AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್ ಕಾನ್ಸನ್​ಟ್ರೇಟರ್ ಆಮದು ಮೇಲೆ ಜಿಎಸ್​ಟಿ ರದ್ದು; ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ಆಕ್ಸಿಜನ್ ಸಾಂದ್ರಕ ಮೇಲೆ ಜಿಎಸ್​ಟಿ ವಿಧಿಸುವುದು ಅಸಂವಿಧಾನಿಕ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು. ಆ ಬಳಿಕ, ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿತ್ತು.

ಆಕ್ಸಿಜನ್ ಕಾನ್ಸನ್​ಟ್ರೇಟರ್ ಆಮದು ಮೇಲೆ ಜಿಎಸ್​ಟಿ ರದ್ದು; ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ
ಸುಪ್ರೀಂಕೋರ್ಟ್
TV9 Web
| Edited By: |

Updated on:Aug 14, 2021 | 12:50 PM

Share

ದೆಹಲಿ: ಆಮ್ಲಜನಕ ಸಾಂದ್ರಕ ಆಮದಿನ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಚಾರಕ್ಕೆ ಸಂಬಂಧಿಸಿ ಪ್ರಮುಖ ಬೆಳವಣಿಗೆ ಇಂದು (ಜೂನ್ 1) ನಡೆದಿದೆ. ದೆಹಲಿ ಹೈಕೋರ್ಟ್ ನೀಡಿದ್ದ ಜಿಎಸ್‌ಟಿ ರದ್ದು ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ಸೂಚಿಸಿದೆ. ಆಕ್ಸಿಜನ್ ಸಾಂದ್ರಕ ಮೇಲೆ ಜಿಎಸ್​ಟಿ ವಿಧಿಸುವುದು ಅಸಂವಿಧಾನಿಕ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು. ಆ ಬಳಿಕ, ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿತ್ತು. ಇದೀಗ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ಹೊರಡಿಸಿದೆ.

ಆಗಸ್ಟ್ 31ರವರೆಗೆ  ಕೊವಿಡ್ ಚಿಕಿತ್ಸೆಗೆ ಬಳಸುವ ವೈದ್ಯಕೀಯ ಉಪಕರಣಗಳ ಆಮದಿನ ಮೇಲೆ ಜಿಎಸ್​ಟಿ ವಿನಾಯತಿ ನೀಡಲು ಮೇ 28ರಂದು ನಡೆದ ಜಿಎಸ್​ಟಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ 43ನೇ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿತ್ತು. ಬ್ಲ್ಯಾಕ್ ಫಂಗಸ್‌ಗೆ ನೀಡುವ ಔಷಧಕ್ಕೂ ಜಿಎಸ್​ಟಿ ವಿನಾಯತಿ ಘೋಷಿಸಲಾಗಿತ್ತು. ಜಿಎಸ್​ಟಿ ಮಂಡಳಿಯ ಸಭೆ ಮುಗಿಸಿದ ನಂತರ ಸ್ವತಃ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.

ಜನರು ಮೊದಲೇ ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್​ನಿಂದ ಜನರ ದುಡಿಮೆ, ಸಂಪಾದನೆಗೂ ಹೊಡೆತ ಬಿದ್ದಿದೆ. ಕೊರೊನಾದಿಂದ ಜೀವ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಇಂಥ ಸ್ಥಿತಿಯಲ್ಲಿ ಜೀವ ಉಳಿಸುವ ಔಷಧಿಗಳು, ಕೊರೊನಾ ಲಸಿಕೆ, ವೆಂಟಿಲೇಟರ್​ಗಳ ಮೇಲೆಲ್ಲಾ ಜಿಎಸ್‌ಟಿ ವಿಧಿಸಿ ತೆರಿಗೆ ಸಂಗ್ರಹಿಸುವುದು ಎಷ್ಟು ಸರಿ ಎಂಬ ಚರ್ಚೆಗಳು ನಡೆಯುತ್ತಿದೆ. ಹೀಗಾಗಿ ಈಗ ಕೊರೊನಾ ಲಸಿಕೆ, ಔಷಧಿಗಳ ಮೇಲೆ ಜಿಎಸ್‌ಟಿ ಇರಬೇಕೇ ಬೇಡವೇ? ಎಂಬ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಜಿಎಸ್‌ಟಿ ಮಂಡಳಿಯ ಸಭೆ ಕರೆಯಲಾಗಿತ್ತು.

ಜಿಎಸ್‌ಟಿ ಬಗ್ಗೆ ಈ ಸಭೆಯಲ್ಲಿ ಕೈಗೊಂಡ ತೀರ್ಮಾನವೇ ಅಂತಿಮ. ಹೀಗಾಗಿ  ಇಂದು (ಮೇ 28) ಶುಕ್ರವಾರ ನಡೆದ ಜಿಎಸ್‌ಟಿ ಮಂಡಳಿ ಸಭೆ ಮಹತ್ವ ಪಡೆದುಕೊಂಡಿತ್ತು.  ರಾಜ್ಯ ಸರ್ಕಾರಗಳ ಒತ್ತಾಯದ ಮೇರೆಗೆ 7 ತಿಂಗಳ ಬಳಿಕ ಜಿಎಸ್‌ಟಿ ಮಂಡಳಿಯ ಸಭೆಯನ್ನು ಕರೆಯಲಾಗಿತ್ತು. ಜಿಎಸ್‌ಟಿ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಹಿಸಿದ್ದರು. ಕೇಂದ್ರದ ಹಣಕಾಸು ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲ ರಾಜ್ಯದ ಹಣಕಾಸು ಸಚಿವರು ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಕೊರೊನಾಗೆ 13 ತಿಂಗಳ ಮಗು ಬಲಿ, ಆಕ್ಸಿಜನ್ ಕೊರತೆ ಕಾರಣವೆಂದು ಕಣ್ಣೀರಿಟ್ಟ ತಂದೆ

ಪ್ರತಿ ಜಿಲ್ಲೆಗಳಲ್ಲಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ

Published On - 3:19 pm, Tue, 1 June 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?