AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆಹರಿದ ಅಯೋಧ್ಯೆ ಭೂ ವಿವಾದ: ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಸಮ್ಮತಿ

ದೆಹಲಿ: ದಶಕಗಳಿಂದ ಕಾನೂನು ಕಗ್ಗಂಟಾಗಿದ್ದ ರಾಮಜನ್ಮ ಭೂಮಿ ಅಯೋಧ್ಯೆ ಭೂ ವಿವಾದ ಕುರಿತಾದ ಸುಪ್ರೀಂಕೋರ್ಟ್​ ತೀರ್ಪು ಹೊರಬಿದ್ದಿದೆ. ‘‘ಶ್ರೀರಾಮನ ಜನ್ಮ ಭೂಮಿ ಇದಾಗಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬಹುದು’’ ಎಂದು ಸುಪ್ರೀಂಕೋರ್ಟ್​ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಸರ್ವಾನುಮತದ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಸುನ್ನಿ ವಕ್ಫ್​ ಮಂಡಳಿ, ಶಿಯಾ ಬೋರ್ಡ್, ನಿರ್ಮೋಹಿ ಅಖಾಡ ಮತ್ತು ರಾಮಲಲ್ಲಾ ವಿರಾಜಮಾನ್ ನಡುವಿನ 2.77 ಎಕರೆ ಭೂ ವಿವಾದ ಬಗೆಹರಿದಿದೆ. ವಿವಾದಿತ ಜಮೀನು ರಾಮಲಲ್ಲಾ ಪಾಲು: ರಾಮಲಲ್ಲಾ ವಾದ […]

ಬಗೆಹರಿದ ಅಯೋಧ್ಯೆ ಭೂ ವಿವಾದ: ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಸಮ್ಮತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 09, 2019 | 11:23 AM

Share

ದೆಹಲಿ: ದಶಕಗಳಿಂದ ಕಾನೂನು ಕಗ್ಗಂಟಾಗಿದ್ದ ರಾಮಜನ್ಮ ಭೂಮಿ ಅಯೋಧ್ಯೆ ಭೂ ವಿವಾದ ಕುರಿತಾದ ಸುಪ್ರೀಂಕೋರ್ಟ್​ ತೀರ್ಪು ಹೊರಬಿದ್ದಿದೆ. ‘‘ಶ್ರೀರಾಮನ ಜನ್ಮ ಭೂಮಿ ಇದಾಗಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬಹುದು’’ ಎಂದು ಸುಪ್ರೀಂಕೋರ್ಟ್​ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಸರ್ವಾನುಮತದ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಸುನ್ನಿ ವಕ್ಫ್​ ಮಂಡಳಿ, ಶಿಯಾ ಬೋರ್ಡ್, ನಿರ್ಮೋಹಿ ಅಖಾಡ ಮತ್ತು ರಾಮಲಲ್ಲಾ ವಿರಾಜಮಾನ್ ನಡುವಿನ 2.77 ಎಕರೆ ಭೂ ವಿವಾದ ಬಗೆಹರಿದಿದೆ.

ವಿವಾದಿತ ಜಮೀನು ರಾಮಲಲ್ಲಾ ಪಾಲು: ರಾಮಲಲ್ಲಾ ವಾದ ಎತ್ತಿ ಹಿಡಿದ ಕೋರ್ಟ್, ರಾಮಮಂದಿರ ನಿರ್ಮಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಬೇಕು. ರಾಮಮಂದಿರ ನಿರ್ಮಾಣದ ಹೊಣೆ ಕೇಂದ್ರ ಸರ್ಕಾರಕ್ಕೆ ವಹಿಸಲಾಗಿದೆ. ರಾಮಜನ್ಮ ಭೂಮಿಯ ಸ್ವಾಧೀನವನ್ನ ಟ್ರಸ್ಟ್​ಗೆ ನೀಡಬೇಕು ಎಂದು ಕೋರ್ಟ್​ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಇದೇ ವೇಳೆ, ಸುನ್ನಿ ವಕ್ಫ್​ಬೋರ್ಡ್​ಗೆ ಮಸೀದಿ ನಿರ್ಮಾಣಕ್ಕೆ ಐದು ಎಕರೆ ಜಮೀನು ನೀಡಬೇಕು. ವಿಶೇಷ ಅಧಿಕಾರ ಬಳಸಿ ಸುನ್ನಿ ವಕ್ಫ್ ಬೋರ್ಡ್​ಗೆ ಜಮೀನು ನೀಡಬೇಕು. ಕೇಂದ್ರ ಸರ್ಕಾರ 3 ತಿಂಗಳ ಒಳಗಾಗಿ ಪರ್ಯಾಯ ಜಮೀನು ಹಂಚಿಕೆ ಬಗ್ಗೆ ಯೋಜನೆ ರೂಪಿಸಬೇಕು ಎಂದೂ ಸುಪ್ರೀಂಕೋರ್ಟ್​ ಸೂಚಿಸಿದೆ.

ಅಯೋಧ್ಯೆ ಭೂವಿವಾದ ಬಗ್ಗೆ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ನ್ಯಾ.ಶರದ್ ಅರವಿಂದ್ ಬೋಬ್ಡೆ, ನ್ಯಾ.ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಅಶೋಕ್ ಭೂಷಣ್ ಮತ್ತು ನ್ಯಾ. ಅಬ್ದುಲ್ ನಜೀರ್ ಅವರ ನ್ಯಾಯಪೀಠ ತೀರ್ಪು ನೀಡಿದೆ.

Published On - 11:09 am, Sat, 9 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು