AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿರ್ವಹಣೆಯ ಸ್ವಯಂ ಪ್ರೇರಿತ ವಿಚಾರಣೆಯನ್ನು ಮುಂದೂಡಿದ ಸುಪ್ರೀಂ ಕೋರ್ಟ್​

ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ ಸ್ವಯಂ ಪ್ರೇರಿತ ಅರ್ಜಿ ದೂರು ದಾಖಲಿಸಿಕೊಂಡಿತ್ತು. ಇದೀಗ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.

ಕೊವಿಡ್ ನಿರ್ವಹಣೆಯ ಸ್ವಯಂ ಪ್ರೇರಿತ ವಿಚಾರಣೆಯನ್ನು ಮುಂದೂಡಿದ ಸುಪ್ರೀಂ ಕೋರ್ಟ್​
ಸುಪ್ರೀಂ ಕೋರ್ಟ್​
shruti hegde
|

Updated on:Apr 23, 2021 | 4:21 PM

Share

ದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಅತ್ಯಂತ ಭೀಕರವಾದ ಪರಿಣಾಮ ಬೀರುತ್ತಿದೆ. ಒಂದೆಡೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೆ ಇನ್ನೊಂದೆಡೆ ವೈದ್ಯಕೀಯ ವ್ಯವಸ್ಥೆಯಲ್ಲಿ ಕೊರತೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್​ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿತ್ತು. ಇದೀಗ ಅರ್ಜಿಯ ವಿಚಾರಣೆಯನ್ನು ಕೋರ್ಟ್​ ಮುಂದೂಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಲ್​.ನಾಗೇಶ್ವರ ರಾವ್​, ರವೀಂದ್ರ ಭಟ್​ ಅವರಿದ್ದ ನ್ಯಾಯಪೀಠವು ಕೊವಿಡ್-19 ಸಾಂಕ್ರಾಮಿಕದಿಂದ ಉಂಟಾಗುತ್ತಿರುವ ಸಮಸ್ಯೆಗಳು ಮತ್ತು ವಿವಿಧ ರಾಜ್ಯಗಳಲ್ಲಿನ ಸಾಂಕ್ರಾಮಿಕ ಬಿಕ್ಕಟ್ಟಿನ ನಿರ್ವಹಣೆಯ ಕುರಿತಾಗಿ ಅಲ್ಲಿನ ಹೈಕೋರ್ಟ್​ಗಳು ಕೈಗೆತ್ತಿಕೊಂಡಿದ್ದ ಸ್ವಯಂ ಪ್ರೇರಿತ ವಿಚಾರಣೆಗೆ ಸಂಬಂಧಿಸಿದ ವಿಚಾರಣೆಯನ್ನು ಮುಂದೂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಹಾಜರಿದ್ದ ಹಿರಿಯ ವಕೀಲ ಮತ್ತು ಸುಪ್ರಿಂ ಕೋರ್ಟ್​ ಬಾರ್​ ಅಸೋಸಿಯೇಷನ್​ ಅಧ್ಯಕ್ಷ ವಿಕಾಸ್​ ಸಿಂಗ್​ ಅವರನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಾಲಯ, ನೀವು ಆದೇಶವನ್ನು ಓದಿದ್ದೀರಿ. ಪ್ರಕರಣವನ್ನು (ಹೈಕೋರ್ಟ್​ಗಳಿಂದ) ವರ್ಗಾಯಿಸುವ ಉದ್ದೇಶದ ಛಾಯೆ ಅದರಲ್ಲಿ ಏನಾದರೂ ಇತ್ತೇ? ಆದೇಶವನ್ನು ಅದರಲ್ಲಿ ಇಲ್ಲದ ಅಂಶಗಳ ಬಗ್ಗೆ ಟೀಕೆಗಳು ಕೇಳಿಬಂದವು. ಸಂಸ್ಥೆಯ ಗೌರವ ಈ ರೀತಿಯಾಗಿ ನಾಶವಾಗುತ್ತಿದೆ’ ಎಂದು ಹೇಳಿತು.

‘ನೀವು ಆದೇಶವನ್ನು ಓದದೆಯೇ ಪ್ರಕರಣಗಳನ್ನು ವರ್ಗಾಯಿಸುವ ಉದ್ದೇಶವನ್ನು ಸುಪ್ರೀಂಕೋರ್ಟ್​ ಹೊಂದಿದೆ ಎನ್ನುವಂತೆ ಬಿಂಬಿಸುತ್ತಿದ್ದೀರಿ’ ಎಂದು ಗುಜರಾತ್ ಬಾರ್ ಅಸೋಸಿಯೆಷನ್ ಪರವಾಗಿ ಹಾಜರಾಗಿದ್ದ ದುಶ್ಯಂತ್ ದೇವ್ ಅವರಿಗೆ ನ್ಯಾಯಮೂರ್ತಿ ರಾವ್ ಅವರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ದೇವ್, ‘ಇಡೀ ದೇಶವೇ ಆ ರೀತಿಯ ಆಲೋಚನೆಯನ್ನು ಹೊಂದಿತ್ತು’ ಎಂದು ತಿಳಿಸಿದರು. ಆದರೆ ನ್ಯಾಯಮೂರ್ತಿ ಭಟ್ಟ ಅವರು ನಾವು ಅಂತಹ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ. ಬದಲಾಗಿ ಕೇಂದ್ರ ‌ಸರಕಾರಕ್ಕೆ ಹೈಕೋರ್ಟ್​​ಗಳಿಗೆ ಉತ್ತರಿಸುವಂತೆ ತಿಳಿಸಿದ್ದೆವು ಎಂದಿದ್ದಾರೆ.

ದೇವ್ ಅವರ ಉತ್ತರ ಆಲಿಸಿದ ನಂತರ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 27ಕ್ಕೆ ಮುಂದೂಡಿತು. ಅಷ್ಟರ ಒಳಗೆ ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅಫಿಡವಿಟ್ ಸಲ್ಲಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ (Supreme Court postponed covid-19 Control suo-motu)

Published On - 4:12 pm, Fri, 23 April 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ