AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court: ಬಲವಂತದ ಮತಾಂತರ ರಾಷ್ಟ್ರೀಯ ಭದ್ರತೆ ಮೇಲೆ ಪರಿಣಾಮ ಬೀರಬಹುದು, ತುರ್ತು ಕ್ರಮಕ್ಕೆ ಸುಪ್ರೀಂ ಸೂಚನೆ

ಬಲವಂತದ ಧಾರ್ಮಿಕ ಮತಾಂತರವು ರಾಷ್ಟ್ರೀಯ ಸುರಕ್ಷತೆ, ಧರ್ಮದ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವುದು. ಇದು ಬಹಳ ಗಂಭೀರ ಸಮಸ್ಯೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

Supreme Court: ಬಲವಂತದ ಮತಾಂತರ ರಾಷ್ಟ್ರೀಯ ಭದ್ರತೆ ಮೇಲೆ ಪರಿಣಾಮ ಬೀರಬಹುದು, ತುರ್ತು ಕ್ರಮಕ್ಕೆ ಸುಪ್ರೀಂ ಸೂಚನೆ
ಸುಪ್ರೀಂ ಕೋರ್ಟ್
TV9 Web
| Edited By: |

Updated on:Nov 14, 2022 | 4:26 PM

Share

ದೆಹಲಿ: ಬಲವಂತದ ಧಾರ್ಮಿಕ ಮತಾಂತರವು ರಾಷ್ಟ್ರೀಯ ಸುರಕ್ಷತೆ, ಧರ್ಮದ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವುದು. ಇದು ಬಹಳ ಗಂಭೀರ ಸಮಸ್ಯೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಇಂತಹ ಬಲವಂತದ ಮತಾಂತರಗಳನ್ನು ತಡೆಯಲು ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ.

ಏನಿದು ಪ್ರಕರಣ?

ನ್ಯಾಯಾಧೀಶರಾದ ಎಂಆರ್ ಶಾ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆ ನಡೆಸುತ್ತಿದೆ, ಬೆದರಿಕೆಯ ಮೂಲಕ ಮತ್ತು ಉಡುಗೊರೆಗಳು ಮತ್ತು ವಿತ್ತೀಯ ಪ್ರಯೋಜನಗಳ ಮೂಲಕ ಜನರನ್ನು ಆಮಿಷವೊಡ್ಡುವ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರವನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನಗಳನ್ನು ಕೋರಿದೆ.

ಇಂತಹ ಬಲವಂತದ ಧಾರ್ಮಿಕ ಮತಾಂತರವನ್ನು ಅತ್ಯಂತ ಗಂಭೀರ ವಿಷಯ ಎಂದು ಕರೆದ ಪೀಠ, ಪರಿಸ್ಥಿತಿ ಕಷ್ಟಕರವಾಗುವ ಮುನ್ನವೇ ಅವುಗಳನ್ನು ತಡೆಯಲು ಕೇಂದ್ರ ಮುಂದಾಗಬೇಕು ಎಂದು ಹೇಳಿದೆ.

ಬಲವಂತದ ಮತಾಂತರವು ರಾಷ್ಟ್ರದ ಭದ್ರತೆಯ ಮೇಲೂ ಪರಿಣಾಮ ಬೀರಬಹುದು. ಹೀಗಾಗಿ ಬಲವಂತದ ಮತಾಂತರವನ್ನು ನಿಲ್ಲಿಸಲು ಕೇಂದ್ರವು ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂಬುದರ ಬಗ್ಗೆ ಕೇಂದ್ರವು ತನ್ನ ನಿಲುವನ್ನು ಸ್ಪಷ್ಟಪಡಿಸಿದರೆ ಉತ್ತಮ ಎಂದು ನ್ಯಾಯಮೂರ್ತಿ ಎಂಆರ್ ಶಾ ಹೇಳಿದರು. ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 28 ರಂದು ನಿಗದಿಪಡಿಸಲಾಗಿದೆ.

Published On - 4:26 pm, Mon, 14 November 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ