AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ತಿದ್ದುಪಡಿ ಎತ್ತಿಹಿಡಿದ ಸುಪ್ರೀಂಕೋರ್ಟ್; ಅಪಾಯಕಾರಿ ತೀರ್ಪು ಎಂದ ವಿಪಕ್ಷ

"ಅಪಾಯಕಾರಿ ತೀರ್ಪು ಅಲ್ಪಕಾಲಿಕವಾಗಿರುತ್ತದೆ ಮತ್ತು ಸಾಂವಿಧಾನಿಕ ನಿಬಂಧನೆಗಳು ಶೀಘ್ರದಲ್ಲೇ ಮೇಲುಗೈ ಸಾಧಿಸುತ್ತವೆ ಎಂದು ನಾವು ಭಾವಿಸುತ್ತೇವೆ" ಎಂದು ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ, ಆಮ್ ಆದ್ಮಿ ಪಕ್ಷ, ಸಿಪಿಐ(ಎಂ), ಸಮಾಜವಾದಿ ಪಕ್ಷ ಮತ್ತು ಆರ್‌ಜೆಡಿ ಪ್ರತಿನಿಧಿಗಳು ಸಹಿ ಹಾಕಿರುವ ಪ್ರಕಟಣೆಯಲ್ಲಿ ಹೇಳಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ತಿದ್ದುಪಡಿ ಎತ್ತಿಹಿಡಿದ ಸುಪ್ರೀಂಕೋರ್ಟ್; ಅಪಾಯಕಾರಿ ತೀರ್ಪು ಎಂದ ವಿಪಕ್ಷ
ಸುಪ್ರೀಂಕೋರ್ಟ್
TV9 Web
| Edited By: |

Updated on: Aug 03, 2022 | 8:39 PM

Share

ದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಗೆ (PMLA) 2019 ರಲ್ಲಿ ಮಾಡಲಾದ ತಿದ್ದುಪಡಿಗಳನ್ನು ಎತ್ತಿಹಿಡಿಯುವ ಸುಪ್ರೀಂಕೋರ್ಟ್ (Supreme Court) ತೀರ್ಪನ್ನು 17 ವಿರೋಧ ಪಕ್ಷಗಳು “ಅಪಾಯಕಾರಿ” ಎಂದು ಕರೆದಿವೆ. ಈ ಕಾಯ್ದೆ ಜಾರಿ ನಿರ್ದೇಶನಾಲಯದಂತಹ ಏಜೆನ್ಸಿಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡುತ್ತದೆ. “ಅಪಾಯಕಾರಿ ತೀರ್ಪು ಅಲ್ಪಕಾಲಿಕವಾಗಿರುತ್ತದೆ ಮತ್ತು ಸಾಂವಿಧಾನಿಕ ನಿಬಂಧನೆಗಳು ಶೀಘ್ರದಲ್ಲೇ ಮೇಲುಗೈ ಸಾಧಿಸುತ್ತವೆ ಎಂದು ನಾವು ಭಾವಿಸುತ್ತೇವೆ” ಎಂದು ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ, ಆಮ್ ಆದ್ಮಿ ಪಕ್ಷ, ಸಿಪಿಐ(ಎಂ), ಸಮಾಜವಾದಿ ಪಕ್ಷ ಮತ್ತು ಆರ್‌ಜೆಡಿ ಪ್ರತಿನಿಧಿಗಳು ಸಹಿ ಹಾಕಿರುವ ಪ್ರಕಟಣೆಯಲ್ಲಿ ಹೇಳಿದೆ. ಸುಮಾರು 250 ಅರ್ಜಿಗಳಿಂದ ಪ್ರಶ್ನಿಸಲ್ಪಟ್ಟಿದ್ದ ತಿದ್ದುಪಡಿ ಕಾನೂನಿನಡಿಯಲ್ಲಿ ಇಡಿಗೆ ನೀಡಲಾದ ವ್ಯಾಪಕ ಶ್ರೇಣಿಯ ಅಧಿಕಾರಗಳ ಸಿಂಧುತ್ವವನ್ನು ಜುಲೈ 27 ರಂದು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಬಂಧಿಸುವ ಅಧಿಕಾರ ಮತ್ತು “ಅಪರಾಧದ ಆದಾಯ” ಎಂಬ ಅಸ್ಪಷ್ಟ ವ್ಯಾಖ್ಯಾನವನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂಬ ಪ್ರಮುಖ ವಾದಗಳನ್ನು ನ್ಯಾಯಾಲಯ ತಿರಸ್ಕರಿಸಿತು.ಆಡಳಿತಾರೂಢ ಪಕ್ಷಗಳು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ರಾಜಕೀಯ ಸೇಡು ತೀರಿಸಿಕೊಳ್ಳುತ್ತಿರುವ ಬಗ್ಗೆ ಮತ್ತೊಮ್ಮೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ವಿರೋಧ ಪಕ್ಷಗಳು ಹೇಳಿವೆ.

ನರೇಂದ್ರ ಮೋದಿ ಸರ್ಕಾರದ ಎಂಟು ವರ್ಷಗಳಲ್ಲಿ ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ಇಡಿ ದಾಳಿಗಳು 26 ಪಟ್ಟು ಹೆಚ್ಚಾಗಿದೆ, ಆದರೆ ಶಿಕ್ಷೆಯ ಪ್ರಮಾಣವು ಅತ್ಯಂತ ಕಡಿಮೆಯಾಗಿದೆ. ಹಣಕಾಸು ಸಚಿವಾಲಯವು ರಾಜ್ಯಸಭೆಯಲ್ಲಿ ಹಂಚಿಕೊಂಡ ಮಾಹಿತಿಯ ಪ್ರಕಾರ 3,010 ಅಕ್ರಮ ಹಣ ವ್ಯವಹಾರ ಸಂಬಂಧಿತ ಹುಡುಕಾಟಗಳಲ್ಲಿ ಕೇವಲ 23 ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ಈ ಪೈಕಿ 112 ಶೋಧಗಳಲ್ಲಿ ಯಾವುದೇ ಅಕ್ರಮ ಹಣ ವ್ಯವಹಾರ ಅಪರಾಧಗಳು ಕಂಡುಬಂದಿಲ್ಲ.

ನ್ಯಾಷನಲ್ ಹೆರಾಲ್ಡ್ ಪ್ರಕಟಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿಯನ್ನು ಇಡಿ ಪ್ರಶ್ನಿಸಿದಾಗ ಹೆಚ್ಚಿನ ಆರೋಪಗಳು ಪ್ರತಿಧ್ವನಿಸಿವೆ. ಇದಲ್ಲದೆ, ಸಂಸತ್ತಿನಲ್ಲಿ ಈ ತಿದ್ದುಪಡಿಗಳನ್ನು ಯಾವ ರೀತಿ ಮಾಡಲಾಯಿತು ಎಂದು ವಿಪಕ್ಷಗಳು ಪ್ರಶ್ನಿಸಿವೆ .ಆ ಪ್ರಶ್ನೆಯು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿದೆ. “ಹಣ ಮಸೂದೆ” ಎಂದು ಪರಿಚಯಿಸಲಾದ ಹಣಕಾಸು ಕಾಯಿದೆಯಡಿಯಲ್ಲಿ ಇವುಗಳನ್ನು ಅಂಗೀಕರಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ನಾಳೆ ಸುಪ್ರೀಂ ಕೋರ್ಟ್ ಹಣಕಾಸು ಕಾಯ್ದೆ ಬಗ್ಗೆ ಸವಾಲು ಮಾಡಲಾದ ತಿದ್ದುಪಡಿಗಳು ಕಾನೂನಿನಲ್ಲಿ ಕೆಟ್ಟದಾಗಿದೆ ಎಂದು ಹೇಳಿದರೆ, ಇಡೀ ಪ್ರಕ್ರಿಯೆ ನಿಷ್ಪ್ರಯೋಜಕವಾಗುತ್ತದೆ ಮತ್ತು ನ್ಯಾಯಾಂಗದ ಸಮಯವನ್ನು ಕಳೆದುಕೊಳ್ಳುತ್ತದೆ ಎಂದು ವಿಪಕ್ಷ ಹೇಳಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ