ಧರಮ್ ಸಂಸದ್​​ ಕುರಿತು ಉತ್ತರಾಖಂಡ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

“ನೀವು ಈಗಾಗಲೇ ಇರುವ ಮಾರ್ಗಸೂಚಿಗಳನ್ನು ಮಾತ್ರ ಅನುಸರಿಸಬೇಕು. ನೀವು ಅದನ್ನು ಅನುಸರಿಸುತ್ತಿದ್ದೀರಾ ಅಥವಾ ಇಲ್ಲವೇ, ಅದಕ್ಕೆ ನೀವು ನಮಗೆ ಉತ್ತರಿಸಬೇಕು ”ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಸಿ ಟಿ ರವಿಕುಮಾರ್ ಅವರನ್ನು ಒಳಗೊಂಡ ಪೀಠವು ಹೇಳಿದೆ.

ಧರಮ್ ಸಂಸದ್​​ ಕುರಿತು ಉತ್ತರಾಖಂಡ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್
ಧರಮ್ ಸಂಸದ್ (ಸಂಗ್ರಹ ಚಿತ್ರ)
Edited By: ರಶ್ಮಿ ಕಲ್ಲಕಟ್ಟ

Updated on: Apr 26, 2022 | 1:55 PM

ದೆಹಲಿ: ರೂರ್ಕಿಯಲ್ಲಿ (Roorkee )ಉದ್ದೇಶಿತ ಧರಮ್ ಸಂಸದ್ ಕುರಿತು ಉತ್ತರಾಖಂಡ (Uttarakhand)ಸರ್ಕಾರವನ್ನು ಸುಪ್ರೀಂಕೋರ್ಟ್ (Supreme Court) ಮಂಗಳವಾರ ಪ್ರಶ್ನಿಸಿದೆ. ಈ ಸಂಬಂಧ ತೆಗೆದುಕೊಳ್ಳುತ್ತಿರುವ ನಿಯಂತ್ರಣ ಮತ್ತು ಸರಿಯಾದ ಕ್ರಮಗಳ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿಯಿಂದ ಅಫಿಡವಿಟ್ ಕೇಳಿದೆ. ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಅವರ ನೇತೃತ್ವದ ಪೀಠವು ಅಂತಹ ಸಂದರ್ಭಗಳಲ್ಲಿ ಏನು ಮಾಡಬೇಕೆಂಬುದರ ಬಗ್ಗೆ ಈಗಾಗಲೇ ನ್ಯಾಯಾಲಯದ ತೀರ್ಪುಗಳಿವೆ ಮತ್ತು ರಾಜ್ಯವು ಅದನ್ನು ಜಾರಿಗೊಳಿಸುವ ಅಗತ್ಯವಿದೆ ಎಂದು ಹೇಳಿದರು. “ನೀವು ಈಗಾಗಲೇ ಇರುವ ಮಾರ್ಗಸೂಚಿಗಳನ್ನು ಮಾತ್ರ ಅನುಸರಿಸಬೇಕು. ನೀವು ಅದನ್ನು ಅನುಸರಿಸುತ್ತಿದ್ದೀರಾ ಅಥವಾ ಇಲ್ಲವೇ, ಅದಕ್ಕೆ ನೀವು ನಮಗೆ ಉತ್ತರಿಸಬೇಕು ”ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಸಿ ಟಿ ರವಿಕುಮಾರ್ ಅವರನ್ನು ಒಳಗೊಂಡ ಪೀಠವು ಹೇಳಿದೆ. ಅದರ ಹೊರತಾಗಿಯೂ, ಅದು ಸಂಭವಿಸುತ್ತಿದ್ದರೆ, ನೀವು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಅದು ಹೇಳಿದೆ. ಈ ಹಿಂದೆ ಇಂತಹ ಘಟನೆಗಳು ನಡೆದಾಗ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಮತ್ತು ತನಿಖೆ ನಡೆಸಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ತನಿಖೆ ಮಾತ್ರವಲ್ಲ. ನೀವು ಈ ಚಟುವಟಿಕೆಯನ್ನು ನಿಲ್ಲಿಸಬೇಕು ಎಂದು ನ್ಯಾಯಮೂರ್ತಿ ಖಾನ್ವಿಲ್ಕರ್ ರಾಜ್ಯದ ಪರ ವಾದಿಸಿದ ವಕೀಲರಿಗೆ ಹೇಳಿದರು. ಏನಾದರೂ ಸಂಭವಿಸಿದರೆ ಮುಖ್ಯ ಕಾರ್ಯದರ್ಶಿಯನ್ನು ಹಾಜರುಪಡಿಸುವಂತೆ ಹೇಳುತ್ತೇವೆ ಎಂದು ಪೀಠ ಟೀಕಿಸಿತು.

ಹಿಮಾಚಲ ಪ್ರದೇಶದಲ್ಲಿ ನಡೆದ ಧರಮ್ ಸಂಸದ್ ವಿರುದ್ಧದ ಮನವಿಯನ್ನು ನ್ಯಾಯಾಲಯವು ಕೈಗೆತ್ತಿಕೊಂಡಿತು ಮತ್ತು ಅದನ್ನು ತಡೆಯಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದನ್ನು ಅಫಿಡವಿಟ್‌ನಲ್ಲಿ ವಿವರಿಸಲು ರಾಜ್ಯದ ವಕೀಲರನ್ನು ಕೇಳಿದೆ.

ಹಿಮಾಚಲ ಪ್ರದೇಶದ ವಕೀಲರು ಇಂತಹ ಸಮಸ್ಯೆಗಳನ್ನು ತಡೆಗಟ್ಟಲು ರಾಜ್ಯವು ಪೊಲೀಸ್ ಕಾಯಿದೆಯಡಿ ನೋಟಿಸ್ ನೀಡಿದೆ ಎಂದು ಹೇಳಿದರು. ಪ್ರಾತಿನಿಧ್ಯವನ್ನು ಸ್ವೀಕರಿಸಿದ ನಂತರ, ಅದು ಕ್ರಮ ಕೈಗೊಂಡಿದೆ ಎಂದು ರಾಜ್ಯ ವಿವರಿಸಿದೆ.

“ಈ ಘಟನೆಗಳು ಇದ್ದಕ್ಕಿದ್ದಂತೆ, ರಾತ್ರೋರಾತ್ರಿ ಸಂಭವಿಸುವುದಿಲ್ಲ. ಅವುಗಳನ್ನು ಸಾಕಷ್ಟು ಮುಂಚಿತವಾಗಿ ಘೋಷಿಸಲಾಗುತ್ತದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳೀಯ ಪೊಲೀಸರು ಕೂಡಲೇ ಕ್ರಮಕೈಗೊಳ್ಳಬೇಕು. ಯಾವ ಕ್ರಮಗಳನ್ನು ತೆಗೆದುಕೊಂಡಿದೆ ಎಂಬುದನ್ನು ವಿವರಿಸಬೇಕು ಎಂದು ನ್ಯಾಯಮೂರ್ತಿ ಖಾನ್ವಿಲ್ಕರ್ ಹೇಳಿದ್ದಾರೆ.

ಇದನ್ನೂ ಓದಿ: ‘ಧರಮ್ ಸಂಸದ್​​’ನಲ್ಲಿ ಯಾವುದೇ ಸಮುದಾಯದ ವಿರುದ್ಧ ದ್ವೇಷ ವ್ಯಕ್ತಪಡಿಸಲಾಗಿಲ್ಲ: ಸುಪ್ರೀಂಕೋರ್ಟ್​ನಲ್ಲಿ ದೆಹಲಿ ಪೊಲೀಸ್

Published On - 1:54 pm, Tue, 26 April 22

Web contact

TV9 Kannada

Read More
Follow Us