AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆಹರಿದ ಅಯೋಧ್ಯೆ ಭೂ ವಿವಾದ: ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಸಮ್ಮತಿ

ದೆಹಲಿ: ದಶಕಗಳಿಂದ ಕಾನೂನು ಕಗ್ಗಂಟಾಗಿದ್ದ ರಾಮಜನ್ಮ ಭೂಮಿ ಅಯೋಧ್ಯೆ ಭೂ ವಿವಾದ ಕುರಿತಾದ ಸುಪ್ರೀಂಕೋರ್ಟ್​ ತೀರ್ಪು ಹೊರಬಿದ್ದಿದೆ. ‘‘ಶ್ರೀರಾಮನ ಜನ್ಮ ಭೂಮಿ ಇದಾಗಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬಹುದು’’ ಎಂದು ಸುಪ್ರೀಂಕೋರ್ಟ್​ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಸರ್ವಾನುಮತದ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಸುನ್ನಿ ವಕ್ಫ್​ ಮಂಡಳಿ, ಶಿಯಾ ಬೋರ್ಡ್, ನಿರ್ಮೋಹಿ ಅಖಾಡ ಮತ್ತು ರಾಮಲಲ್ಲಾ ವಿರಾಜಮಾನ್ ನಡುವಿನ 2.77 ಎಕರೆ ಭೂ ವಿವಾದ ಬಗೆಹರಿದಿದೆ. ವಿವಾದಿತ ಜಮೀನು ರಾಮಲಲ್ಲಾ ಪಾಲು: ರಾಮಲಲ್ಲಾ ವಾದ […]

ಬಗೆಹರಿದ ಅಯೋಧ್ಯೆ ಭೂ ವಿವಾದ: ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಸಮ್ಮತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 09, 2019 | 11:23 AM

Share

ದೆಹಲಿ: ದಶಕಗಳಿಂದ ಕಾನೂನು ಕಗ್ಗಂಟಾಗಿದ್ದ ರಾಮಜನ್ಮ ಭೂಮಿ ಅಯೋಧ್ಯೆ ಭೂ ವಿವಾದ ಕುರಿತಾದ ಸುಪ್ರೀಂಕೋರ್ಟ್​ ತೀರ್ಪು ಹೊರಬಿದ್ದಿದೆ. ‘‘ಶ್ರೀರಾಮನ ಜನ್ಮ ಭೂಮಿ ಇದಾಗಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬಹುದು’’ ಎಂದು ಸುಪ್ರೀಂಕೋರ್ಟ್​ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಸರ್ವಾನುಮತದ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಸುನ್ನಿ ವಕ್ಫ್​ ಮಂಡಳಿ, ಶಿಯಾ ಬೋರ್ಡ್, ನಿರ್ಮೋಹಿ ಅಖಾಡ ಮತ್ತು ರಾಮಲಲ್ಲಾ ವಿರಾಜಮಾನ್ ನಡುವಿನ 2.77 ಎಕರೆ ಭೂ ವಿವಾದ ಬಗೆಹರಿದಿದೆ.

ವಿವಾದಿತ ಜಮೀನು ರಾಮಲಲ್ಲಾ ಪಾಲು: ರಾಮಲಲ್ಲಾ ವಾದ ಎತ್ತಿ ಹಿಡಿದ ಕೋರ್ಟ್, ರಾಮಮಂದಿರ ನಿರ್ಮಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಬೇಕು. ರಾಮಮಂದಿರ ನಿರ್ಮಾಣದ ಹೊಣೆ ಕೇಂದ್ರ ಸರ್ಕಾರಕ್ಕೆ ವಹಿಸಲಾಗಿದೆ. ರಾಮಜನ್ಮ ಭೂಮಿಯ ಸ್ವಾಧೀನವನ್ನ ಟ್ರಸ್ಟ್​ಗೆ ನೀಡಬೇಕು ಎಂದು ಕೋರ್ಟ್​ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಇದೇ ವೇಳೆ, ಸುನ್ನಿ ವಕ್ಫ್​ಬೋರ್ಡ್​ಗೆ ಮಸೀದಿ ನಿರ್ಮಾಣಕ್ಕೆ ಐದು ಎಕರೆ ಜಮೀನು ನೀಡಬೇಕು. ವಿಶೇಷ ಅಧಿಕಾರ ಬಳಸಿ ಸುನ್ನಿ ವಕ್ಫ್ ಬೋರ್ಡ್​ಗೆ ಜಮೀನು ನೀಡಬೇಕು. ಕೇಂದ್ರ ಸರ್ಕಾರ 3 ತಿಂಗಳ ಒಳಗಾಗಿ ಪರ್ಯಾಯ ಜಮೀನು ಹಂಚಿಕೆ ಬಗ್ಗೆ ಯೋಜನೆ ರೂಪಿಸಬೇಕು ಎಂದೂ ಸುಪ್ರೀಂಕೋರ್ಟ್​ ಸೂಚಿಸಿದೆ.

ಅಯೋಧ್ಯೆ ಭೂವಿವಾದ ಬಗ್ಗೆ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ನ್ಯಾ.ಶರದ್ ಅರವಿಂದ್ ಬೋಬ್ಡೆ, ನ್ಯಾ.ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಅಶೋಕ್ ಭೂಷಣ್ ಮತ್ತು ನ್ಯಾ. ಅಬ್ದುಲ್ ನಜೀರ್ ಅವರ ನ್ಯಾಯಪೀಠ ತೀರ್ಪು ನೀಡಿದೆ.

Published On - 11:09 am, Sat, 9 November 19

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್