AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಿನ ಮನೆಯಲ್ಲಿರುವವರು ಕಲ್ಲು ಹೊಡೆಯಬಾರದು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪರಮ್​ಸಿಂಗ್​ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್​

ಮಹಾರಾಷ್ಟ್ರ ಸರ್ಕಾರವು ತಮ್ಮ ವಿರುದ್ಧ ನಡೆಸುತ್ತಿರುವ ವಿವಿಧ ತನಿಖೆಗಳಿಗೆ ತಡೆ ನೀಡಬೇಕು ಎಂದು ಕೋರಿ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. 

ಗಾಜಿನ ಮನೆಯಲ್ಲಿರುವವರು ಕಲ್ಲು ಹೊಡೆಯಬಾರದು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪರಮ್​ಸಿಂಗ್​ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್​
ಪರಮ್​ವೀರ್ ಸಿಂಗ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 11, 2021 | 3:42 PM

Share

ದೆಹಲಿ: ಮಹಾರಾಷ್ಟ್ರ ಸರ್ಕಾರವು ತಮ್ಮ ವಿರುದ್ಧ ನಡೆಸುತ್ತಿರುವ ವಿವಿಧ ತನಿಖೆಗಳಿಗೆ ತಡೆ ನೀಡಬೇಕು ಎಂದು ಕೋರಿ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ನೀವು ಮಹಾರಾಷ್ಟ್ರ ಕೇಡರ್​ನ ಅಧಿಕಾರಿಯಾಗಿದ್ದವರು. ಅಲ್ಲಿಯೇ 30 ವರ್ಷ ಕೆಲಸ ಮಾಡಿದ್ದೀರಿ. ಈಗ ನಿಮ್ಮ ಸ್ವಂತ ರಾಜ್ಯದ ಮೇಲೆ ನಂಬಿಕೆ ಇಲ್ಲ ಎನ್ನುತ್ತಿದ್ದೀರಿ. ಇದು ಆಘಾತಕಾರಿ ಆರೋಪ ಎಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹೇಳಿದರು. ಮುಂಬೈ ನಗರದ ಹಿಂದಿನ ಪೊಲೀಸ್ ಆಯುಕ್ತ ಪರಮ್​ಬೀರ್ ಸಿಂಗ್ ತಮ್ಮ ವಿರುದ್ಧ ಮಹಾರಾಷ್ಟ್ರ ಸರ್ಕಾರವು ಆರಂಭಿಸಿರುವ ಇಲಾಖಾ ತನಿಖೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಲು ನ್ಯಾಯಾಲಯವು ಶುಕ್ರವಾರ ನಿರಾಕರಿಸಿತು. ನ್ಯಾಯಮೂರ್ತಿಗಳಾದ ಹೇಮಂತ್​ ಗುಪ್ತ ಮತ್ತು ವಿ.ರಾಮಸುಬ್ರಹ್ಮಣ್ಯಂ ಅವರಿದ್ದ ನ್ಯಾಯಪೀಠವು ಅರ್ಜಿ ಹಿಂಪಡೆಯಲು ಮತ್ತು ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲು ಸಮ್ಮತಿಸಿತು.

ಪರಮ್​ಬೀರ್ ಸಿಂಗ್ ಪರವಾಗಿ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ವಾದ ಮಂಡಿಸಿದರು. ವಾದವನ್ನು ಆಲಿಸಿದ ನಂತರವೂ ನ್ಯಾಯಪೀಠವು ಅರ್ಜಿಯನ್ನು ಪುರಸ್ಕರಿಸಲು ಒಪ್ಪಲಿಲ್ಲ. ನೀವು ಮಹಾರಾಷ್ಟ್ರ ಕೇಡರ್​ನ ಭಾಗವಾಗಿದ್ದವರು. 30 ವರ್ಷಗಳ ಕಾಲ ಅದೇ ರಾಜ್ಯದಲ್ಲಿ ಕೆಲಸ ಮಾಡಿದವರು. ಈಗ ನೀವು ನಿಮ್ಮ ಸ್ವಂತ ರಾಜ್ಯವನ್ನು ನಂಬುತ್ತಿಲ್ಲ. ಇದು ಆಘಾತಕಾರಿ ಆರೋಪ ಎಂದು ನ್ಯಾಯಮೂರ್ತಿ ಹೇಮಂತ್ ಗುಪ್ತ ಹೇಳಿದರು.

ಕ್ರಿಮಿನಲ್ ಕಾನೂನಿನಲ್ಲಿ ನಿಮಗೆ ಅನುಭವವಿದೆ. ನಿಮ್ಮ ವಿರುದ್ಧದ ಎಫ್​ಐಆರ್​ಗಳಿಗೆ ಸಂಪೂರ್ಣ ತಡೆ ನೀಡಲು ಸಾಧ್ಯವೇ. ನಾವು ನಿಮ್ಮ ಎಲ್ಲ ಎಫ್​ಐಆರ್​ಗಳ ಬಗ್ಗೆ ಆಲೋಚಿಸಲು ಸಾಧ್ಯವಿಲ್ಲ. ಅವನ್ನು ಗಮನಿಸಲು ಪ್ರತ್ಯೇಕ ಮ್ಯಾಜಿಸ್ಟ್ರೇಟ್​ಗಳಿದ್ದಾರೆ ಎಂದು ಜೇಠ್ಮಲಾನಿ ನುಡಿದರು. ‘ಗಾಜಿನ ಮನೆಯಲ್ಲಿರುವವರು ಕಲ್ಲು ಹೊಡೆಬಾರದೆನ್ನುವ ಮಾತಿದೆ’ ಎಂದು ಗುಪ್ತ ಹೇಳಿದರು. ನ್ಯಾಯಮೂರ್ತಿಗಳ ಈ ಮಾತನ್ನು ವಕೀಲ ಜೇಠ್ಮಲಾನಿ ಪ್ರಬಲವಾಗಿ ಆಕ್ಷೇಪಿಸಿದರು. ‘ನಾನು ಗಾಜಿನಮನೆಯಲ್ಲಿದ್ದೇನೆ ಎಂದು ನೀವು ಭಾವಿಸದಂತಿದೆ. ಇದು ಸಲ್ಲದ ಮಾತು’ ಎಂದು ಜೇಠ್ಮಲಾನಿ ಹೇಳಿದರು.

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​ಮುಖ್ ಬಗ್ಗೆ ಪರಮ್​ಬೀರ್ ಸಿಂಗ್ ಪತ್ರ ಬರೆದ ನಂತರ ಅವರಿಗೆ ರಾಜ್ಯ ಸರ್ಕಾರ ತೊಂದರೆ ಕೊಡುತ್ತಿದೆ ಎಂದು ಪರಮ್​ ಬೀರ್​ ಸಿಂಗ್ ಪರ ವಕೀಲರು ಮಾಹಿತಿ ನೀಡಿದರು. ‘ಡಿಜಿಪಿ ದರ್ಜೆಯ ಅಧಿಕಾರಿಯೊಬ್ಬರ ಮೇಲೆ ಒತ್ತಡ ಹೇರಬಹುದು ಎಂದಾದರೆ ಉಳಿದ ಅಧಿಕಾರಿಗಳು ಹೇಗೆ ಕೆಲಸ ಮಾಡಲು ಸಾಧ್ಯ? ನೀವು ಕಥೆ ಹೇಳಬೇಡಿ’ ಎಂದು ನ್ಯಾಯಮೂರ್ತಿ ಗುಪ್ತ ಹೇಳಿದರು. ಇನ್ನೇನು ಅರ್ಜಿ ವಜಾ ಮಾಡಿರುವ ಬಗ್ಗೆ ಆದೇಶ ಹೊರಡಿಸಬೇಕು ಎನ್ನುವಾಗ ಅರ್ಜಿ ಹಿಂಪಡೆಯುವುದಾಗಿ ಪರಮ್​ಬೀರ್ ಸಿಂಗ್ ಪರ ವಕೀಲರು ವಿನಂತಿಸಿದರು.

(Supreme Court Refuses To Entertain Mumbail Police Officer Param Bir Singhs Petition Against Maharashtra Govt)

ಇದನ್ನೂ ಓದಿ: ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು; ಉದ್ಧವ್ ಠಾಕ್ರೆಗೆ ಪತ್ರ ಬರೆದ ಪರಮ್​ವೀರ್ ಸಿಂಗ್

ಇದನ್ನೂ ಓದಿ: ಅನಿಲ್ ದೇಶ್​ಮುಖ್ ಅಪರಾಧ ತಿಳಿದೂ ಎಫ್​ಐಆರ್ ದಾಖಲಿಸಿಲ್ಲ ಏಕೆ?; ಪರಮ್​ವೀರ್ ಸಿಂಗ್​ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

Published On - 3:32 pm, Fri, 11 June 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ