AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ, ಮಥುರಾ, ಸಂಭಾಲ್ ಬಿಕ್ಕಟ್ಟಿಗೆ ಕೋರ್ಟ್ ಹೊರಗೆ ಸಂಧಾನ, ಆಗಸ್ಟ್‌ನಲ್ಲಿ ಸುಪ್ರೀಂ ಅಂಗಳದಲ್ಲೇ ಲೋಕ ಅದಾಲತ್

ಜ್ಞಾನವಾಪಿ, ಮಥುರಾ, ಸಂಭಾಲ್ ಧಾರ್ಮಿಕ ಜಾಗಗಳ ವಿವಾದಗಳ ಸೌಹಾರ್ದಯುತ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟ್ "ಸಮಾಧಾನ್ ಸಮರೋಹ್" ಹೆಸರಿನಲ್ಲಿ ವಿಶೇಷ ಲೋಕ ಅದಾಲತ್ ಆಯೋಜಿಸಿದೆ. ಆಗಸ್ಟ್ 21-23 ರಂದು ನಡೆಯುವ ಈ ಪ್ರಕ್ರಿಯೆಯು ದೀರ್ಘಕಾಲದ ಕಾನೂನು ಹೋರಾಟ ತಪ್ಪಿಸಿ, 1991ರ ಕಾಯ್ದೆ ಹಿನ್ನೆಲೆಯಲ್ಲಿ ಒಮ್ಮತದ ಪರಿಹಾರ ಕಂಡುಕೊಳ್ಳುವ ಗುರಿ ಹೊಂದಿದೆ. ಇದು ಭಾರತದ ಭವಿಷ್ಯದ ದೃಷ್ಟಿಯಿಂದ ಮಹತ್ವದ ನಿರ್ಧಾರ.

ಜ್ಞಾನವಾಪಿ, ಮಥುರಾ, ಸಂಭಾಲ್ ಬಿಕ್ಕಟ್ಟಿಗೆ ಕೋರ್ಟ್ ಹೊರಗೆ ಸಂಧಾನ, ಆಗಸ್ಟ್‌ನಲ್ಲಿ ಸುಪ್ರೀಂ ಅಂಗಳದಲ್ಲೇ ಲೋಕ ಅದಾಲತ್
ಲೋಕ್ ಅದಾಲತ್
ನಯನಾ ರಾಜೀವ್
|

Updated on: Jul 13, 2026 | 10:15 AM

Share

ನವದೆಹಲಿ, ಜುಲೈ 13: ಭಾರತದ ಸಾಮಾಜಿಕ ಮತ್ತು ರಾಜಕೀಯ ವಲಯಗಳಲ್ಲಿ ದಶಕಗಳಿಂದ ತೀವ್ರ ಸಂಚಲನ ಮೂಡಿಸುತ್ತಿರುವ ಮೂರು ಅತ್ಯಂತ ಸೂಕ್ಷ್ಮ ಧಾರ್ಮಿಕ ಜಾಗದ ವಿವಾದಗಳಿಗೆ ಕೋರ್ಟ್​ ಕೊಠಡಿಯ ಹೊರಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಲು ಸುಪ್ರೀಂಕೋರ್ಟ್(Supreme Court)​ ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ವಾರಾಣಸಿಯ ಜ್ಞಾನವಾಪಿ ಮಸೀದಿ ಪ್ರಕರಣ, ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಮತ್ತು ಸಂಭಾಲ್‌ನ ಹರಿಹರ ಮಂದಿರ-ಜಾಮಾ ಮಸೀದಿ ವಿವಾದಗಳನ್ನು ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆಯಲಿರುವ ವಿಶೇಷ ‘ಲೋಕ ಅದಾಲತ್’ ಮೂಲಕ ಇತ್ಯರ್ಥಪಡಿಸಲು ಉಲ್ಲೇಖಿಸಲಾಗಿದೆ.

ವರ್ಷಗಟ್ಟಲೆ ಎಳೆಯುವ ಕಾನೂನು ಹೋರಾಟದ ಬದಲಿಗೆ ಸೌಹಾರ್ದಯುತ ಸಂವಾದದ ಮೂಲಕ ಒಮ್ಮತದ ತೀರ್ಮಾನಕ್ಕೆ ಬರುವ ಪ್ರಯತ್ನವಾಗಿ “ಸಮಾಧಾನ್ ಸಮರೋಹ್” ಎಂಬ ಶೀರ್ಷಿಕೆಯಡಿ ಆಗಸ್ಟ್ 21 ರಿಂದ 23 ರವರೆಗೆ ಈ ವಿಶೇಷ ಸಂಧಾನ ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಮೂರೂ ಪ್ರಕರಣಗಳಿಗೆ ಸಂಬಂಧಿಸಿದ ಹಿಂದೂ ಮತ್ತು ಮುಸ್ಲಿಂ ಎರಡೂ ಜಂಟಿ ಪಕ್ಷಗಳಿಗೆ ಅಧಿಕೃತ ನೋಟಿಸ್ ಜಾರಿ ಮಾಡಿದೆ.

ತೆರೆಮರೆಯಲ್ಲಿ ಸಾಗುತ್ತಿದೆ ಪೂರ್ವ ಸಂಧಾನ ಪ್ರಕ್ರಿಯೆ

ಲೋಕ ಅದಾಲತ್‌ನಲ್ಲಿ ಅಂತಿಮ ತೀರ್ಮಾನಕ್ಕೆ ಬರುವ ಮುನ್ನವೇ ಕೆಳ ನ್ಯಾಯಾಲಯಗಳ ಮಟ್ಟದಲ್ಲಿ ಕಳೆದ ಏಪ್ರಿಲ್ 21 ರಿಂದಲೇ ತಜ್ಞರ ನೇತೃತ್ವದಲ್ಲಿ ಮಧ್ಯಸ್ಥಿಕೆ ಪ್ರಯತ್ನಗಳು ನಡೆಯುತ್ತಿವೆ.

ಮುಂದಿನ ದಿನಗಳ ವೇಳಾಪಟ್ಟಿ: ಆಗಸ್ಟ್‌ನಲ್ಲಿ ನಡೆಯುವ ಮುಖ್ಯ ಕಾರ್ಯಕ್ರಮಕ್ಕೂ ಮುನ್ನ, ಜುಲೈ 14 ರಂದು ವಾರಾಣಸಿಯಲ್ಲಿ ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಪೂರ್ವ-ಸಂಧಾನ ವಿಚಾರಣೆ’ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ಮಥುರಾ ಪ್ರಕರಣದ ಹಿನ್ನಡೆ: ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಜುಲೈ 5 ರಂದು ನಡೆದಿದ್ದ ಸಂಧಾನದ ಮೊದಲ ಪ್ರಯತ್ನಗಳು ವಿಫಲವಾಗಿದ್ದವು. ಇದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಈಗ ಇದನ್ನು ದೇಶದ ಅತ್ಯುನ್ನತ ಲೋಕ ಅದಾಲತ್ ಉಪಕ್ರಮದ ಅಡಿಯಲ್ಲಿ ತಂದು ಮತ್ತೊಂದು ಗಂಭೀರ ಅವಕಾಶ ನೀಡಿದೆ.

ಜ್ಞಾನವಾಪಿ ಮಸೀದಿ ಪ್ರಕರಣ ( ವಾರಾಣಸಿ)

ಮೊಘಲರ ಆಡಳಿತಾವಧಿಯಲ್ಲಿ ಮೂಲ ಕಾಶಿ ವಿಶ್ವನಾಥ ದೇವಾಲಯದ ಒಂದು ಭಾಗವನ್ನು ಕೆಡವಿ ಈ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬುದು ಹಿಂದೂ ಅರ್ಜಿದಾರರ ವಾದ. ಮಸೀದಿ ಸಂಕೀರ್ಣದ ಒಳಗೆ ಪೂಜೆ ಮಾಡುವ ಹಕ್ಕನ್ನು ನೀಡಬೇಕೆಂದು ಹಿಂದೂಗಳು ಕೋರಿದ್ದಾರೆ. ಆದರೆ, ಮುಸ್ಲಿಂ ಪರ ಪ್ರತಿನಿಧಿಸುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು, 1991ರ ಪೂಜಾ ಸ್ಥಳಗಳ ಕಾಯ್ದೆಯ ಪ್ರಕಾರ ಆಗಸ್ಟ್ 15, 1947 ರಲ್ಲಿದ್ದ ಧಾರ್ಮಿಕ ಸ್ವರೂಪವನ್ನು ಬದಲಾಯಿಸುವಂತಿಲ್ಲ, ಹೀಗಾಗಿ ಈ ಅರ್ಜಿಗಳು ಕಾನೂನುಬದ್ಧವಾಗಿ ಸಮರ್ಥನೀಯವಲ್ಲ ಎಂದು ವಿರೋಧಿಸುತ್ತಿದೆ.

ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ (ಮಥುರಾ):

ಮೊಘಲ್ ದೊರೆ ಔರಂಗಜೇಬನ ಆದೇಶದ ಮೇರೆಗೆ ಮಥುರಾದಲ್ಲಿ ಶ್ರೀಕೃಷ್ಣನ ಜನ್ಮಸ್ಥಳದಲ್ಲಿದ್ದ ಪ್ರಾಚೀನ ದೇವಸ್ಥಾನವನ್ನು ಧ್ವಂಸಗೊಳಿಸಿ ಈ ಶಾಹಿ ಈದ್ಗಾ ಮಸೀದಿಯನ್ನು ಕಟ್ಟಲಾಗಿದೆ ಎಂದು ಹಿಂದೂ ದಾವೆದಾರರು ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಜಾಗವನ್ನು ಮರುಪಡೆಯಲು ಹಲವು ಮೊಕದ್ದಮೆಗಳು ದಾಖಲಾಗಿವೆ. ಮಸೀದಿ ಸಮಿತಿಯು ಇಲ್ಲೂ ಸಹ 1991ರ ಕಾಯ್ದೆಯನ್ನೇ ಅಸ್ತ್ರವಾಗಿಸಿಕೊಂಡು ತನ್ನ ಹಕ್ಕನ್ನು ಪ್ರತಿಪಾದಿಸುತ್ತಿದೆ.

ಶಾಹಿ ಜಾಮಾ ಮಸೀದಿ ವಿವಾದ (ಸಂಭಾಲ್)

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಮೊಘಲ್ ಯುಗದ ಶಾಹಿ ಜಾಮಾ ಮಸೀದಿಯು ಮೂಲತಃ ‘ಹರಿಹರ ದೇವಸ್ಥಾನ’ ಆಗಿತ್ತು ಎಂಬ ಅರ್ಜಿಯ ಆಧಾರದ ಮೇಲೆ ಸಿವಿಲ್ ನ್ಯಾಯಾಲಯವು ಜಾಗದ ಸಮೀಕ್ಷೆಗೆ  ಆದೇಶಿಸಿತ್ತು. ಈ ನ್ಯಾಯಾಲಯದ ಆದೇಶದ ಮೇರೆಗೆ ಕಳೆದ ವರ್ಷದ ನವೆಂಬರ್‌ನಲ್ಲಿ ಸಮೀಕ್ಷೆ ನಡೆಸುವಾಗ ಸಂಭಾಲ್‌ನಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದು, ಸಾವು-ನೋವುಗಳು ಸಂಭವಿಸಿದ್ದವು.

ಏನಿದು 1991ರ ಕಾಯ್ದೆ? ಲೋಕ ಅದಾಲತ್ ಮಹತ್ವವೇನು?

ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ, 1991: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ದಿನವಾದ ಆಗಸ್ಟ್ 15, 1947 ರಂದು ದೇಶದ ಯಾವುದೇ ಆರಾಧನಾ ಮಂದಿರಗಳು (ದೇವಸ್ಥಾನ, ಮಸೀದಿ, ಚರ್ಚ್ ಇತ್ಯಾದಿ) ಯಾವ ಧಾರ್ಮಿಕ ಸ್ವರೂಪದಲ್ಲಿದ್ದವೋ, ಅದನ್ನು ಹಾಗೆಯೇ ಮುಂದುವರಿಸಬೇಕು ಮತ್ತು ಅದರ ಸ್ವರೂಪವನ್ನು ಬದಲಾಯಿಸಲು ಯಾವುದೇ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವಂತಿಲ್ಲ ಎಂದು ಈ ಕಾಯ್ದೆ ಹೇಳುತ್ತದೆ (ಅಯೋಧ್ಯೆಯ ಬಾಬ್ರಿ ಮಸೀದಿ ಪ್ರಕರಣಕ್ಕೆ ಮಾತ್ರ ಇದರಿಂದ ವಿನಾಯಿತಿ ನೀಡಲಾಗಿತ್ತು). ಪ್ರಸ್ತುತ ಈ ಮೂರೂ ಪ್ರಕರಣಗಳಲ್ಲಿ ಈ ಕಾಯ್ದೆಯ ವ್ಯಾಖ್ಯಾನವೇ ಅತ್ಯಂತ ಪ್ರಮುಖ ಕಾನೂನು ಚರ್ಚೆಯಾಗಿದೆ.

ಲೋಕ ಅದಾಲತ್‌ನಲ್ಲಿ ತೀರ್ಪು ಬಂದರೆ ಏನಾಗುತ್ತದೆ?

ಲೋಕ ಅದಾಲತ್‌ನಲ್ಲಿ ನ್ಯಾಯಮೂತರ್ತಗಳು ತೀರ್ಪು ನೀಡುವುದಿಲ್ಲ, ಬದಲಿಗೆ ಉಭಯ ಪಕ್ಷಗಳನ್ನು ಒಟ್ಟಿಗೆ ಕೂರಿಸಿ ಒಪ್ಪಂದಕ್ಕೆ ತರಲಾಗುತ್ತದೆ. ಒಂದು ವೇಳೆ ಈ ‘ಸಮಾಧಾನ್ ಸಮರೋಹ್’ನಲ್ಲಿ ಎರಡೂ ಕಡೆಯವರು ಸಹಿ ಹಾಕಿ ರಾಜಿ ಮಾಡಿಕೊಂಡರೆ, ಆ ತೀರ್ಪನ್ನು ಸಿವಿಲ್ ನ್ಯಾಯಾಲಯದ ಅಂತಿಮ ತೀರ್ಪಿಗೆ ಸಮಾನ ಎಂದು ಪರಿಗಣಿಸಲಾಗುತ್ತದೆ. ಇದರ ವಿರುದ್ಧ ಮತ್ತೊಮ್ಮೆ ಯಾವುದೇ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಭಾರತದ ಕೋಮು ಸೌಹಾರ್ದತೆ ಮತ್ತು ಭವಿಷ್ಯದ ದೃಷ್ಟಿಯಿಂದ ಆಗಸ್ಟ್ 21 ರ ಸುಪ್ರೀಂ ಕೋರ್ಟ್‌ನ ಈ ಸಂಧಾನ ಪ್ರಕ್ರಿಯೆ ಇಡೀ ಜಗತ್ತಿನ ಗಮನ ಸೆಳೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ