AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊವಿಡ್ ಪಾಸಿಟಿವ್ ದೃಢ

ಸುಪ್ರೀಂಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳಿಗೂ ಕೊವಿಡ್ ಪಾಸಿಟಿವ್ ದೃಢಪಟ್ಟಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಸೋಮವಾರ ವರ್ಚುವಲ್ ಮೂಲಕ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಸಲಾಗುವುದು.

ಸುಪ್ರೀಂ ಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊವಿಡ್ ಪಾಸಿಟಿವ್ ದೃಢ
ಸುಪ್ರೀಂಕೋರ್ಟ್​
TV9 Web
| Edited By: |

Updated on: Jan 08, 2022 | 9:30 PM

Share

ನವದೆಹಲಿ: ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳಿಗೆ ಭಾರೀ ಬಿಗಿಭದ್ರತೆ ಇರುತ್ತದೆ ಎಂಬುದು ಗೊತ್ತಿಲ್ಲದ ವಿಚಾರವೇನಲ್ಲ. ಆದರೆ, ಕಟ್ಟುನಿಟ್ಟಿನ ನಿಗಾದಲ್ಲಿದ್ದ ಸುಪ್ರೀಂಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳಿಗೂ ಕೊವಿಡ್ ಪಾಸಿಟಿವ್ ದೃಢಪಟ್ಟಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಸೋಮವಾರ ವರ್ಚುವಲ್ ಮೂಲಕ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಸಲಾಗುವುದು. ಹಾಗೇ, ತೀವ್ರ ತುರ್ತಾಗಿ ನಡೆಸಬೇಕಾದ ಪ್ರಕರಣಗಳ ವಿಚಾರಣೆಯನ್ನು ಮಾತ್ರ ಈ ಅವಧಿಯಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.

ಒಂದೆಡೆ ಭಾರತದಲ್ಲಿ ಕೊವಿಡ್ ಕೇಸುಗಳು ಹೆಚ್ಚಾಗುತ್ತಿದ್ದು, ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ. ಇನ್ನೊಂದೆಡೆ ಸಚಿವರು, ಶಾಸಕರು, ಸಂಸದರು, ಐಎಎಸ್​-ಐಪಿಎಸ್ ಅಧಿಕಾರಿಗಳು, ಸೆಲೆಬ್ರಿಟಿಗಳು ಸೇರಿದಂತೆ ಗಣ್ಯರಿಗೂ ಕೊರೊನಾ ಸೋಂಕು ತಗುಲುತ್ತಿದೆ. ಇದೀಗ ಸುಪ್ರೀಂಕೋರ್ಟ್​ ನ್ಯಾಯಮೂರ್ತಿಗಳಿಗೂ ಕೊವಿಡ್ ವೈರಸ್ ತಗುಲಿದೆ.

ಕೊವಿಡ್ ಸೋಂಕು ತಗುಲಿರುವ ಸುಪ್ರೀಂ ಕೋರ್ಟ್​ನ ನಾಲ್ವರು ಜಡ್ಜ್​ಗಳ ಪೈಕಿ ಓರ್ವ ನ್ಯಾಯಮೂರ್ತಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನುಳಿದ ಮೂವರು ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ. ಜನವರಿ 10ರಿಂದ ಸುಪ್ರೀಂ ಕೋರ್ಟ್​ನ ವಿಚಾರಣೆಗಳು ವಿಡಿಯೋ ಕಾನ್ಫೆರನ್ಸ್ ಮೂಲಕ ನಡೆಯಲಿದೆ.

ಸುಪ್ರೀಂ ಕೋರ್ಟ್​ ಮಾತ್ರವಲ್ಲದೆ ಹಲವು ರಾಜ್ಯಗಳ ಹೈಕೋರ್ಟ್​ಗಳ ನ್ಯಾಯಮೂರ್ತಿಗಳಿಗೆ ಕೂಡ ಕೊರೊನಾವೈರಸ್​ ದೃಢಪಟ್ಟಿದೆ. ಬಾಂಬೆ ಹೈಕೋರ್ಟ್, ಕಲ್ಕತ್ತಾ ಹೈಕೋರ್ಟ್, ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಹೀಗಾಗಿ, ಹೈಕೋರ್ಟ್​ಗಳಲ್ಲೂ ವರ್ಚುವಲ್ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೊಂದು ಹೆಮ್ಮೆ; ಕೊವಿಡ್ ವಾರ್ ರೂಂ ಮುಖ್ಯಸ್ಥ ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್​ಗೆ ರಾಷ್ಟ್ರ ಪ್ರಶಸ್ತಿ

ಕೊರೊನಾ ತಗುಲುವ ಭೀತಿಯಲ್ಲಿ ಕೊವಿಡ್​ ಸೋಂಕಿತ ಮಗನನ್ನು ಕಾರ್ ಡಿಕ್ಕಿಯೊಳಗೆ ಲಾಕ್ ಮಾಡಿದ ತಾಯಿ!

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ