AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ನಿಮ್ಮ ಹಣಕ್ಕಿಂತ ಗೌಪ್ಯತೆ ಮುಖ್ಯ: ವಾಟ್ಸ್ಆ್ಯಪ್​ಗೆ ಸುಪ್ರೀಂಕೋರ್ಟ್ ನೋಟಿಸ್

Privacy Policy: ಭಾರತದಲ್ಲಿ ಹೊಸ ಗೌಪ್ಯತಾ ನೀತಿ ಅನುಷ್ಠಾನಕ್ಕೆ ತರುವುದನ್ನು ತಡೆ ಹಿಡಿಯಬೇಕು ಎಂದು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಜನರು ಗೌಪ್ಯತೆ ಬಗ್ಗೆ ಕಾಳಜಿ ವಹಿಸಿದ್ದಾರೆ. ಹಣಕ್ಕಿಂತಲೂ ನಾಗರಿಕರ ಗೌಪ್ಯತೆ ಮುಖ್ಯ ಎಂದಿದೆ.

WhatsApp: ನಿಮ್ಮ ಹಣಕ್ಕಿಂತ ಗೌಪ್ಯತೆ ಮುಖ್ಯ: ವಾಟ್ಸ್ಆ್ಯಪ್​ಗೆ ಸುಪ್ರೀಂಕೋರ್ಟ್ ನೋಟಿಸ್
ಸುಪ್ರೀಂ ಕೋರ್ಟ್​
ರಶ್ಮಿ ಕಲ್ಲಕಟ್ಟ
|

Updated on:Feb 15, 2021 | 6:57 PM

Share

ನವದೆಹಲಿ: ಹೊಸ ಗೌಪ್ಯತೆ ನೀತಿ ಬಗ್ಗೆ ವಾಟ್ಸ್ಆ್ಯಪ್​ಗೆ ಸುಪ್ರೀಂಕೋರ್ಟ್ ಸೋಮವಾರ ನೋಟಿಸ್ ನೀಡಿದೆ. ವಾಟ್ಸ್ಆ್ಯಪ್​ನಲ್ಲಿ ಭಾರತೀಯರಿಗಿಂತ ಹೆಚ್ಚಿನ ಗೌಪ್ಯತೆಯನ್ನು ಯುರೋಪಿಯನ್ನರಿಗೆ ನೀಡಲಾಗುತ್ತಿದೆ ಎಂಬ ಆರೋಪದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಈ ಬಗ್ಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡಬೇಕು ಎಂದು ಸರ್ಕಾರ ಮತ್ತು ವಾಟ್ಸ್ಆ್ಯಪ್​ಗೆ ಸೂಚಿಸಿದೆ.

ಭಾರತದಲ್ಲಿ ಹೊಸ ಗೌಪ್ಯತಾ ನೀತಿ ಅನುಷ್ಠಾನಕ್ಕೆ ತರುವುದನ್ನು ತಡೆ ಹಿಡಿಯಬೇಕು ಎಂದು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಜನರು ಗೌಪ್ಯತೆ ಬಗ್ಗೆ ಕಾಳಜಿ ವಹಿಸಿದ್ದಾರೆ. ಹಣಕ್ಕಿಂತಲೂ ನಾಗರಿಕರ ಗೌಪ್ಯತೆ ಮುಖ್ಯ . ಜನರು ಗೌಪ್ಯತೆ ಬಗ್ಗೆ ಆತಂಕಗೊಂಡಿದ್ದಾರೆ. ಅವರ ಗೌಪ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಾಧೀಶ ಎಸ್.. ಬೋಬಡೆ ಅವರ ನೇತೃತ್ವದ ನ್ಯಾಯಪೀಠವು ಕರ್ಮಣ್ಯ ಸಿಂಗ್ ಸರೀನ್ ಅವರ ಮನವಿ ವಿಚಾರಣೆ ನಡೆಸಿ ಸರ್ಕಾರ ಮತ್ತು ವಾಟ್ಸ್ಆ್ಯಪ್ ಕಂಪನಿಗೆ ನೋಟಿಸ್ ನೀಡಿದೆ.  ನಾಲ್ಕುವಾರಗಳ ನಂತರ ಮುಂದಿನ ವಿಚಾರಣೆ ನಡೆಸಲಿದೆ.

ಇದನ್ನೂ ಓದಿ:  ವಾಟ್ಸ್​ಆ್ಯಪ್ ಹೊಸ ಪ್ರೈವೆಸಿ ಪಾಲಿಸಿಯಲ್ಲಿ ಭಾರತೀಯರಿಗೆ ತಾರತಮ್ಯ: ಕೇಂದ್ರ ಸರ್ಕಾರ

ಬಳಕೆದಾರರ ಮಾಹಿತಿಯನ್ನು ಹಂಚಲಾಗುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದ ವಾಟ್ಸ್ಆ್ಯಪ್, ವಿಶೇಷ ಡೇಟಾ ಸುರಕ್ಷಾ ಕಾನೂನು ಇರುವ ಐರೋಪ್ಯ ರಾಷ್ಟ್ರಗಳನ್ನು ಹೊರತು ಪಡಿಸಿ ಬಾಕಿ ಎಲ್ಲ ದೇಶಗಳಲ್ಲಿಯೂ ಒಂದೇ ಗೌಪ್ಯತಾ ನೀತಿ ಇದೆ. ಒಂದು ವೇಳೆ ಭಾರತದಲ್ಲಿಯೂ ಇದೇ ರೀತಿಯ ಕಾನೂನು ಇದ್ದರೆ ಇಲ್ಲಿಯೂ ಯುರೋಪ್ ರಾಷ್ಟ್ರಗಳಂತೆಯೇ ಗೌಪ್ಯತಾ ನೀತಿ ಇರುತ್ತಿತ್ತು ಎಂದು ಹೇಳಿದೆ. ಇದಕ್ಕೆ ಉತ್ತರಿಸಿದ ಸುಪ್ರೀಂಕೋರ್ಟ್, ಕಂಪನಿಯ ಮೌಲ್ಯಕ್ಕಿಂತ ಜನರು ಗೌಪ್ಯತೆ ಬಗ್ಗೆ ಕಾಳಜಿ ವಹಿಸಿದ್ದಾರೆ ಎಂದು ಹೇಳಿದೆ.

Published On - 6:51 pm, Mon, 15 February 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ