Sign In

By signing in or creating an account, you agree with Associated Broadcasting Company's Terms & Conditions and Privacy Policy.

ICSE Board Results 2021: 6 ವರ್ಷದ ಅಂಕ ಆಧರಿಸಿ 12ನೇ ತರಗತಿ ಫಲಿತಾಂಶ; ತಾತ್ವಿಕ ಒಪ್ಪಿಗೆ ನೀಡಿದ ಸುಪ್ರೀಂಕೋರ್ಟ್

CISCE Board Class 12 Result 2021: ಕಳೆದ ಆರು ವರ್ಷದ ಫಲಿತಾಂಶ ಆಧಾರದ ಮೇಲೆ 12 ನೇ ತರಗತಿ ಫಲಿತಾಂಶ ಪ್ರಕಟ ಮಾಡುವ ಬಗ್ಗೆ ಯೋಜಿಸಲಾಗಿದೆ. ಈ ಬಗ್ಗೆ ಜೂನ್ 21ರಂದು ಸುಪ್ರೀಂ ಕೋರ್ಟ್ ವಿಸ್ತೃತ ಆದೇಶ ನೀಡಲಿದೆ.

ICSE Board Results 2021: 6 ವರ್ಷದ ಅಂಕ ಆಧರಿಸಿ 12ನೇ ತರಗತಿ ಫಲಿತಾಂಶ; ತಾತ್ವಿಕ ಒಪ್ಪಿಗೆ ನೀಡಿದ ಸುಪ್ರೀಂಕೋರ್ಟ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Jun 17, 2021 | 3:57 PM

ದೆಹಲಿ: ಈ ಮೊದಲ 6 ವರ್ಷದ ಫಲಿತಾಂಶ ಆಧರಿಸಿ 12ನೇ ತರಗತಿ ಫಲಿತಾಂಶ ನೀಡುವ ಬಗ್ಗೆ ಸುಪ್ರೀಂ ಕೋರ್ಟ್ ತಾತ್ವಿಕ ಒಪ್ಪಿಗೆ ಸೂಚಿಸಿದೆ. CBSE ಹಾಗೂ ICSE ಪರೀಕ್ಷಾ ಫಲಿತಾಂಶಗಳ ಮಾನದಂಡಕ್ಕೆ ಸುಪ್ರೀಂ ಕೋರ್ಟ್ ತಾತ್ವಿಕ ಒಪ್ಪಿಗೆ ನೀಡಿದೆ. ICSE ಪರ ವಕೀಲರು, ಸುಪ್ರೀಂ ಕೋರ್ಟ್‌ಗೆ ತಮ್ಮ ನಿಲುವು ತಿಳಿಸಿದ್ದರು.

ಈ ಬಗ್ಗೆ ಜೂನ್ 21ರಂದು ಸುಪ್ರೀಂ ಕೋರ್ಟ್ ವಿಸ್ತೃತ ಆದೇಶ ನೀಡಲಿದೆ. ICSE ಯಿಂದ ಕಳೆದ ಆರು ವರ್ಷದ ಫಲಿತಾಂಶ ಆಧಾರದ ಮೇಲೆ 12 ನೇ ತರಗತಿ ಫಲಿತಾಂಶ ಪ್ರಕಟ ಮಾಡುವ ಬಗ್ಗೆ ಯೋಜಿಸಲಾಗಿದೆ. ಸುಪ್ರೀಂ ಕೋರ್ಟ್ ಗೆ ICSE ಪರ ವಕೀಲರು ತಮ್ಮ ನಿಲುವು ತಿಳಿಸಿದ್ದಾರೆ. CBSE, ICSE ಪರೀಕ್ಷಾ ಫಲಿತಾಂಶಗಳ ಮಾನದಂಡಕ್ಕೆ ಸುಪ್ರೀಂ ಕೋರ್ಟ್ ತಾತ್ವಿಕ ಒಪ್ಪಿಗೆ ನೀಡಿದೆ. ಈ ಬಗ್ಗೆ ಜೂನ್ 21 ರಂದು ವಿಸ್ತೃತ ಆದೇಶ ನೀಡುವ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದೆ.

ಸಿಬಿಎಸ್​ಇ 12ನೇ ತರಗತಿಯ ಫಲಿತಾಂಶ ಜುಲೈ 31ರ ಹಾಗೆ ಪ್ರಕಟವಾಗುವ ಸಾಧ್ಯತೆ ಇದೆ. ಇದಕ್ಕೂ ಮೊದಲು ಫಲಿತಾಂಶಕ್ಕೆ ಸಂಬಂಧಿಸಿದಂತೆ ಅಂಕ ಪರಿಗಣನೆಯ ಮಾನದಂಡದ ಕುರಿತು ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡುತ್ತಿರುವ ಸಿಬಿಎಸ್​ಇ ಬೋರ್ಡ್​, 12ನೇ ತರಗತಿ ಮಕ್ಕಳ ಅಂಕವನ್ನು 11ನೇ ತರಗತಿ ಮತ್ತು 10ನೇ ತರಗತಿ ಪರೀಕ್ಷಾ ಫಲಿತಾಂಶದ ಸಹಾಯದೊಂದಿಗೆ ನಿರ್ಧರಿಸುವುದಾಗಿ ತಿಳಿಸಿತ್ತು. ಅಲ್ಲದೇ, ಒಟ್ಟಾರೆ ಫಲಿತಾಂಶಕ್ಕೆ 12ನೇ ತರಗತಿ ಮಕ್ಕಳ ಈ ಹಿಂದಿನ ಪೂರ್ವ ಸಿದ್ಧತಾ ಪರೀಕ್ಷೆಗಳ ಅಂಕವೂ ಪರಿಗಣಿಸಲ್ಪಡುತ್ತದೆ ಎಂದು ಮಾಹಿತಿ ನೀಡಿತ್ತು.

ಈ ಪೈಕಿ ಶೇ.40ರಷ್ಟು ಅಂಕವು 12ನೇ ತರಗತಿಯಲ್ಲಿ ನಡೆಸಲಾದ ಬೇರೆ ಪರೀಕ್ಷೆಗಳ ಆಧಾರದಿಂದ ಪರಿಗಣಿಸಲ್ಪಟ್ಟರೆ ಶೇ.60ರಷ್ಟು ಅಂಕವು 11 ಹಾಗೂ 10ನೇ ತರಗತಿಯ ಪರೀಕ್ಷೆಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಸುಪ್ರೀಂಕೋರ್ಟ್​ಗೆ ತಿಳಿಸಲಾಗಿತ್ತು. ನ್ಯಾಯಮೂರ್ತಿ ಎ ಎಂ ಖಾನ್​ವಿಲ್ಕರ್ ಹಾಗೂ ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ಪೀಠವು ಬೋರ್ಡ್​ನ ಅಭಿಪ್ರಾಯವನ್ನು ಇಂದು (ಜೂನ್ 17) ಆಲಿಸುತ್ತಿದ್ದು, ಶೀಘ್ರದಲ್ಲಿ ಸ್ಪಷ್ಟ ಚಿತ್ರಣ ದೊರಕಲಿದೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: Karnataka PUC Result 2021: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ

ಜುಲೈ ತಿಂಗಳ 3ನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ, ಹೇಗಿದೆ ಗೊತ್ತಾ ಶಿಕ್ಷಣ ಇಲಾಖೆ ತಯಾರಿ

Published On - 3:37 pm, Thu, 17 June 21

ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು