AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ನಿಮ್ಮ ಹಣಕ್ಕಿಂತ ಗೌಪ್ಯತೆ ಮುಖ್ಯ: ವಾಟ್ಸ್ಆ್ಯಪ್​ಗೆ ಸುಪ್ರೀಂಕೋರ್ಟ್ ನೋಟಿಸ್

Privacy Policy: ಭಾರತದಲ್ಲಿ ಹೊಸ ಗೌಪ್ಯತಾ ನೀತಿ ಅನುಷ್ಠಾನಕ್ಕೆ ತರುವುದನ್ನು ತಡೆ ಹಿಡಿಯಬೇಕು ಎಂದು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಜನರು ಗೌಪ್ಯತೆ ಬಗ್ಗೆ ಕಾಳಜಿ ವಹಿಸಿದ್ದಾರೆ. ಹಣಕ್ಕಿಂತಲೂ ನಾಗರಿಕರ ಗೌಪ್ಯತೆ ಮುಖ್ಯ ಎಂದಿದೆ.

WhatsApp: ನಿಮ್ಮ ಹಣಕ್ಕಿಂತ ಗೌಪ್ಯತೆ ಮುಖ್ಯ: ವಾಟ್ಸ್ಆ್ಯಪ್​ಗೆ ಸುಪ್ರೀಂಕೋರ್ಟ್ ನೋಟಿಸ್
ಸುಪ್ರೀಂ ಕೋರ್ಟ್​
ರಶ್ಮಿ ಕಲ್ಲಕಟ್ಟ
|

Updated on:Feb 15, 2021 | 6:57 PM

Share

ನವದೆಹಲಿ: ಹೊಸ ಗೌಪ್ಯತೆ ನೀತಿ ಬಗ್ಗೆ ವಾಟ್ಸ್ಆ್ಯಪ್​ಗೆ ಸುಪ್ರೀಂಕೋರ್ಟ್ ಸೋಮವಾರ ನೋಟಿಸ್ ನೀಡಿದೆ. ವಾಟ್ಸ್ಆ್ಯಪ್​ನಲ್ಲಿ ಭಾರತೀಯರಿಗಿಂತ ಹೆಚ್ಚಿನ ಗೌಪ್ಯತೆಯನ್ನು ಯುರೋಪಿಯನ್ನರಿಗೆ ನೀಡಲಾಗುತ್ತಿದೆ ಎಂಬ ಆರೋಪದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಈ ಬಗ್ಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡಬೇಕು ಎಂದು ಸರ್ಕಾರ ಮತ್ತು ವಾಟ್ಸ್ಆ್ಯಪ್​ಗೆ ಸೂಚಿಸಿದೆ.

ಭಾರತದಲ್ಲಿ ಹೊಸ ಗೌಪ್ಯತಾ ನೀತಿ ಅನುಷ್ಠಾನಕ್ಕೆ ತರುವುದನ್ನು ತಡೆ ಹಿಡಿಯಬೇಕು ಎಂದು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಜನರು ಗೌಪ್ಯತೆ ಬಗ್ಗೆ ಕಾಳಜಿ ವಹಿಸಿದ್ದಾರೆ. ಹಣಕ್ಕಿಂತಲೂ ನಾಗರಿಕರ ಗೌಪ್ಯತೆ ಮುಖ್ಯ . ಜನರು ಗೌಪ್ಯತೆ ಬಗ್ಗೆ ಆತಂಕಗೊಂಡಿದ್ದಾರೆ. ಅವರ ಗೌಪ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಾಧೀಶ ಎಸ್.. ಬೋಬಡೆ ಅವರ ನೇತೃತ್ವದ ನ್ಯಾಯಪೀಠವು ಕರ್ಮಣ್ಯ ಸಿಂಗ್ ಸರೀನ್ ಅವರ ಮನವಿ ವಿಚಾರಣೆ ನಡೆಸಿ ಸರ್ಕಾರ ಮತ್ತು ವಾಟ್ಸ್ಆ್ಯಪ್ ಕಂಪನಿಗೆ ನೋಟಿಸ್ ನೀಡಿದೆ.  ನಾಲ್ಕುವಾರಗಳ ನಂತರ ಮುಂದಿನ ವಿಚಾರಣೆ ನಡೆಸಲಿದೆ.

ಇದನ್ನೂ ಓದಿ:  ವಾಟ್ಸ್​ಆ್ಯಪ್ ಹೊಸ ಪ್ರೈವೆಸಿ ಪಾಲಿಸಿಯಲ್ಲಿ ಭಾರತೀಯರಿಗೆ ತಾರತಮ್ಯ: ಕೇಂದ್ರ ಸರ್ಕಾರ

ಬಳಕೆದಾರರ ಮಾಹಿತಿಯನ್ನು ಹಂಚಲಾಗುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದ ವಾಟ್ಸ್ಆ್ಯಪ್, ವಿಶೇಷ ಡೇಟಾ ಸುರಕ್ಷಾ ಕಾನೂನು ಇರುವ ಐರೋಪ್ಯ ರಾಷ್ಟ್ರಗಳನ್ನು ಹೊರತು ಪಡಿಸಿ ಬಾಕಿ ಎಲ್ಲ ದೇಶಗಳಲ್ಲಿಯೂ ಒಂದೇ ಗೌಪ್ಯತಾ ನೀತಿ ಇದೆ. ಒಂದು ವೇಳೆ ಭಾರತದಲ್ಲಿಯೂ ಇದೇ ರೀತಿಯ ಕಾನೂನು ಇದ್ದರೆ ಇಲ್ಲಿಯೂ ಯುರೋಪ್ ರಾಷ್ಟ್ರಗಳಂತೆಯೇ ಗೌಪ್ಯತಾ ನೀತಿ ಇರುತ್ತಿತ್ತು ಎಂದು ಹೇಳಿದೆ. ಇದಕ್ಕೆ ಉತ್ತರಿಸಿದ ಸುಪ್ರೀಂಕೋರ್ಟ್, ಕಂಪನಿಯ ಮೌಲ್ಯಕ್ಕಿಂತ ಜನರು ಗೌಪ್ಯತೆ ಬಗ್ಗೆ ಕಾಳಜಿ ವಹಿಸಿದ್ದಾರೆ ಎಂದು ಹೇಳಿದೆ.

Published On - 6:51 pm, Mon, 15 February 21

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ