AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಫೋನ್ ಮೂಲಕ ಅಹವಾಲು ಆಲಿಸಿದ ಸುಪ್ರೀಂಕೋರ್ಟ್

ಉದ್ಯೋಗಿಗಳ ರಾಜ್ಯ ವಿಮಾ ನಿಗಮದ ಸಂಸ್ಥೆಯಲ್ಲಿ ವಿಮಾದಾರರ ಕೋಟಾದಡಿ ಪ್ರವೇಶ ಪಡೆಯಲು ಅವರು ಬಯಸಿದ್ದರು. ಆಕೆಯ ವಾದವನ್ನು ದೂರವಾಣಿ ಮೂಲಕ ಆಲಿಸಿದ ಪೀಠವು ಅವರು ನೀಟ್‌ಗೆ ಹಾಜರಾಗದ ಕಾರಣ...

ಮೊಬೈಲ್ ಫೋನ್ ಮೂಲಕ ಅಹವಾಲು ಆಲಿಸಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 19, 2022 | 10:22 PM

Share

ಸುಪ್ರೀಂಕೋರ್ಟ್ (Supreme Court) ಬುಧವಾರ ಮೊಬೈಲ್ ಫೋನ್ (Mobile Phone) ಮೂಲಕ ಅಹವಾಲು ಆಲಿಸಿದ್ದು ಪ್ರಕರಣದಲ್ಲಿ ಯಾವುದೇ ಪರಿಹಾರವನ್ನು ನೀಡಲು ನಿರಾಕರಿಸಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಅರ್ಜಿಯನ್ನು ತಿರಸ್ಕರಿಸುವ ಮೊದಲು ಖುದ್ದಾಗಿ ಹಾಜರಾಗಿದ್ದ ಅರ್ಜಿದಾರರ ವಿಚಾರಣೆಯನ್ನು ಆಲಿಸಿತು. ಅರ್ಜಿದಾರರು ತಮ್ಮ ಮಗಳಿಗೆ ಈ ವರ್ಷ ಪದವಿಪೂರ್ವ ವೈದ್ಯಕೀಯ ಸೀಟು ಕಲ್ಪಿಸುವಂತೆ ಕೋರಿದ್ದರು. ಆದಾಗ್ಯೂ ಅವರ ಮಗಳು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ 2022 (NEET 2002)ಗೆ ಹಾಜರಾಗಿರಲಿಲ್ಲ. ಉದ್ಯೋಗಿಗಳ ರಾಜ್ಯ ವಿಮಾ ನಿಗಮದ ಸಂಸ್ಥೆಯಲ್ಲಿ ವಿಮಾದಾರರ ಕೋಟಾದಡಿ ಪ್ರವೇಶ ಪಡೆಯಲು ಅವರು ಬಯಸಿದ್ದರು. ಆಕೆಯ ವಾದವನ್ನು ದೂರವಾಣಿ ಮೂಲಕ ಆಲಿಸಿದ ಪೀಠವು ಅವರು ನೀಟ್‌ಗೆ ಹಾಜರಾಗದ ಕಾರಣ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಈ ವರ್ಷ ಪರೀಕ್ಷೆಗೆ ಹಾಜರಾಗದಿದ್ದರೆ ನಮಗೆ ಸೀಟು ನೀಡಲು ಸಾಧ್ಯವಿಲ್ಲ, ಸೀಟು ಇಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು. ನ್ಯಾಯಮೂರ್ತಿ ಕೊಹ್ಲಿ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಮೇಡಮ್ ನಾವು ಈ ರೀತಿಯ ಪ್ರವೇಶವನ್ನು ನೀಡಲು ಸಾಧ್ಯವಿಲ್ಲ.ಆಕೆ ಪರೀಕ್ಷೆಗೆ ಹಾಜರಾಗದ ಕಾರಣ ಪರಿಹಾರ ನೀಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು. ಇದಾದನಂತರ ನ್ಯಾಯಾಲಯವು ವಿಷಯವನ್ನು ವಿಲೇವಾರಿ ಮಾಡಲು ಮುಂದಾಯಿತು. ಅದೇ ವೇಳೆ ನೀಟ್ ಪರೀಕ್ಷೆಗೆ ಹಾಜರಾದ ನಂತರ ನಂತರ ಸುಪ್ರೀಂಕೋರ್ಟ್ ಅಥವಾ ಸಂಬಂಧಪಟ್ಟ ಹೈಕೋರ್ಟ್‌ಗೆ ತೆರಳಲು ಅರ್ಜಿದಾರರಿಗೆ ಸ್ವಾತಂತ್ರ್ಯವನ್ನು ನೀಡಿತು.

Published On - 10:17 pm, Wed, 19 October 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!