AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ ಧಾಮ್ ರಸ್ತೆ ಯೋಜನೆ: ಭದ್ರತೆಯ ದೃಷ್ಟಿಯಿಂದ ರಸ್ತೆ ಅಗಲೀಕರಣಕ್ಕೆ ಸುಪ್ರೀಂಕೋರ್ಟ್ ಅನುಮತಿ

Char Dham road project ನ್ಯಾಯಾಲಯವು ನ್ಯಾಯಾಂಗ ಪರಿಶೀಲನೆಯ ಪ್ರಕ್ರಿಯೆಯಲ್ಲಿ ಸೈನ್ಯದ ಅವಶ್ಯಕತೆಗಳನ್ನು ಎರಡನೆಯದಾಗಿ ಊಹಿಸಲು ಸಾಧ್ಯವಿಲ್ಲ" ಎಂದು ಹೇಳಿದೆ.  "ಮೂರು ಆಯಕಟ್ಟಿನ ಹೆದ್ದಾರಿಗಳಿಗೆ ಡಬಲ್-ಲೇನ್ ಹೆದ್ದಾರಿಗಳಿಗಾಗಿ ರಕ್ಷಣಾ ಸಚಿವಾಲಯದ ಅರ್ಜಿಯನ್ನು ನಾವು ಅನುಮತಿಸುತ್ತೇವೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ಚಾರ್ ಧಾಮ್ ರಸ್ತೆ ಯೋಜನೆ: ಭದ್ರತೆಯ ದೃಷ್ಟಿಯಿಂದ ರಸ್ತೆ ಅಗಲೀಕರಣಕ್ಕೆ  ಸುಪ್ರೀಂಕೋರ್ಟ್ ಅನುಮತಿ
ಸುಪ್ರೀಂ ಕೋರ್ಟ್
TV9 Web
| Edited By: |

Updated on: Dec 14, 2021 | 4:43 PM

Share

ದೆಹಲಿ: ಚೀನಾದೊಂದಿಗಿನ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ(Line of Actual Control) ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಭದ್ರತಾ ಹಿತಾಸಕ್ತಿಗಳನ್ನು ಪೂರೈಸಲು ಚಾರ್ ಧಾಮ್ ಹೆದ್ದಾರಿಯನ್ನು (Char Dham highway) ವಿಸ್ತರಿಸಲು ಅನುಮತಿಸುವ ರಕ್ಷಣಾ ಸಚಿವಾಲಯದ (Defence Ministry)ಮನವಿಯನ್ನು ಸುಪ್ರೀಂಕೋರ್ಟ್  (Supreme Court)ಮಂಗಳವಾರ ಪುರಸ್ಕರಿಸಿದೆ. ನೇರವಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಮೇಲುಸ್ತುವಾರಿ ಸಮಿತಿಯನ್ನೂ ರಚಿಸಲಾಗಿದೆ. ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಮ್ ನಾಥ್ ಅವರ ಪೀಠವು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ (MoRTH) ಚಾರ್ ಧಾಮ್ ರಸ್ತೆ ಯೋಜನೆಯ ಅನುಷ್ಠಾನದಲ್ಲಿ ಗುಡ್ಡಗಾಡು ಪ್ರದೇಶದ ರಸ್ತೆಗಳ ಅಗಲದ ಕುರಿತು 2018 ರ ಸುತ್ತೋಲೆಗೆ ಬದ್ಧವಾಗಿರುವಂತೆ ಕೇಳಿರುವ ಸುಪ್ರೀಂಕೋರ್ಟ್ ನ ಸೆಪ್ಟೆಂಬರ್ 8, 2020 ರ ಆದೇಶವನ್ನು ಮಾರ್ಪಡಿಸುವಂತೆ ರಕ್ಷಣಾ ಸಚಿವಾಲಯ ಸಲ್ಲಿಸಿದ ಅರ್ಜಿಯನ್ನು ಅಂಗೀಕರಿಸಿತು. 2018 ರ ಮಾರ್ಗಸೂಚಿಗಳು ಹೆದ್ದಾರಿಗಳಿಗೆ 5.5 ಮೀಟರ್ ಅಗಲದ ಟಾರ್ ರಸ್ತೆಯನ್ನು ಸೂಚಿಸುತ್ತವೆ. ಭದ್ರತಾ ಕಾಳಜಿಗಳನ್ನು ಪೂರೈಸಲು ಮತ್ತು ಬ್ರಹ್ಮೋಸ್ ಕ್ಷಿಪಣಿ ರೆಜಿಮೆಂಟ್‌ಗಳಂತಹ ಕಾರ್ಯತಂತ್ರದ ಶಸ್ತ್ರಾಸ್ತ್ರಗಳ ಚಲನೆಗೆ ನಿಗದಿತ ಅಗಲವು ಸಾಕಾಗುವುದಿಲ್ಲ ಎಂದು ರಕ್ಷಣಾ ಸಚಿವಾಲಯ (MoD) ಭಾವಿಸಿದ್ದು ತ್ತು ಅದನ್ನು 10 ಮೀಟರ್‌ಗೆ ಮಾರ್ಪಡಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿತು.

ಅರ್ಜಿಯ ವಿಚಾರಣೆ ನಡೆಸಿದ ಪೀಠವು ಅದರಲ್ಲಿ ಯಾವುದೇ ಅವ್ಯವಹಾರ ಕಂಡುಬಂದಿಲ್ಲ ಎಂದು ಹೇಳಿದೆ. ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ಅಗತ್ಯತೆಗಳನ್ನು ವಿನ್ಯಾಸಗೊಳಿಸಲು ರಕ್ಷಣಾ ಸಚಿವಾಲಯ ಅಧಿಕಾರ ಹೊಂದಿದೆ ಎಂದು ತಿಳಿಸಿದ ನ್ಯಾಯಾಲಯ, ಭದ್ರತಾ ಸಮಿತಿಯ ಸಭೆಯಲ್ಲಿ ಎದ್ದಿರುವ ಭದ್ರತಾ ಕಾಳಜಿಯಿಂದ ರಕ್ಷಣಾ ಸಚಿವಾಲಯದ ವಿಶ್ವಾಸಾರ್ಹತೆ ಸ್ಪಷ್ಟವಾಗಿದೆ ಎಂದು ಮಂಗಳವಾರ ತೀರ್ಪು ನೀಡಿದೆ.

ನ್ಯಾಯಾಲಯವು ನ್ಯಾಯಾಂಗ ಪರಿಶೀಲನೆಯ ಪ್ರಕ್ರಿಯೆಯಲ್ಲಿ ಸೈನ್ಯದ ಅವಶ್ಯಕತೆಗಳನ್ನು ಎರಡನೆಯದಾಗಿ ಊಹಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.  “ಮೂರು ಆಯಕಟ್ಟಿನ ಹೆದ್ದಾರಿಗಳಿಗೆ ಡಬಲ್-ಲೇನ್ ಹೆದ್ದಾರಿಗಳಿಗಾಗಿ ರಕ್ಷಣಾ ಸಚಿವಾಲಯದ ಅರ್ಜಿಯನ್ನು ನಾವು ಅನುಮತಿಸುತ್ತೇವೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ಪೀಠವು ಅರ್ಜಿದಾರರಾದ ಎನ್‌ಜಿಒ ಸಿಟಿಜನ್ಸ್ ಫಾರ್ ಗ್ರೀನ್ ಡೂನ್ (Green Doon) ಎತ್ತಿದ ಪರಿಸರ ಕಾಳಜಿಯನ್ನು ಗಮನಿಸಿತು. ನಿರ್ಮಾಣದ ಸಮಯದಲ್ಲಿ ಕೆಲವು ಸ್ಥಳಗಳಲ್ಲಿ ಸರ್ಕಾರವು ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಂಡಿಲ್ಲ ಎಂಬ ನ್ಯಾಯಾಲಯ ನೇಮಿಸಿದ ಉನ್ನತ ಅಧಿಕಾರ ಸಮಿತಿಯ ತೀರ್ಮಾನವನ್ನು ಉಲ್ಲೇಖಿಸಿತು. ಈ ಶಿಫಾರಸುಗಳನ್ನು ಅನುಸರಿಸಬೇಕು ಎಂದು ಹೇಳಿದ ನ್ಯಾಯಾಲಯವು ಅದರ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಮತ್ತು ಯಾವುದೇ ಉಲ್ಲಂಘನೆಗಳಿಲ್ಲ ಎಂದು ಖಚಿತಪಡಿಸಿಕೊಳ್ಳಲು ಅದರ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಎಕೆ ಸಿಕ್ರಿ ನೇತೃತ್ವದ ಮೇಲ್ವಿಚಾರಣಾ ಸಮಿತಿಯನ್ನು ಸ್ಥಾಪಿಸಿತು.

ಇದನ್ನೂ ಓದಿ: ಕೊವಿಡ್-19 ಬೂಸ್ಟರ್ ಡೋಸ್‌ನ ಅಗತ್ಯವಿದೆಯೇ ಎಂಬುದರ ಬಗ್ಗೆ ಇನ್ನೂ ನಿರ್ಧರಿಸಲಾಗಿಲ್ಲ: ದೆಹಲಿ ಹೈಕೋರ್ಟ್‌ಗೆ ಕೇಂದ್ರ

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್