AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kanwar Yatra 2021: ಕನ್ವರ್ ಯಾತ್ರೆಗೆ ಅವಕಾಶ ಕೊಟ್ಟ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್​ನಿಂದ ನೋಟಿಸ್​..

ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್​ನಿಂದ ನೋಟಿಸ್ ಬಂದಿದ್ದು ಮಾಧ್ಯಮಗಳಿಂದ ಗೊತ್ತಾಗಿದೆ. ಆ ನೋಟಿಸ್​ ಸಂಬಂಧಪಟ್ಟ ಅಧಿಕಾರಿಗೆ ಬಂದು ತಲುಪಿದ ನಂತರ ನಾವದಕ್ಕೆ ನಿರ್ದಿಷ್ಟ ಸಮಯದಲ್ಲಿ ಉತ್ತರ ನೀಡುತ್ತೇವೆ ಎಂದು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್​ ಸೆಹಗಲ್​ ತಿಳಿಸಿದ್ದಾರೆ.

Kanwar Yatra 2021: ಕನ್ವರ್ ಯಾತ್ರೆಗೆ ಅವಕಾಶ ಕೊಟ್ಟ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್​ನಿಂದ ನೋಟಿಸ್​..
ಕನ್ವರ್ ಯಾತ್ರೆಯ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 14, 2021 | 2:34 PM

Share

ಕೊವಿಡ್​ 19 (Covid 19) ಸಾಂಕ್ರಾಮಿಕ ಇನ್ನೂ ಪೂರ್ತಿಯಾಗಿ ನಿರ್ಮೂಲನೆಗೊಂಡಿಲ್ಲ.. ಹೀಗಿದ್ದಾಗ್ಯೂ ಕನ್ವರ್​ ಯಾತ್ರೆ (Kanwar Yatra 2021) ಗೆ ಹೇಗೆ ಅವಕಾಶ ಕೊಟ್ಟಿರಿ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ನೋಟಿಸ್​ ನೀಡಿದೆ. ಹಾಗೇ, ಕೇಂದ್ರ ಸರ್ಕಾರಕ್ಕೂ ನೋಟಿಸ್​ ನೀಡಿದೆ. ಜುಲೈ 25ರಿಂದ ಪ್ರಾರಂಭವಾಗುವ ಕನ್ವರ್​ ಯಾತ್ರೆಗೆ ಅವಕಾಶ ನೀಡಲು ಉತ್ತರಪ್ರದೇಶ ಸರ್ಕಾರ (Uttar Pradesh Government) ನಿರ್ಧರಿಸಿತ್ತು. ಇದನ್ನು ಸುಪ್ರೀಂಕೋರ್ಟ್ (Supreme Court​ ಸುಮೊಟೊ ವಿಚಾರಣೆಗೆ ಎತ್ತಿಕೊಂಡಿದೆ. ಕುಂಭಮೇಳದಿಂದ ಕೆಟ್ಟ ಅನುಭವ ಪಡೆದ ಉತ್ತರಾಖಂಡ ಕನ್ವರ್​ ಯಾತ್ರೆಯನ್ನು ನಿಷೇಧಿಸಿದೆ. ಆದರೆ ಉತ್ತರ ಪ್ರದೇಶ ಸರ್ಕಾರ ಯಾತ್ರೆಗೆ ಅವಕಾಶ ನೀಡುವುದಾಗಿ ಹೇಳಿದೆ. ಈ ಬಗ್ಗೆ ನಾವು ಇಂಡಿಯನ್​ ಎಕ್ಸ್​ಪ್ರೆಸ್​ ಮಾಧ್ಯಮದಲ್ಲಿ ಸುದ್ದಿ ಓದಿ, ಸ್ವಲ್ಪ ಗೊಂದಲಗೊಂಡಿದ್ದೇವೆ ಯಾವ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್​.ಎಫ್​.ನಾರಿಮನ್​​ ಅವರು ಸಾಲಿಸಿಟರ್ ಜನರಲ್​​ರನ್ನು ಪ್ರಶ್ನೆ ಮಾಡಿದ್ದಾರೆ.

ಕನ್ವರ್​ ಯಾತ್ರೆ ಹಿಂದುಗಳ ಪವಿತ್ರ ಧಾರ್ಮಿಕ ಯಾತ್ರೆಗಳಲ್ಲಿ ಒಂದಾಗಿದೆ. ಶಿವನ ಭಕ್ತರು ಗಂಗಾ ನದಿಯಿಂದ ನೀರು ಸಂಗ್ರಹಿಸಿ ಅದನ್ನು ಆಯಾ ರಾಜ್ಯಗಳ ಶಿವನ ದೇವಸ್ಥಾನಕ್ಕೆ ಅರ್ಪಿಸುತ್ತಾರೆ. ನೂರಾರು ಕಿಮೀ ದೂರ ಕಾಲ್ನಡಿಗೆಯಲ್ಲೇ ಸಂಚರಿಸಿ ಹೋಗಿ ನೀರು ಸಂಗ್ರಹಿಸುವ ಈ ಭಕ್ತರನ್ನು ಕನ್ವರಿಯಾಸ್​ ಎಂದು ಕರೆಯುತ್ತಾರೆ. ಹೀಗೆ ಗಂಗಾ ನದಿ ನೀರು ಸಂಗ್ರಹಕ್ಕೆ ಹೆಚ್ಚೆಚ್ಚು ಜನ ಸೇರುವುದಿಂದ ಕೊವಿಡ್​ 19 ಸೋಂಕು ಮತ್ತೆ ಉಲ್ಬಣಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಕನ್ವರ್​ ಯಾತ್ರೆಯೆಂದಲ್ಲ, ಜನರು ಸೇರುವ ಯಾವುದೇ ಉತ್ಸವ, ಯಾತ್ರೆ, ಮೇಳಗಳು ಕೊವಿಡ್ 19 ಮೂರನೇ ಅಲೆಗೆ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಈಗಾಗಲೇ ಎಚ್ಚರಿಕೆ ನೀಡಿದ್ದಾಗ್ಯೂ ಉತ್ತರ ಪ್ರದೇಶ ಸರ್ಕಾರ ಕನ್ವರ್​ ಯಾತ್ರೆಗೆ ಅವಕಾಶ ನೀಡಿದ್ದಕ್ಕೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್​ನಿಂದ ನೋಟಿಸ್ ಬಂದಿದ್ದು ಮಾಧ್ಯಮಗಳಿಂದ ಗೊತ್ತಾಗಿದೆ. ಆ ನೋಟಿಸ್​ ಸಂಬಂಧಪಟ್ಟ ಅಧಿಕಾರಿಗೆ ಬಂದು ತಲುಪಿದ ನಂತರ ನಾವದಕ್ಕೆ ನಿರ್ದಿಷ್ಟ ಸಮಯದಲ್ಲಿ ಉತ್ತರ ನೀಡುತ್ತೇವೆ ಎಂದು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್​ ಸೆಹಗಲ್​ ತಿಳಿಸಿದ್ದಾರೆ. ಯಾತ್ರೆ ಶುರುವಾಗುವುದು ಜು.25ರಿಂದ. ಸಾಕಷ್ಟು ಸಮಯವಿದೆ..ಸುಪ್ರೀಂಕೋರ್ಟ್ ನೋಟಿಸ್​ ಬಗ್ಗೆ ರಾಜ್ಯ ಸರ್ಕಾರ ಖಂಡಿತ ಗಮನಹರಿಸುತ್ತದೆ ಎಂದೂ ತಿಳಿಸಿದ್ದಾರೆ. ಕನ್ವರ್ ಯಾತ್ರೆಯಿಂದ ಹರಿದ್ವಾರ, ಮುಜಾಫರ್​ನಗರ, ಬಾಗಪತ್, ಮೀರತ್, ಗಾಜಿಯಾಬಾದ್, ಬುಲಂದ್‌ಶಹರ್, ಹಾಪುರ್, ಅಮ್ರೋಹಾ, ಶಾಮ್ಲಿ, ಸಹರಾನ್‌ಪುರ, ಆಗ್ರಾ, ಅಲಿಗಡ್​, ಬರೇಲಿ, ಖೇರಿ, ಬರಾಬಂಕಿ, ಅಯೋಧ್ಯೆ, ವಾರಣಾಸಿ, ಬಸ್ತಿ ಸೇರಿ ಹಲವು ಕಡೆಗಳಲ್ಲಿ ಸಿಕ್ಕಾಪಟೆ ಜನರು ಸೇರುತ್ತಾರೆ. ಟ್ರಾಫಿಕ್​ ಜಾಮ್​ ಉಂಟಾಗುತ್ತದೆ. 2019ರಲ್ಲಿ ನಡೆದ ಕನ್ವರ್ ಯಾತ್ರೆಯಲ್ಲಿ ಬರೋಬ್ಬರಿ 3.5 ಕೋಟಿ ಭಕ್ತರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ನೀಲಿ ಕಲರ್​ ಸ್ಕರ್ಟ್​​ ತೊಟ್ಟ ಮಹಿಳೆಯ ಆಕೃತಿ; ಮಟ ಮಟ ಮಧ್ಯಾಹ್ನವೇ ಭಯಗೊಂಡ ನೆಟ್ಟಿಗರು! ವಿಡಿಯೋ ವೈರಲ್

Supreme Court issues notice to Uttar Pradesh and Centre for decision to allow the devotees to Kanwar Yatra

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ