AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್ ಕಾನ್ಸನ್​ಟ್ರೇಟರ್ ಆಮದು ಮೇಲೆ ಜಿಎಸ್​ಟಿ ರದ್ದು; ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ಆಕ್ಸಿಜನ್ ಸಾಂದ್ರಕ ಮೇಲೆ ಜಿಎಸ್​ಟಿ ವಿಧಿಸುವುದು ಅಸಂವಿಧಾನಿಕ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು. ಆ ಬಳಿಕ, ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿತ್ತು.

ಆಕ್ಸಿಜನ್ ಕಾನ್ಸನ್​ಟ್ರೇಟರ್ ಆಮದು ಮೇಲೆ ಜಿಎಸ್​ಟಿ ರದ್ದು; ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ
ಸುಪ್ರೀಂಕೋರ್ಟ್
Follow us
TV9 Web
| Updated By: ganapathi bhat

Updated on:Aug 14, 2021 | 12:50 PM

ದೆಹಲಿ: ಆಮ್ಲಜನಕ ಸಾಂದ್ರಕ ಆಮದಿನ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಚಾರಕ್ಕೆ ಸಂಬಂಧಿಸಿ ಪ್ರಮುಖ ಬೆಳವಣಿಗೆ ಇಂದು (ಜೂನ್ 1) ನಡೆದಿದೆ. ದೆಹಲಿ ಹೈಕೋರ್ಟ್ ನೀಡಿದ್ದ ಜಿಎಸ್‌ಟಿ ರದ್ದು ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ಸೂಚಿಸಿದೆ. ಆಕ್ಸಿಜನ್ ಸಾಂದ್ರಕ ಮೇಲೆ ಜಿಎಸ್​ಟಿ ವಿಧಿಸುವುದು ಅಸಂವಿಧಾನಿಕ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು. ಆ ಬಳಿಕ, ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿತ್ತು. ಇದೀಗ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ಹೊರಡಿಸಿದೆ.

ಆಗಸ್ಟ್ 31ರವರೆಗೆ  ಕೊವಿಡ್ ಚಿಕಿತ್ಸೆಗೆ ಬಳಸುವ ವೈದ್ಯಕೀಯ ಉಪಕರಣಗಳ ಆಮದಿನ ಮೇಲೆ ಜಿಎಸ್​ಟಿ ವಿನಾಯತಿ ನೀಡಲು ಮೇ 28ರಂದು ನಡೆದ ಜಿಎಸ್​ಟಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ 43ನೇ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿತ್ತು. ಬ್ಲ್ಯಾಕ್ ಫಂಗಸ್‌ಗೆ ನೀಡುವ ಔಷಧಕ್ಕೂ ಜಿಎಸ್​ಟಿ ವಿನಾಯತಿ ಘೋಷಿಸಲಾಗಿತ್ತು. ಜಿಎಸ್​ಟಿ ಮಂಡಳಿಯ ಸಭೆ ಮುಗಿಸಿದ ನಂತರ ಸ್ವತಃ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.

ಜನರು ಮೊದಲೇ ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್​ನಿಂದ ಜನರ ದುಡಿಮೆ, ಸಂಪಾದನೆಗೂ ಹೊಡೆತ ಬಿದ್ದಿದೆ. ಕೊರೊನಾದಿಂದ ಜೀವ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಇಂಥ ಸ್ಥಿತಿಯಲ್ಲಿ ಜೀವ ಉಳಿಸುವ ಔಷಧಿಗಳು, ಕೊರೊನಾ ಲಸಿಕೆ, ವೆಂಟಿಲೇಟರ್​ಗಳ ಮೇಲೆಲ್ಲಾ ಜಿಎಸ್‌ಟಿ ವಿಧಿಸಿ ತೆರಿಗೆ ಸಂಗ್ರಹಿಸುವುದು ಎಷ್ಟು ಸರಿ ಎಂಬ ಚರ್ಚೆಗಳು ನಡೆಯುತ್ತಿದೆ. ಹೀಗಾಗಿ ಈಗ ಕೊರೊನಾ ಲಸಿಕೆ, ಔಷಧಿಗಳ ಮೇಲೆ ಜಿಎಸ್‌ಟಿ ಇರಬೇಕೇ ಬೇಡವೇ? ಎಂಬ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಜಿಎಸ್‌ಟಿ ಮಂಡಳಿಯ ಸಭೆ ಕರೆಯಲಾಗಿತ್ತು.

ಜಿಎಸ್‌ಟಿ ಬಗ್ಗೆ ಈ ಸಭೆಯಲ್ಲಿ ಕೈಗೊಂಡ ತೀರ್ಮಾನವೇ ಅಂತಿಮ. ಹೀಗಾಗಿ  ಇಂದು (ಮೇ 28) ಶುಕ್ರವಾರ ನಡೆದ ಜಿಎಸ್‌ಟಿ ಮಂಡಳಿ ಸಭೆ ಮಹತ್ವ ಪಡೆದುಕೊಂಡಿತ್ತು.  ರಾಜ್ಯ ಸರ್ಕಾರಗಳ ಒತ್ತಾಯದ ಮೇರೆಗೆ 7 ತಿಂಗಳ ಬಳಿಕ ಜಿಎಸ್‌ಟಿ ಮಂಡಳಿಯ ಸಭೆಯನ್ನು ಕರೆಯಲಾಗಿತ್ತು. ಜಿಎಸ್‌ಟಿ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಹಿಸಿದ್ದರು. ಕೇಂದ್ರದ ಹಣಕಾಸು ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲ ರಾಜ್ಯದ ಹಣಕಾಸು ಸಚಿವರು ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಕೊರೊನಾಗೆ 13 ತಿಂಗಳ ಮಗು ಬಲಿ, ಆಕ್ಸಿಜನ್ ಕೊರತೆ ಕಾರಣವೆಂದು ಕಣ್ಣೀರಿಟ್ಟ ತಂದೆ

ಪ್ರತಿ ಜಿಲ್ಲೆಗಳಲ್ಲಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ

Published On - 3:19 pm, Tue, 1 June 21

ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ