AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆಹರಿದ ಅಯೋಧ್ಯೆ ಭೂ ವಿವಾದ: ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಸಮ್ಮತಿ

ದೆಹಲಿ: ದಶಕಗಳಿಂದ ಕಾನೂನು ಕಗ್ಗಂಟಾಗಿದ್ದ ರಾಮಜನ್ಮ ಭೂಮಿ ಅಯೋಧ್ಯೆ ಭೂ ವಿವಾದ ಕುರಿತಾದ ಸುಪ್ರೀಂಕೋರ್ಟ್​ ತೀರ್ಪು ಹೊರಬಿದ್ದಿದೆ. ‘‘ಶ್ರೀರಾಮನ ಜನ್ಮ ಭೂಮಿ ಇದಾಗಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬಹುದು’’ ಎಂದು ಸುಪ್ರೀಂಕೋರ್ಟ್​ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಸರ್ವಾನುಮತದ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಸುನ್ನಿ ವಕ್ಫ್​ ಮಂಡಳಿ, ಶಿಯಾ ಬೋರ್ಡ್, ನಿರ್ಮೋಹಿ ಅಖಾಡ ಮತ್ತು ರಾಮಲಲ್ಲಾ ವಿರಾಜಮಾನ್ ನಡುವಿನ 2.77 ಎಕರೆ ಭೂ ವಿವಾದ ಬಗೆಹರಿದಿದೆ. ವಿವಾದಿತ ಜಮೀನು ರಾಮಲಲ್ಲಾ ಪಾಲು: ರಾಮಲಲ್ಲಾ ವಾದ […]

ಬಗೆಹರಿದ ಅಯೋಧ್ಯೆ ಭೂ ವಿವಾದ: ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಸಮ್ಮತಿ
ಸಾಧು ಶ್ರೀನಾಥ್​
|

Updated on:Nov 09, 2019 | 11:23 AM

Share

ದೆಹಲಿ: ದಶಕಗಳಿಂದ ಕಾನೂನು ಕಗ್ಗಂಟಾಗಿದ್ದ ರಾಮಜನ್ಮ ಭೂಮಿ ಅಯೋಧ್ಯೆ ಭೂ ವಿವಾದ ಕುರಿತಾದ ಸುಪ್ರೀಂಕೋರ್ಟ್​ ತೀರ್ಪು ಹೊರಬಿದ್ದಿದೆ. ‘‘ಶ್ರೀರಾಮನ ಜನ್ಮ ಭೂಮಿ ಇದಾಗಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬಹುದು’’ ಎಂದು ಸುಪ್ರೀಂಕೋರ್ಟ್​ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಸರ್ವಾನುಮತದ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಸುನ್ನಿ ವಕ್ಫ್​ ಮಂಡಳಿ, ಶಿಯಾ ಬೋರ್ಡ್, ನಿರ್ಮೋಹಿ ಅಖಾಡ ಮತ್ತು ರಾಮಲಲ್ಲಾ ವಿರಾಜಮಾನ್ ನಡುವಿನ 2.77 ಎಕರೆ ಭೂ ವಿವಾದ ಬಗೆಹರಿದಿದೆ.

ವಿವಾದಿತ ಜಮೀನು ರಾಮಲಲ್ಲಾ ಪಾಲು: ರಾಮಲಲ್ಲಾ ವಾದ ಎತ್ತಿ ಹಿಡಿದ ಕೋರ್ಟ್, ರಾಮಮಂದಿರ ನಿರ್ಮಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಬೇಕು. ರಾಮಮಂದಿರ ನಿರ್ಮಾಣದ ಹೊಣೆ ಕೇಂದ್ರ ಸರ್ಕಾರಕ್ಕೆ ವಹಿಸಲಾಗಿದೆ. ರಾಮಜನ್ಮ ಭೂಮಿಯ ಸ್ವಾಧೀನವನ್ನ ಟ್ರಸ್ಟ್​ಗೆ ನೀಡಬೇಕು ಎಂದು ಕೋರ್ಟ್​ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಇದೇ ವೇಳೆ, ಸುನ್ನಿ ವಕ್ಫ್​ಬೋರ್ಡ್​ಗೆ ಮಸೀದಿ ನಿರ್ಮಾಣಕ್ಕೆ ಐದು ಎಕರೆ ಜಮೀನು ನೀಡಬೇಕು. ವಿಶೇಷ ಅಧಿಕಾರ ಬಳಸಿ ಸುನ್ನಿ ವಕ್ಫ್ ಬೋರ್ಡ್​ಗೆ ಜಮೀನು ನೀಡಬೇಕು. ಕೇಂದ್ರ ಸರ್ಕಾರ 3 ತಿಂಗಳ ಒಳಗಾಗಿ ಪರ್ಯಾಯ ಜಮೀನು ಹಂಚಿಕೆ ಬಗ್ಗೆ ಯೋಜನೆ ರೂಪಿಸಬೇಕು ಎಂದೂ ಸುಪ್ರೀಂಕೋರ್ಟ್​ ಸೂಚಿಸಿದೆ.

ಅಯೋಧ್ಯೆ ಭೂವಿವಾದ ಬಗ್ಗೆ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ನ್ಯಾ.ಶರದ್ ಅರವಿಂದ್ ಬೋಬ್ಡೆ, ನ್ಯಾ.ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಅಶೋಕ್ ಭೂಷಣ್ ಮತ್ತು ನ್ಯಾ. ಅಬ್ದುಲ್ ನಜೀರ್ ಅವರ ನ್ಯಾಯಪೀಠ ತೀರ್ಪು ನೀಡಿದೆ.

Published On - 11:09 am, Sat, 9 November 19

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ