26 ವಾರಗಳ ಗರ್ಭಾವಸ್ಥೆಯಲ್ಲಿರುವ ಮಹಿಳೆಗೆ ಗರ್ಭಪಾತ ಮಾಡಿಸಲು ಸುಪ್ರೀಂ​ ನಿರಾಕರಣೆ

26 ವಾರಗಳ ಗರ್ಭಾವಸ್ಥೆಯಲ್ಲಿರುವ ಮಹಿಳೆಗೆ ಗರ್ಭಪಾತ ಮಾಡಿಸಲು ಸುಪ್ರೀಂ​ ನಿರಾಕರಿಸಿದೆ. ಕೇಂದ್ರ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ನಾವು ಯಾವುದೇ ಮಗುವನ್ನು ಕೊಲ್ಲಲು ಸಾಧ್ಯವಿಲ್ಲ ಎಂದು ವಿಚಾರಣೆ ವೇಳೆ ಹೇಳಿದೆ.

26 ವಾರಗಳ ಗರ್ಭಾವಸ್ಥೆಯಲ್ಲಿರುವ ಮಹಿಳೆಗೆ ಗರ್ಭಪಾತ ಮಾಡಿಸಲು ಸುಪ್ರೀಂ​ ನಿರಾಕರಣೆ
ಸಾಂದರ್ಭಿಕ ಚಿತ್ರ
Follow us
|

Updated on:Oct 16, 2023 | 4:23 PM

ದೆಹಲಿ, ಅ.16: 26 ವಾರಗಳ ಗರ್ಭಾವಸ್ಥೆಯಲ್ಲಿರುವ ಮಹಿಳೆಗೆ ಗರ್ಭಪಾತ ಮಾಡಿಸಲು ಸುಪ್ರೀಂ​ ಕೋರ್ಟ್​ ನಿರಾಕರಿಸಿದೆ. ಕೇಂದ್ರ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ನಾವು ಯಾವುದೇ ಮಗುವನ್ನು ಕೊಲ್ಲಲು ಸಾಧ್ಯವಿಲ್ಲ ಎಂದು ಈ ಹಿಂದಿನ ವಿಚಾರಣೆ ವೇಳೆಯಲ್ಲೂ ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ನೇತೃತ್ವದಲ್ಲಿ ಈ ವಿಚಾರಣೆಯನ್ನು ನಡೆಸಲಾಗಿದೆ. ಮಹಿಳೆಯ ಜೀವಕ್ಕೆ ಯಾವುದೇ ಅಪಾಯವಿಲ್ಲದ ಕಾರಣ 26 ವಾರಗಳ ಗರ್ಭಾವಸ್ಥೆಯಲ್ಲಿರುವ ಮಹಿಳೆಗೆ ಗರ್ಭಪಾತ ಮಾಡಿಸುವ ಕ್ರಮವನ್ನು ಸುಪ್ರೀಂ ಕೋರ್ಟ್​​​ ನಿರಕಾರಿಸಿದೆ.

ಒಂದು ವೇಳೆ ತಾಯಿಗೆ ಮಗುವಿನ ಅಗತ್ಯವಿಲ್ಲ ಅಥವಾ ಇಷ್ಟವಿಲ್ಲವೆಂದರೆ ಮಗುವನ್ನು ತಾಯಿ ದತ್ತು ನೀಡಬಹುದು ಎಂದು ಪೀಠವು ಹೇಳಿದೆ. ಗರ್ಭಧಾರಣೆಯು 26 ವಾರಗಳು ಮತ್ತು 5 ದಿನ, ಈ ಸಮಯದಲ್ಲಿ ಗರ್ಭಪಾತ ಮಾಡಿಸಿಕೊಳ್ಳುವುದು ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯ ಕಾಯಿದೆ (Medical Termination of Pregnancy Act) ಸೆಕ್ಷನ್ 3 ಮತ್ತು 5 ಉಲ್ಲಂಘಿಸಿದಂತೆ, ಈ ಕಾರಣದಿಂದ ತಾಯಿ ತಕ್ಷಣದ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದೆ.

26 ವಾರಗಳ ಗರ್ಭಾವಸ್ಥೆಯಲ್ಲಿರುವ ಮಹಿಳೆಯ ಎಲ್ಲ ಖರ್ಚುಗಳನ್ನು ಆಯಾಯ ರಾಜ್ಯ ಸರ್ಕಾರವೇ ಭರಿಸಬೇಕು ಎಂದು ನಿರ್ದೇಶನ ನೀಡಿದೆ. ಅರ್ಜಿದಾರೊಬ್ಬರು ಎರಡು ಮಕ್ಕಳನ್ನು ಪಡೆದ ತಾಯಿಗೆ ಮೂರನೇ ಮಗುವಿಗೆ ಗರ್ಭ ಧರಿಸಿದಾಗ ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಗ್ಗುವ ಕಾರಣ ಆಕೆಗೆ ಗರ್ಭಪಾತ ಮಾಡಿಸಲು ಅವಕಾಶ ನೀಡಬೇಕು ಎಂದು ಹೇಳಿದರು. ಆದರೆ ಈ ಹಿಂದೆ ಈ ಬಗ್ಗೆ ಏಮ್ಸ್​​ ಆಸ್ಪತ್ರೆಗೆ ವರದಿಯನ್ನು ಕೇಳಿದ್ದ ಸುಪ್ರೀಂ. ಇದೀಗ ಈ ವೈದ್ಯಕೀಯ ವರದಿ ಪ್ರಕಾರ ಸುಪ್ರೀಂ ಈ ಆದೇಶವನ್ನು ನೀಡಿದೆ.

ಇದನ್ನೂ ಓದಿ: ‘ಮಗುವನ್ನು ಕೊಲ್ಲಲು ಸಾಧ್ಯವಿಲ್ಲ’: ಗರ್ಭಪಾತ ಪ್ರಕರಣ ವಿಚಾರಣೆ ವೇಳೆ ಸುಪ್ರೀಂಕೋರ್ಟ್

ಏಮ್ಸ್​​ ಆಸ್ಪತ್ರೆ ನೀಡಿದ ವರದಿ ಪ್ರಕಾರ ಮಹಿಳೆ ಗರ್ಭಾವಸ್ಥೆಯಲ್ಲಿ ಮುಂದುವರಿದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಇದರಿಂದ ಆಕೆಗೆ ಪೋಸ್ಟ್ ಪಾರ್ಟಮ್ ಸೈಕೋಸಿಸ್ (ಪ್ರಸವಾನಂತರದ ಮನೋರೋಗ) ಉಂಟಾಗುತ್ತದೆ. ಇದಕ್ಕೆ ವೈದ್ಯರು ಸೂಚಿಸಿದ ಸರಿಯಾದ ಚಿಕಿತ್ಸೆ ಮತ್ತು ಔಷಧಿಯನ್ನು ತೆಗೆದುಕೊಂಡರೆ ಮಗುವಿನಗೆ ಅಥವಾ ತಾಯಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Mon, 16 October 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ