AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆಹರಿದ ಅಯೋಧ್ಯೆ ಭೂ ವಿವಾದ: ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಸಮ್ಮತಿ

ದೆಹಲಿ: ದಶಕಗಳಿಂದ ಕಾನೂನು ಕಗ್ಗಂಟಾಗಿದ್ದ ರಾಮಜನ್ಮ ಭೂಮಿ ಅಯೋಧ್ಯೆ ಭೂ ವಿವಾದ ಕುರಿತಾದ ಸುಪ್ರೀಂಕೋರ್ಟ್​ ತೀರ್ಪು ಹೊರಬಿದ್ದಿದೆ. ‘‘ಶ್ರೀರಾಮನ ಜನ್ಮ ಭೂಮಿ ಇದಾಗಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬಹುದು’’ ಎಂದು ಸುಪ್ರೀಂಕೋರ್ಟ್​ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಸರ್ವಾನುಮತದ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಸುನ್ನಿ ವಕ್ಫ್​ ಮಂಡಳಿ, ಶಿಯಾ ಬೋರ್ಡ್, ನಿರ್ಮೋಹಿ ಅಖಾಡ ಮತ್ತು ರಾಮಲಲ್ಲಾ ವಿರಾಜಮಾನ್ ನಡುವಿನ 2.77 ಎಕರೆ ಭೂ ವಿವಾದ ಬಗೆಹರಿದಿದೆ. ವಿವಾದಿತ ಜಮೀನು ರಾಮಲಲ್ಲಾ ಪಾಲು: ರಾಮಲಲ್ಲಾ ವಾದ […]

ಬಗೆಹರಿದ ಅಯೋಧ್ಯೆ ಭೂ ವಿವಾದ: ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಸಮ್ಮತಿ
ಸಾಧು ಶ್ರೀನಾಥ್​
|

Updated on:Nov 09, 2019 | 11:23 AM

Share

ದೆಹಲಿ: ದಶಕಗಳಿಂದ ಕಾನೂನು ಕಗ್ಗಂಟಾಗಿದ್ದ ರಾಮಜನ್ಮ ಭೂಮಿ ಅಯೋಧ್ಯೆ ಭೂ ವಿವಾದ ಕುರಿತಾದ ಸುಪ್ರೀಂಕೋರ್ಟ್​ ತೀರ್ಪು ಹೊರಬಿದ್ದಿದೆ. ‘‘ಶ್ರೀರಾಮನ ಜನ್ಮ ಭೂಮಿ ಇದಾಗಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬಹುದು’’ ಎಂದು ಸುಪ್ರೀಂಕೋರ್ಟ್​ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಸರ್ವಾನುಮತದ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಸುನ್ನಿ ವಕ್ಫ್​ ಮಂಡಳಿ, ಶಿಯಾ ಬೋರ್ಡ್, ನಿರ್ಮೋಹಿ ಅಖಾಡ ಮತ್ತು ರಾಮಲಲ್ಲಾ ವಿರಾಜಮಾನ್ ನಡುವಿನ 2.77 ಎಕರೆ ಭೂ ವಿವಾದ ಬಗೆಹರಿದಿದೆ.

ವಿವಾದಿತ ಜಮೀನು ರಾಮಲಲ್ಲಾ ಪಾಲು: ರಾಮಲಲ್ಲಾ ವಾದ ಎತ್ತಿ ಹಿಡಿದ ಕೋರ್ಟ್, ರಾಮಮಂದಿರ ನಿರ್ಮಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಬೇಕು. ರಾಮಮಂದಿರ ನಿರ್ಮಾಣದ ಹೊಣೆ ಕೇಂದ್ರ ಸರ್ಕಾರಕ್ಕೆ ವಹಿಸಲಾಗಿದೆ. ರಾಮಜನ್ಮ ಭೂಮಿಯ ಸ್ವಾಧೀನವನ್ನ ಟ್ರಸ್ಟ್​ಗೆ ನೀಡಬೇಕು ಎಂದು ಕೋರ್ಟ್​ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಇದೇ ವೇಳೆ, ಸುನ್ನಿ ವಕ್ಫ್​ಬೋರ್ಡ್​ಗೆ ಮಸೀದಿ ನಿರ್ಮಾಣಕ್ಕೆ ಐದು ಎಕರೆ ಜಮೀನು ನೀಡಬೇಕು. ವಿಶೇಷ ಅಧಿಕಾರ ಬಳಸಿ ಸುನ್ನಿ ವಕ್ಫ್ ಬೋರ್ಡ್​ಗೆ ಜಮೀನು ನೀಡಬೇಕು. ಕೇಂದ್ರ ಸರ್ಕಾರ 3 ತಿಂಗಳ ಒಳಗಾಗಿ ಪರ್ಯಾಯ ಜಮೀನು ಹಂಚಿಕೆ ಬಗ್ಗೆ ಯೋಜನೆ ರೂಪಿಸಬೇಕು ಎಂದೂ ಸುಪ್ರೀಂಕೋರ್ಟ್​ ಸೂಚಿಸಿದೆ.

ಅಯೋಧ್ಯೆ ಭೂವಿವಾದ ಬಗ್ಗೆ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ನ್ಯಾ.ಶರದ್ ಅರವಿಂದ್ ಬೋಬ್ಡೆ, ನ್ಯಾ.ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಅಶೋಕ್ ಭೂಷಣ್ ಮತ್ತು ನ್ಯಾ. ಅಬ್ದುಲ್ ನಜೀರ್ ಅವರ ನ್ಯಾಯಪೀಠ ತೀರ್ಪು ನೀಡಿದೆ.

Published On - 11:09 am, Sat, 9 November 19

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!