು ಒಟ್ಟು ಕ್ಯಾಸೆಲೋಡ್‌ನ ಶೇ. 0.03ರಷ್ಟಿದ್ದರೆ ರಾಷ್ಟ್ರೀಯ ಚೇತರಿಕೆ ದರವು ಶೇ. 98.76ರಷ್ಟಿದೆ.

ಇದನ್ನೂ ಓದಿ: ಕೊವಿಡ್​ 19 ಲಸಿಕೆ 2ನೇ ಡೋಸ್​ ಪಡೆದು 9 ತಿಂಗಳು ಕಳೆದವರೆಲ್ಲ 3ನೇ ಡೋಸ್​ಗೆ ಸಿದ್ಧರಾಗಿ; ಈ ವಿಚಾರಗಳು ನಿಮ್ಮ ಗಮನದಲ್ಲಿರಲಿ

ಏಪ್ರಿಲ್ 10 ರಿಂದ ಎಲ್ಲಾ ವಯಸ್ಕರಿಗೆ ಕೊವಿಡ್ ಬೂಸ್ಟರ್ ಡೋಸ್‌: ಆರೋಗ್ಯ ಸಚಿವಾಲಯ

Published On - 2:44 pm, Mon, 11 April 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!