AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಫೋನ್ ಮೂಲಕ ಅಹವಾಲು ಆಲಿಸಿದ ಸುಪ್ರೀಂಕೋರ್ಟ್

ಉದ್ಯೋಗಿಗಳ ರಾಜ್ಯ ವಿಮಾ ನಿಗಮದ ಸಂಸ್ಥೆಯಲ್ಲಿ ವಿಮಾದಾರರ ಕೋಟಾದಡಿ ಪ್ರವೇಶ ಪಡೆಯಲು ಅವರು ಬಯಸಿದ್ದರು. ಆಕೆಯ ವಾದವನ್ನು ದೂರವಾಣಿ ಮೂಲಕ ಆಲಿಸಿದ ಪೀಠವು ಅವರು ನೀಟ್‌ಗೆ ಹಾಜರಾಗದ ಕಾರಣ...

ಮೊಬೈಲ್ ಫೋನ್ ಮೂಲಕ ಅಹವಾಲು ಆಲಿಸಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 19, 2022 | 10:22 PM

Share

ಸುಪ್ರೀಂಕೋರ್ಟ್ (Supreme Court) ಬುಧವಾರ ಮೊಬೈಲ್ ಫೋನ್ (Mobile Phone) ಮೂಲಕ ಅಹವಾಲು ಆಲಿಸಿದ್ದು ಪ್ರಕರಣದಲ್ಲಿ ಯಾವುದೇ ಪರಿಹಾರವನ್ನು ನೀಡಲು ನಿರಾಕರಿಸಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಅರ್ಜಿಯನ್ನು ತಿರಸ್ಕರಿಸುವ ಮೊದಲು ಖುದ್ದಾಗಿ ಹಾಜರಾಗಿದ್ದ ಅರ್ಜಿದಾರರ ವಿಚಾರಣೆಯನ್ನು ಆಲಿಸಿತು. ಅರ್ಜಿದಾರರು ತಮ್ಮ ಮಗಳಿಗೆ ಈ ವರ್ಷ ಪದವಿಪೂರ್ವ ವೈದ್ಯಕೀಯ ಸೀಟು ಕಲ್ಪಿಸುವಂತೆ ಕೋರಿದ್ದರು. ಆದಾಗ್ಯೂ ಅವರ ಮಗಳು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ 2022 (NEET 2002)ಗೆ ಹಾಜರಾಗಿರಲಿಲ್ಲ. ಉದ್ಯೋಗಿಗಳ ರಾಜ್ಯ ವಿಮಾ ನಿಗಮದ ಸಂಸ್ಥೆಯಲ್ಲಿ ವಿಮಾದಾರರ ಕೋಟಾದಡಿ ಪ್ರವೇಶ ಪಡೆಯಲು ಅವರು ಬಯಸಿದ್ದರು. ಆಕೆಯ ವಾದವನ್ನು ದೂರವಾಣಿ ಮೂಲಕ ಆಲಿಸಿದ ಪೀಠವು ಅವರು ನೀಟ್‌ಗೆ ಹಾಜರಾಗದ ಕಾರಣ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಈ ವರ್ಷ ಪರೀಕ್ಷೆಗೆ ಹಾಜರಾಗದಿದ್ದರೆ ನಮಗೆ ಸೀಟು ನೀಡಲು ಸಾಧ್ಯವಿಲ್ಲ, ಸೀಟು ಇಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು. ನ್ಯಾಯಮೂರ್ತಿ ಕೊಹ್ಲಿ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಮೇಡಮ್ ನಾವು ಈ ರೀತಿಯ ಪ್ರವೇಶವನ್ನು ನೀಡಲು ಸಾಧ್ಯವಿಲ್ಲ.ಆಕೆ ಪರೀಕ್ಷೆಗೆ ಹಾಜರಾಗದ ಕಾರಣ ಪರಿಹಾರ ನೀಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು. ಇದಾದನಂತರ ನ್ಯಾಯಾಲಯವು ವಿಷಯವನ್ನು ವಿಲೇವಾರಿ ಮಾಡಲು ಮುಂದಾಯಿತು. ಅದೇ ವೇಳೆ ನೀಟ್ ಪರೀಕ್ಷೆಗೆ ಹಾಜರಾದ ನಂತರ ನಂತರ ಸುಪ್ರೀಂಕೋರ್ಟ್ ಅಥವಾ ಸಂಬಂಧಪಟ್ಟ ಹೈಕೋರ್ಟ್‌ಗೆ ತೆರಳಲು ಅರ್ಜಿದಾರರಿಗೆ ಸ್ವಾತಂತ್ರ್ಯವನ್ನು ನೀಡಿತು.

Published On - 10:17 pm, Wed, 19 October 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ