AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯಾ ರಾಮಮಂದಿರ ವಿವಾದಕ್ಕೆ ಇಂದಾದರೂ ಬೀಳುತ್ತಾ ತೆರೆ?

ನವದೆಹಲಿ: ಅಯೋಧ್ಯಾ ರಾಮ ಜನ್ಮಭೂಮಿ ಮತ್ತು ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ನ ಸಂವಿಧಾನ ಪೀಠದಲ್ಲಿ ಇಂದು ಕೊನೆಯ ದಿನದ ವಿಚಾರಣೆ ನಡೆದಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠವು ರಾಮ ಜನ್ಮಭೂಮಿ-ಬಾಬರಿ ಮಸೀದಿ ಮೊಕದ್ದಮೆಯ ವಿಚಾರಣೆ 39 ದಿನಗಳಿಂದ ನಡೆಸುತ್ತಿದೆ. ಈ ಮೊದಲು ಅಕ್ಟೋಬರ್ 18 ರಂದು ವಾದ-ಪ್ರತಿವಾದ ಮುಗಿಸಲು ಗಡುವನ್ನು ನಿಗದಿಪಡಿಸಿತ್ತು. ನಂತರ ಅದನ್ನು ಅಕ್ಟೋಬರ್ 17 ಕ್ಕೆ ತರಲಾಯಿತು, ಆದರೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ […]

ಅಯೋಧ್ಯಾ ರಾಮಮಂದಿರ ವಿವಾದಕ್ಕೆ ಇಂದಾದರೂ ಬೀಳುತ್ತಾ ತೆರೆ?
ಸಾಧು ಶ್ರೀನಾಥ್​
|

Updated on:Oct 16, 2019 | 3:26 PM

Share

ನವದೆಹಲಿ: ಅಯೋಧ್ಯಾ ರಾಮ ಜನ್ಮಭೂಮಿ ಮತ್ತು ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ನ ಸಂವಿಧಾನ ಪೀಠದಲ್ಲಿ ಇಂದು ಕೊನೆಯ ದಿನದ ವಿಚಾರಣೆ ನಡೆದಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠವು ರಾಮ ಜನ್ಮಭೂಮಿ-ಬಾಬರಿ ಮಸೀದಿ ಮೊಕದ್ದಮೆಯ ವಿಚಾರಣೆ 39 ದಿನಗಳಿಂದ ನಡೆಸುತ್ತಿದೆ. ಈ ಮೊದಲು ಅಕ್ಟೋಬರ್ 18 ರಂದು ವಾದ-ಪ್ರತಿವಾದ ಮುಗಿಸಲು ಗಡುವನ್ನು ನಿಗದಿಪಡಿಸಿತ್ತು. ನಂತರ ಅದನ್ನು ಅಕ್ಟೋಬರ್ 17 ಕ್ಕೆ ತರಲಾಯಿತು, ಆದರೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠವು ಇನ್ನೂ ಹೆಚ್ಚಿನ ಸಮಯವನ್ನು ನೀಡುವುದಿಲ್ಲ, ಇಂದು ಸಂಜೆ 5ರೊಳಗೆ ವಿಚಾರಣೆ ಪೂರ್ಣಗೊಳ್ಳಲಿದೆ.  ಎಲ್ಲಾ ವಾದಗಳನ್ನು ಮುಕ್ತಾಯಗೊಳಿಸಲೇಬೇಕು ಎಂದು ಖಡಕ್ಕಾಗಿ ಸೂಚಿಸಿದೆ.

ವಾದಗಳು ಮುಕ್ತಾಯವಾದರೆ ತೀರ್ಪನ್ನು ನ್ಯಾಯಪೀಠ ಕಾಯ್ದಿರಿಸುತ್ತದೆ. ನ್ಯಾಯಮೂರ್ತಿಗಳಾದ ಎಸ್‌ಎ ಬೊಬ್ಡೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್‌ಎ ನಜೀರ್ ಅವರನ್ನು ಒಳಗೊಂಡ ನ್ಯಾಯಪೀಠವು ನವೆಂಬರ್ 17 ರೊಳಗೆ ತೀರ್ಪನ್ನು ಪ್ರಕಟಿಸಬೇಕಾಗಿದೆ. ಏಕೆಂದರೆ ಆ ದಿನಾಂಕ ದಂದು ಸಿಜೆಐ ನಿವೃತ್ತಿ ಹೊಂದಲಿದ್ದಾರೆ. ಅವರ ನಿವೃತ್ತಿಯ ಮೊದಲು ತೀರ್ಪು ನೀಡದಿದ್ದರೆ, ಇಡೀ ವಿಷಯವನ್ನು ಹೊಸದಾಗಿ ಆಲಿಸಬೇಕಾಗುತ್ತದೆ. ಆದ್ದರಿಂದ ಇಂದೇ ವಾದ-ಪ್ರತಿವಾದ ಮುಗಿಯಬೇಕಿದೆ.

ಅಲಹಾಬಾದ್ ಹೈಕೋರ್ಟ್‌ನಲ್ಲಿ ಸೆಪ್ಟೆಂಬರ್ 2010 ರ ತೀರ್ಪಿನ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ನ್ಯಾಯಮೂರ್ತಿ ಗೊಗೊಯ್ ನೇತೃತ್ವದ ಪಂಚ ಸದಸ್ಯರ ಪೀಠವು  ನಡೆಸುತ್ತಿದೆ. ಸದರಿ ಹೈಕೋರ್ಟ್‌ ಈ ಹಿಂದೆ, ಅಯೋಧ್ಯೆಯಲ್ಲಿನ 2.77 ಎಕರೆ ವಿವಾದಿತ ಭೂಮಿಯನ್ನು ನಿರ್ಮೋಹಿ ಅಖರಾ, ಸುನ್ನಿ ವಕ್ಫ್​ ಬೋರ್ಡ್, ಯುಪಿ ಸರ್ಕಾರ ಮತ್ತು ರಾಮ್‌ಲಲ್ಲಾ ವಿರಾಜ್ಮಾನ್ ನಡುವೆ ಸಮಾನವಾಗಿ ಹಂಚಿಕೆ ಮಾಡಲು ಆದೇಶಿಸಿದೆ. 16 ನೇ ಶತಮಾನದ ಬಾಬರಿ ಮಸೀದಿಯನ್ನು 1992 ರ ಡಿಸೆಂಬರ್ 6 ರಂದು ಕೆಡವಲಾಯಿತು.

Published On - 1:53 pm, Wed, 16 October 19

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ