AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಕಡಿತ ನಿರ್ಲಕ್ಷಿಸಲು ಸಾಧ್ಯವಿಲ್ಲ, ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಖಡಕ್ ಆದೇಶ

ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿರುವ ಬೀದಿ ನಾಯಿಗಳ ಹಾವಳಿ ಹಾಗೂ ನಾಗರಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಮತ್ತು ಕಠಿಣ ತೀರ್ಪನ್ನು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಮೇಲಿನ ದಾಳಿಗಳನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯದ ವರದಿ ಇಲ್ಲಿದೆ.

ನಾಯಿ ಕಡಿತ ನಿರ್ಲಕ್ಷಿಸಲು ಸಾಧ್ಯವಿಲ್ಲ, ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಖಡಕ್ ಆದೇಶ
ಬೀದಿ ನಾಯಿಗಳುImage Credit source: India TV
ನಯನಾ ರಾಜೀವ್
|

Updated on:May 19, 2026 | 3:13 PM

Share

ನವದೆಹಲಿ, ಮೇ 19: ದೇಶಾದ್ಯಂತ ಸಾರ್ವಜನಿಕ ಸ್ಥಳಗಳು ಮತ್ತು ರಸ್ತೆಗಳಿಂದ ಬೀದಿ ನಾಯಿ(Stray Dog)ಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಹಾಗೂ ಅವುಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಅತ್ಯಂತ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾನು ನವೆಂಬರ್ 2025 ರಲ್ಲಿ ನೀಡಿದ್ದ ಐತಿಹಾಸಿಕ ಆದೇಶವನ್ನು ಮಾರ್ಪಡಿಸಲು ಅಥವಾ ಹಿಂಪಡೆಯಲು ಕೋರಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ನ್ಯಾಯಾಲಯವು ಸಂಪೂರ್ಣವಾಗಿ ವಜಾಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ಇರುವಿಕೆ ಮತ್ತು ಅವುಗಳ ಸಂಖ್ಯೆ ಹೆಚ್ಚುತ್ತಿರುವುದು ಅತ್ಯಂತ ಆತಂಕಕಾರಿ ಎಂದು ನ್ಯಾಯಾಲಯ ಬಣ್ಣಿಸಿದೆ.

ಪ್ರಾಣಿ ಹಕ್ಕುಗಳ ಕಾರ್ಯಕರ್ತರ ವಾದ ತಳ್ಳಿಹಾಕಿದ ಕೋರ್ಟ್ ಸಾರ್ವಜನಿಕ ಸ್ಥಳಗಳಿಂದ ಹಿಡಿದುಕೊಂಡು ಹೋಗುವ ಬೀದಿ ನಾಯಿಗಳಿಗೆ ಕ್ರಿಮಿನಾಶಕ (Sterilization) ಚಿಕಿತ್ಸೆ ನೀಡಿದ ನಂತರ, ಅವುಗಳನ್ನು ಮತ್ತೆ ಅದೇ ಹಳೆಯ ಸ್ಥಳಗಳಿಗೆ ಬಿಡಬಾರದು ಎಂದು ನ್ಯಾಯಾಲಯ ಈ ಹಿಂದೆ ಆದೇಶಿಸಿತ್ತು. ಆದರೆ, ನಾಯಿಗಳನ್ನು ಬೇರೆ ಸ್ಥಳಗಳಿಗೆ ಸ್ಥಳಾಂತರಿಸುವುದರಿಂದ ಅವುಗಳು ದಿಗ್ಭ್ರಮೆಗೊಳ್ಳಬಹುದು, ಗೊಂದಲಕ್ಕೊಳಗಾಗಬಹುದು ಮತ್ತು ಇದರಿಂದ ಜನರ ಮೇಲಿನ ದಾಳಿಗಳು ಮತ್ತಷ್ಟು ಹೆಚ್ಚಾಗಬಹುದು ಎಂದು ಪ್ರಾಣಿ ಹಕ್ಕುಗಳ ಕಾರ್ಯಕರ್ತರು ನ್ಯಾಯಾಲಯದಲ್ಲಿ ವಾದಿಸಿದ್ದರು.

ಆದರೆ, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರಿದ್ದ ತ್ರಿಸದಸ್ಯ ಪೀಠವು ಈ ವಾದವನ್ನು ಒಪ್ಪಲು ನಿರಾಕರಿಸಿತು.

ಮುಗ್ಧ ಮಕ್ಕಳ ಮೇಲಿನ ದಾಳಿ ಕಣ್ಣಿಗೆ ಕಾಣುತ್ತಿಲ್ಲವೇ? ವಿಚಾರಣೆ ವೇಳೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ಪೀಠವು, ಬೀದಿ ನಾಯಿಗಳು ಸಾರ್ವಜನಿಕರ ಮೇಲೆ, ಅದರಲ್ಲೂ ವಿಶೇಷವಾಗಿ ಅಮಾಯಕ ಮುಗ್ಧ ಮಕ್ಕಳ ಮೇಲೆ ದಾಳಿ ನಡೆಸಿ ಪ್ರಾಣ ತೆಗೆಯುತ್ತಿರುವ ಭೀಕರ ನಿದರ್ಶನಗಳನ್ನು ನಾವು ಯಾವುದೇ ಕಾರಣಕ್ಕೂ ಕಡೆಗಣಿಸಲು ಸಾಧ್ಯವಿಲ್ಲ. ಸಾರ್ವಜನಿಕರ ಸುರಕ್ಷತೆಯೇ ನಮಗೆ ಮುಖ್ಯ ಎಂದು ಖಡಕ್ ಆಗಿ ಹೇಳಿತು. ಅರ್ಜಿದಾರರು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ನಿಯಮಗಳಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಬಲವಾದ ಕಾರಣಗಳನ್ನು ನೀಡಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ಮತ್ತಷ್ಟು ಓದಿ: ಮದುವೆ ಮನೆಯಲ್ಲಿ ಅತಿಥಿಗಳ ಮೇಲೆ ಬೀದಿ ನಾಯಿ ದಾಳಿ, 60ಕ್ಕೂ ಹೆಚ್ಚು ಮಂದಿಗೆ ಗಾಯ

ಬೀದಿ ನಾಯಿಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳದ ಮತ್ತು ಕೋರ್ಟ್‌ನ ಹಿಂದಿನ ಸೂಚನೆಗಳನ್ನು ಪಾಲಿಸಲು ವಿಫಲವಾದ ರಾಜ್ಯ ಸರ್ಕಾರಗಳ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ಹೊರಹಾಕಿತು.

ದೇಶದಲ್ಲಿ ಬೀದಿ ನಾಯಿಗಳ ಜನಸಂಖ್ಯೆ ತೀವ್ರವಾಗಿ ಹೆಚ್ಚುತ್ತಿದೆ. ಆದರೆ ಅದಕ್ಕೆ ತಕ್ಕಂತೆ ಮೂಲಸೌಕರ್ಯಗಳನ್ನು ವಿಸ್ತರಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಯತ್ನಗಳು ಎಲ್ಲಿಯೂ ಕಾಣಿಸುತ್ತಿಲ್ಲ. ಕ್ರಿಮಿನಾಶಕ ಮತ್ತು ಲಸಿಕೆ ಅಭಿಯಾನಗಳು ಯಾವುದೇ ನಿರ್ದಿಷ್ಟ ಯೋಜನೆ ಇಲ್ಲದೆ, ಅತ್ಯಂತ ವಿರಳವಾಗಿ ನಡೆಯುತ್ತಿವೆ. ಇದು ಪ್ರಾಣಿ ಜನನ ನಿಯಂತ್ರಣ ಚೌಕಟ್ಟಿನ ಮೂಲ ಉದ್ದೇಶವನ್ನೇ ಸೋಲಿಸುತ್ತದೆ ಎಂದು ಕೋರ್ಟ್ ಟೀಕಿಸಿತು.

ಒಂದು ವೇಳೆ ರಾಜ್ಯ ಸರ್ಕಾರಗಳು ಮೊದಲೇ ದೂರದೃಷ್ಟಿಯಿಂದ ವರ್ತಿಸಿ, ವ್ಯವಸ್ಥಿತವಾಗಿ ಕೆಲಸ ಮಾಡಿದ್ದರೆ ಇಂದು ಪರಿಸ್ಥಿತಿ ಇಷ್ಟೊಂದು ಭೀಕರ ಸ್ವರೂಪ ಪಡೆದುಕೊಳ್ಳುತ್ತಿರಲಿಲ್ಲ ಎಂದು ನ್ಯಾಯಾಲಯ ವಿಷಾದಿಸಿತು. ಸುಪ್ರೀಂ ಕೋರ್ಟ್‌ನ ಈ ಕಠಿಣ ನಿಲುವಿನಿಂದಾಗಿ ಇನ್ಮುಂದೆ ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ತಡೆಗೆ ರಾಜ್ಯ ಸರ್ಕಾರಗಳು ಮತ್ತು ಸ್ಥಳೀಯ ಸಂಸ್ಥೆಗಳು ಯುದ್ಧೋಪಾದಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:19 am, Tue, 19 May 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌