AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ: ಅಭಿಷೇಕ್ ಬ್ಯಾನರ್ಜಿಗೆ ಸುಪ್ರೀಂಕೋರ್ಟ್​​​ನಲ್ಲಿ ಹಿನ್ನಡೆ

"ನಾವು ದೋಷಾರೋಪಣೆ ಮಾಡಲಾದ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಯಾಕೆಂದರೆ ಇದು ತನಿಖೆಯನ್ನು ಅಸ್ತವ್ಯಸ್ತಗೊಳಿಸುತ್ತದೆ. ಅರ್ಜಿದಾರರು ಕಾನೂನಿನಡಿಯಲ್ಲಿ ಲಭ್ಯವಿರುವ ಪರಿಹಾರಗಳನ್ನು ಪಡೆಯಬಹುದು" ಎಂದು ಸುಪ್ರೀಂಕೋರ್ಟ್ ಪೀಠ ಹೇಳಿದೆ.

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ: ಅಭಿಷೇಕ್ ಬ್ಯಾನರ್ಜಿಗೆ ಸುಪ್ರೀಂಕೋರ್ಟ್​​​ನಲ್ಲಿ ಹಿನ್ನಡೆ
ಅಭಿಷೇಕ್ ಬ್ಯಾನರ್ಜಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 10, 2023 | 5:55 PM

Share

ದೆಹಲಿ: ಪಶ್ಚಿಮ ಬಂಗಾಳದ (WestBengal) ಶಿಕ್ಷಕರ ನೇಮಕಾತಿ ಹಗರಣದಲ್ಲಿ ಟಿಎಂಸಿ ನಾಯಕ, ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ (Abhishek Banerjee) ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ (Supreme Court) ಸೋಮವಾರ ನಿರಾಕರಿಸಿದ್ದು, ಪ್ರಕರಣದ ತನಿಖೆಯನ್ನು ಅಡ್ಡಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠವು ಕಾನೂನಿನಡಿಯಲ್ಲಿ ಲಭ್ಯವಿರುವ ಪರಿಹಾರಗಳನ್ನು ಪಡೆಯಲು ಬ್ಯಾನರ್ಜಿ ಅವರಿಗೆ ಅವಕಾಶ ಮಾಡಿಕೊಟ್ಟಿತು. ಆದರೆ ಕಲ್ಕತ್ತಾ ಹೈಕೋರ್ಟ್‌ನ ಮೇ 18 ರ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತು.

“ನಾವು ದೋಷಾರೋಪಣೆ ಮಾಡಲಾದ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಯಾಕೆಂದರೆ ಇದು ತನಿಖೆಯನ್ನು ಅಸ್ತವ್ಯಸ್ತಗೊಳಿಸುತ್ತದೆ. ಅರ್ಜಿದಾರರು ಕಾನೂನಿನಡಿಯಲ್ಲಿ ಲಭ್ಯವಿರುವ ಪರಿಹಾರಗಳನ್ನು ಪಡೆಯಬಹುದು” ಎಂದು ಪೀಠ ಹೇಳಿದೆ.

ಮೇ 26 ರಂದು, ಪಶ್ಚಿಮ ಬಂಗಾಳದ ಶಾಲಾ ಉದ್ಯೋಗ ಹಗರಣ ಪ್ರಕರಣಗಳಲ್ಲಿ ಸಿಬಿಐ ಮತ್ತು ಇಡಿ ಅಭಿಷೇಕ್ ಬ್ಯಾನರ್ಜಿಯನ್ನು ವಿಚಾರಣೆಗೆ ಒಳಪಡಿಸಬಹುದು ಎಂಬ ತನ್ನ ಹಿಂದಿನ ಆದೇಶವನ್ನು ಮರುಪಡೆಯಲು ಮಾಡಿದ ಮನವಿಯನ್ನು ವಜಾಗೊಳಿಸಿದ ಹೈಕೋರ್ಟ್, ಬ್ಯಾನರ್ಜಿ ಅವರ ಮೇಲೆ ₹ 25 ಲಕ್ಷ ವೆಚ್ಚವನ್ನು ವಿಧಿಸುವುದಕ್ಕೆ ತಡೆ ನೀಡಿತ್ತು.

ಇದನ್ನೂ ಓದಿ: Delhi Ordinance: ದೆಹಲಿ ಸುಗ್ರೀವಾಜ್ಞೆ ವಿಚಾರ; ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಆದಾಗ್ಯೂ, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಗಳು ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನು ಪ್ರಶ್ನಿಸಬಹುದು ಎಂದು ಹೇಳಿದ್ದ ಹೈಕೋರ್ಟ್ ಆದೇಶದ ಭಾಗವನ್ನು ಸುಪ್ರೀಂಕೋರ್ಟ್ ತಡೆಹಿಡಿದಿಲ್ಲ. ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಬಿಐ ಮತ್ತು ಇಡಿಯಂತಹ ತನಿಖಾ ಸಂಸ್ಥೆಗಳು ತನ್ನನ್ನು ವಿಚಾರಣೆಗೆ ಒಳಪಡಿಸಬಹುದು ಎಂದು ತನ್ನ ಹಿಂದಿನ ಆದೇಶವನ್ನು ಹಿಂಪಡೆಯುವಂತೆ ಕೋರಿ ಲೋಕಸಭಾ ಸಂಸದ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್ ವಜಾಗೊಳಿಸಿದೆ.

ಶಾಲಾ ಉದ್ಯೋಗ ಹಗರಣ ಪ್ರಕರಣಗಳ ಕ್ರಿಮಿನಲ್ ಅಂಶವನ್ನು ಸಿಬಿಐ ತನಿಖೆ ನಡೆಸುತ್ತಿದ್ದರೆ, ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಹಣದ ಜಾಡುಗಳನ್ನು ಇಡಿ ಪರಿಶೀಲಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ