ಕಡುಕಷ್ಟ ಪಡುತ್ತಿದ್ದ ವಲಸೆ ಕಾರ್ಮಿಕರ ಕೈಹಿಡಿದ ಸುಪ್ರೀಂಕೋರ್ಟ್!

ದೆಹಲಿ: ಕೊನೆಗೂ ಸುಪ್ರೀಂಕೋರ್ಟ್ ವಲಸೆ ಕಾರ್ಮಿಕರ ಕಷ್ಟಕ್ಕೆ ಮಿಡಿದಿದೆ. ಕೊರೊನಾ ಕ್ರಮಿಯ ಅಟ್ಟಹಾದ ನಡುವೆ ವಲಸೆ ಕಾರ್ಮಿಕರ ಸಂಕಷ್ಟದ ಹಿನ್ನೆಲೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಇತ್ತೀಚೆಗೆ ದೇಶಾದ್ಯಂತ ಕಡುಕಷ್ಟ ಪಡುತ್ತಿದ್ದ ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಕಾರ್ಮಿಕರ ಸಂಚಾರಕ್ಕೆ ಸಂಪೂರ್ಣ ಉಚಿತ ವ್ಯವಸ್ಥೆ ಮಾಡಬೇಕು. ಬಸ್, ರೈಲುಗಳಲ್ಲಿ ಸಂಪೂರ್ಣ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು. ಪ್ರಯಾಣದ ವೇಳೆ ಉಚಿತ ಊಟ, ನೀರಿನ ವ್ಯವಸ್ಥೆ ಮಾಡಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ […]

ಕಡುಕಷ್ಟ ಪಡುತ್ತಿದ್ದ ವಲಸೆ ಕಾರ್ಮಿಕರ ಕೈಹಿಡಿದ ಸುಪ್ರೀಂಕೋರ್ಟ್!
ಸಾಧು ಶ್ರೀನಾಥ್​

Updated on: May 28, 2020 | 4:32 PM

ದೆಹಲಿ: ಕೊನೆಗೂ ಸುಪ್ರೀಂಕೋರ್ಟ್ ವಲಸೆ ಕಾರ್ಮಿಕರ ಕಷ್ಟಕ್ಕೆ ಮಿಡಿದಿದೆ. ಕೊರೊನಾ ಕ್ರಮಿಯ ಅಟ್ಟಹಾದ ನಡುವೆ ವಲಸೆ ಕಾರ್ಮಿಕರ ಸಂಕಷ್ಟದ ಹಿನ್ನೆಲೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಇತ್ತೀಚೆಗೆ ದೇಶಾದ್ಯಂತ ಕಡುಕಷ್ಟ ಪಡುತ್ತಿದ್ದ ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು.

ಕಾರ್ಮಿಕರ ಸಂಚಾರಕ್ಕೆ ಸಂಪೂರ್ಣ ಉಚಿತ ವ್ಯವಸ್ಥೆ ಮಾಡಬೇಕು. ಬಸ್, ರೈಲುಗಳಲ್ಲಿ ಸಂಪೂರ್ಣ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು. ಪ್ರಯಾಣದ ವೇಳೆ ಉಚಿತ ಊಟ, ನೀರಿನ ವ್ಯವಸ್ಥೆ ಮಾಡಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

Published On - 4:19 pm, Thu, 28 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us