Sign In

By signing in or creating an account, you agree with Associated Broadcasting Company's Terms & Conditions and Privacy Policy.

Justice MR Shah: ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಎಂಆರ್​ ಶಾ ಅವರಿಗೆ ಹೃದಯಾಘಾತ; ದೆಹಲಿಗೆ ಏರ್​ಲಿಫ್ಟ್​

ಎಂ.ಆರ್​. ಶಾ ಅವರ ಆರೋಗ್ಯದ ಕುರಿತು ಸುಪ್ರೀಂ ಕೋರ್ಟ್ ಅಧಿಕಾರಿಗಳು ಗೃಹ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಏರ್ ಆಂಬುಲೆನ್ಸ್ ಮೂಲಕ ದೆಹಲಿಗೆ ಕರೆತರಲಾಗುತ್ತಿದೆ.

Justice MR Shah: ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಎಂಆರ್​ ಶಾ ಅವರಿಗೆ ಹೃದಯಾಘಾತ; ದೆಹಲಿಗೆ ಏರ್​ಲಿಫ್ಟ್​
ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಎಂಆರ್​ ಶಾImage Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 16, 2022 | 4:27 PM

ನವದೆಹಲಿ: ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಎಂ.ಆರ್. ಶಾ ( ಮುಖೇಶ್ ಕುಮಾರ್ ರಸಿಕ್​ ಭಾಯ್ ಶಾ) ಅವರಿಗೆ ಹಿಮಾಚಲ ಪ್ರದೇಶದಲ್ಲಿ ಹೃದಯಾಘಾತ ಉಂಟಾಗಿದ್ದು, ತಕ್ಷಣ ದೆಹಲಿಗೆ ಏರ್​ಲಿಫ್ಟ್​ ಮಾಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಎಂ.ಆರ್​. ಶಾ (Justice MR Shah) ಅವರ ಆರೋಗ್ಯದ ಕುರಿತು ಸುಪ್ರೀಂ ಕೋರ್ಟ್ ಅಧಿಕಾರಿಗಳು ಗೃಹ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಏರ್ ಆಂಬುಲೆನ್ಸ್ (Airlift) ಮೂಲಕ ದೆಹಲಿಗೆ ಕರೆತರಲಾಗುತ್ತಿದೆ. ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗುವುದು.

ಮುಖೇಶ್‌ಕುಮಾರ್ ರಸಿಕ್‌ಭಾಯ್ ಷಾ 1958ರ ಮೇ 16ರಂದು ಜನಿಸಿದ್ದರು. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿರುವ ಅವರು ಪಾಟ್ನಾ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಯೂ ಹೌದು. ಅವರು ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿಗಳೂ ಆಗಿದ್ದರು.

ಇದನ್ನೂ ಓದಿ
Image
Agnipath Scheme: ಅಗ್ನಿಪಥ್​ ಯೋಜನೆ ಕುರಿತ ವದಂತಿಗಳೇನು; ಸರ್ಕಾರ ನೀಡಿದ ಸ್ಪಷ್ಟನೆಯೇನು?
Image
Amarnath Yatra: ಅಮರನಾಥ ಯಾತ್ರೆಗೆ ಹೆಸರು ನೋಂದಾಯಿಸುವುದು ಹೇಗೆ? ಏನೇನು ನಿರ್ಬಂಧಗಳಿವೆ?
Image
ಹೈದರಾಬಾದ್: ಒಂದೇ ಗೋತ್ರದವರನ್ನು ಮದುವೆಯಾಗಿದ್ದಕ್ಕೆ ಬೆದರಿಕೆ, ಬಹಿಷ್ಕಾರ; ಪೊಲೀಸರ ಮೊರೆ ಹೋದ ದಂಪತಿ

ಇದನ್ನೂ ಓದಿ: ಕರ್ನಾಟಕ ನೂತನ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ನೇಮಕ

ಎಂ.ಅರ್​ ಶಾ ಅವರು 2023ರ ಮೇ 15ರಂದು ನಿವೃತ್ತರಾಗಲಿದ್ದಾರೆ. ಅವರು 1982ರ ಜುಲೈ 19ರಂದು ವಕೀಲರಾಗಿ ವೃತ್ತಿ ಆರಂಭಿಸಿದರು. ಗುಜರಾತ್ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಿದರು. 2004ರ ಮಾರ್ಚ್​ 4ರಂದು ಗುಜರಾತ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು. 2005ರ ಜೂನ್ 22ರಂದು ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು.

ಅವರು 2018ರ ಆಗಸ್ಟ್ 12ರಂದು ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಅವರು 2018 ರಲ್ಲಿ ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Thu, 16 June 22

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ