AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Justice MR Shah: ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಎಂಆರ್​ ಶಾ ಅವರಿಗೆ ಹೃದಯಾಘಾತ; ದೆಹಲಿಗೆ ಏರ್​ಲಿಫ್ಟ್​

ಎಂ.ಆರ್​. ಶಾ ಅವರ ಆರೋಗ್ಯದ ಕುರಿತು ಸುಪ್ರೀಂ ಕೋರ್ಟ್ ಅಧಿಕಾರಿಗಳು ಗೃಹ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಏರ್ ಆಂಬುಲೆನ್ಸ್ ಮೂಲಕ ದೆಹಲಿಗೆ ಕರೆತರಲಾಗುತ್ತಿದೆ.

Justice MR Shah: ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಎಂಆರ್​ ಶಾ ಅವರಿಗೆ ಹೃದಯಾಘಾತ; ದೆಹಲಿಗೆ ಏರ್​ಲಿಫ್ಟ್​
ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಎಂಆರ್​ ಶಾImage Credit source: NDTV
TV9 Web
| Edited By: |

Updated on:Jun 16, 2022 | 4:27 PM

Share

ನವದೆಹಲಿ: ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಎಂ.ಆರ್. ಶಾ ( ಮುಖೇಶ್ ಕುಮಾರ್ ರಸಿಕ್​ ಭಾಯ್ ಶಾ) ಅವರಿಗೆ ಹಿಮಾಚಲ ಪ್ರದೇಶದಲ್ಲಿ ಹೃದಯಾಘಾತ ಉಂಟಾಗಿದ್ದು, ತಕ್ಷಣ ದೆಹಲಿಗೆ ಏರ್​ಲಿಫ್ಟ್​ ಮಾಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಎಂ.ಆರ್​. ಶಾ (Justice MR Shah) ಅವರ ಆರೋಗ್ಯದ ಕುರಿತು ಸುಪ್ರೀಂ ಕೋರ್ಟ್ ಅಧಿಕಾರಿಗಳು ಗೃಹ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಏರ್ ಆಂಬುಲೆನ್ಸ್ (Airlift) ಮೂಲಕ ದೆಹಲಿಗೆ ಕರೆತರಲಾಗುತ್ತಿದೆ. ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗುವುದು.

ಮುಖೇಶ್‌ಕುಮಾರ್ ರಸಿಕ್‌ಭಾಯ್ ಷಾ 1958ರ ಮೇ 16ರಂದು ಜನಿಸಿದ್ದರು. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿರುವ ಅವರು ಪಾಟ್ನಾ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಯೂ ಹೌದು. ಅವರು ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿಗಳೂ ಆಗಿದ್ದರು.

ಇದನ್ನೂ ಓದಿ
Image
Agnipath Scheme: ಅಗ್ನಿಪಥ್​ ಯೋಜನೆ ಕುರಿತ ವದಂತಿಗಳೇನು; ಸರ್ಕಾರ ನೀಡಿದ ಸ್ಪಷ್ಟನೆಯೇನು?
Image
Amarnath Yatra: ಅಮರನಾಥ ಯಾತ್ರೆಗೆ ಹೆಸರು ನೋಂದಾಯಿಸುವುದು ಹೇಗೆ? ಏನೇನು ನಿರ್ಬಂಧಗಳಿವೆ?
Image
ಹೈದರಾಬಾದ್: ಒಂದೇ ಗೋತ್ರದವರನ್ನು ಮದುವೆಯಾಗಿದ್ದಕ್ಕೆ ಬೆದರಿಕೆ, ಬಹಿಷ್ಕಾರ; ಪೊಲೀಸರ ಮೊರೆ ಹೋದ ದಂಪತಿ

ಇದನ್ನೂ ಓದಿ: ಕರ್ನಾಟಕ ನೂತನ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ನೇಮಕ

ಎಂ.ಅರ್​ ಶಾ ಅವರು 2023ರ ಮೇ 15ರಂದು ನಿವೃತ್ತರಾಗಲಿದ್ದಾರೆ. ಅವರು 1982ರ ಜುಲೈ 19ರಂದು ವಕೀಲರಾಗಿ ವೃತ್ತಿ ಆರಂಭಿಸಿದರು. ಗುಜರಾತ್ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಿದರು. 2004ರ ಮಾರ್ಚ್​ 4ರಂದು ಗುಜರಾತ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು. 2005ರ ಜೂನ್ 22ರಂದು ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು.

ಅವರು 2018ರ ಆಗಸ್ಟ್ 12ರಂದು ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಅವರು 2018 ರಲ್ಲಿ ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Thu, 16 June 22

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ