AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊವಿಡ್ ಪಾಸಿಟಿವ್ ದೃಢ

ಸುಪ್ರೀಂಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳಿಗೂ ಕೊವಿಡ್ ಪಾಸಿಟಿವ್ ದೃಢಪಟ್ಟಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಸೋಮವಾರ ವರ್ಚುವಲ್ ಮೂಲಕ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಸಲಾಗುವುದು.

ಸುಪ್ರೀಂ ಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊವಿಡ್ ಪಾಸಿಟಿವ್ ದೃಢ
ಸುಪ್ರೀಂಕೋರ್ಟ್​
TV9 Web
| Edited By: |

Updated on: Jan 08, 2022 | 9:30 PM

Share

ನವದೆಹಲಿ: ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳಿಗೆ ಭಾರೀ ಬಿಗಿಭದ್ರತೆ ಇರುತ್ತದೆ ಎಂಬುದು ಗೊತ್ತಿಲ್ಲದ ವಿಚಾರವೇನಲ್ಲ. ಆದರೆ, ಕಟ್ಟುನಿಟ್ಟಿನ ನಿಗಾದಲ್ಲಿದ್ದ ಸುಪ್ರೀಂಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳಿಗೂ ಕೊವಿಡ್ ಪಾಸಿಟಿವ್ ದೃಢಪಟ್ಟಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಸೋಮವಾರ ವರ್ಚುವಲ್ ಮೂಲಕ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಸಲಾಗುವುದು. ಹಾಗೇ, ತೀವ್ರ ತುರ್ತಾಗಿ ನಡೆಸಬೇಕಾದ ಪ್ರಕರಣಗಳ ವಿಚಾರಣೆಯನ್ನು ಮಾತ್ರ ಈ ಅವಧಿಯಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.

ಒಂದೆಡೆ ಭಾರತದಲ್ಲಿ ಕೊವಿಡ್ ಕೇಸುಗಳು ಹೆಚ್ಚಾಗುತ್ತಿದ್ದು, ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ. ಇನ್ನೊಂದೆಡೆ ಸಚಿವರು, ಶಾಸಕರು, ಸಂಸದರು, ಐಎಎಸ್​-ಐಪಿಎಸ್ ಅಧಿಕಾರಿಗಳು, ಸೆಲೆಬ್ರಿಟಿಗಳು ಸೇರಿದಂತೆ ಗಣ್ಯರಿಗೂ ಕೊರೊನಾ ಸೋಂಕು ತಗುಲುತ್ತಿದೆ. ಇದೀಗ ಸುಪ್ರೀಂಕೋರ್ಟ್​ ನ್ಯಾಯಮೂರ್ತಿಗಳಿಗೂ ಕೊವಿಡ್ ವೈರಸ್ ತಗುಲಿದೆ.

ಕೊವಿಡ್ ಸೋಂಕು ತಗುಲಿರುವ ಸುಪ್ರೀಂ ಕೋರ್ಟ್​ನ ನಾಲ್ವರು ಜಡ್ಜ್​ಗಳ ಪೈಕಿ ಓರ್ವ ನ್ಯಾಯಮೂರ್ತಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನುಳಿದ ಮೂವರು ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ. ಜನವರಿ 10ರಿಂದ ಸುಪ್ರೀಂ ಕೋರ್ಟ್​ನ ವಿಚಾರಣೆಗಳು ವಿಡಿಯೋ ಕಾನ್ಫೆರನ್ಸ್ ಮೂಲಕ ನಡೆಯಲಿದೆ.

ಸುಪ್ರೀಂ ಕೋರ್ಟ್​ ಮಾತ್ರವಲ್ಲದೆ ಹಲವು ರಾಜ್ಯಗಳ ಹೈಕೋರ್ಟ್​ಗಳ ನ್ಯಾಯಮೂರ್ತಿಗಳಿಗೆ ಕೂಡ ಕೊರೊನಾವೈರಸ್​ ದೃಢಪಟ್ಟಿದೆ. ಬಾಂಬೆ ಹೈಕೋರ್ಟ್, ಕಲ್ಕತ್ತಾ ಹೈಕೋರ್ಟ್, ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಹೀಗಾಗಿ, ಹೈಕೋರ್ಟ್​ಗಳಲ್ಲೂ ವರ್ಚುವಲ್ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೊಂದು ಹೆಮ್ಮೆ; ಕೊವಿಡ್ ವಾರ್ ರೂಂ ಮುಖ್ಯಸ್ಥ ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್​ಗೆ ರಾಷ್ಟ್ರ ಪ್ರಶಸ್ತಿ

ಕೊರೊನಾ ತಗುಲುವ ಭೀತಿಯಲ್ಲಿ ಕೊವಿಡ್​ ಸೋಂಕಿತ ಮಗನನ್ನು ಕಾರ್ ಡಿಕ್ಕಿಯೊಳಗೆ ಲಾಕ್ ಮಾಡಿದ ತಾಯಿ!

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು