AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Vista Project: ಕೇಂದ್ರದ ವಿಸ್ಟಾ ಯೋಜನೆಗೆ ತಡೆ ಸಂಬಂಧ ನಾವು ಹಸ್ತಕ್ಷೇಪ ಮಾಡುವುದಿಲ್ಲ..ದೆಹಲಿ ಹೈಕೋರ್ಟ್​ ಆದೇಶಕ್ಕೆ ಒಪ್ಪಿಗೆ: ಸುಪ್ರೀಂಕೋರ್ಟ್​

ಅರ್ಜಿದಾರರು ಕೊವಿಡ್​ 19 ಕಾರಣದಿಂದ ಕೆಲಸವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು ಹೇಳಿದ್ದಾರೆ. ಆದರೆ ಇಲ್ಲಿ ಅರ್ಜಿದಾರರು ಒಂದೇ ಒಂದು ಆಯ್ದ ಯೋಜನೆಗೆ ಸವಾಲು ಹಾಕಿದ್ದಾರೆ ಎಂದು ಹೈಕೋರ್ಟ್ ತನ್ನ ತೀರ್ಪಿನ ವೇಳೆ ಉಲ್ಲೇಖಿಸಿತ್ತು.

Central Vista Project: ಕೇಂದ್ರದ ವಿಸ್ಟಾ ಯೋಜನೆಗೆ ತಡೆ ಸಂಬಂಧ ನಾವು ಹಸ್ತಕ್ಷೇಪ ಮಾಡುವುದಿಲ್ಲ..ದೆಹಲಿ ಹೈಕೋರ್ಟ್​ ಆದೇಶಕ್ಕೆ ಒಪ್ಪಿಗೆ: ಸುಪ್ರೀಂಕೋರ್ಟ್​
ಸುಪ್ರೀಂ​ ಕೋರ್ಟ್
TV9 Web
| Edited By: |

Updated on:Jun 29, 2021 | 1:30 PM

Share

ದೆಹಲಿ: ಕೇಂದ್ರ ವಿಸ್ಟಾ ಯೋಜನೆಯಡಿ ನಡೆಯುತ್ತಿರುವ ನೂತನ ಪಾರ್ಲಿಮೆಂಟ್​ ಕಟ್ಟಡ ನಿರ್ಮಾಣ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತಾತ್ಕಾಲಿಕ ತಡೆ ನೀಡುವಂತೆ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್​​ನ ವಿಭಾಗೀಯ ಪೀಠ ಮೇ 31ರಂದು ವಜಾಗೊಳಿಸಿತ್ತು. ಇದೀಗ ಸುಪ್ರೀಂಕೋರ್ಟ್​ ಕೂಡ ಹೈಕೋರ್ಟ್​​ನ ತೀರ್ಪಿನಲ್ಲಿ ನಾವು ಹಸ್ತಕ್ಷೇಪ ತೋರುವುದಿಲ್ಲ. ದೆಹಲಿ ಹೈಕೋರ್ಟ್ ತೀರ್ಪನ್ನು ಒಪ್ಪುತ್ತೇವೆ ಎಂದಿದೆ. ದೆಹಲಿ ಹೈಕೋರ್ಟ್​ ಅರ್ಜಿಗಳನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ, ಹಲವು ಅರ್ಜಿದಾರರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಸರ್ವೋಚ್ಛ ನ್ಯಾಯಾಲಯ ಅದರ ವಿಚಾರಣೆಯನ್ನು ನಿರಾಕರಿಸಿದೆ.

ಅರ್ಜಿದಾರರು ಕೊವಿಡ್​ 19 ಕಾರಣದಿಂದ ಕೆಲಸವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು ಹೇಳಿದ್ದಾರೆ. ಆದರೆ ಇಲ್ಲಿ ಅರ್ಜಿದಾರರು ಒಂದೇ ಒಂದು ಆಯ್ದ ಯೋಜನೆಗೆ ಸವಾಲು ಹಾಕಿದ್ದಾರೆ ಎಂದು ಹೈಕೋರ್ಟ್ ತನ್ನ ತೀರ್ಪಿನ ವೇಳೆ ಉಲ್ಲೇಖಿಸಿದ್ದ ಅಂಶವನ್ನೇ ಸುಪ್ರೀಂಕೋರ್ಟ್ ಕೂಡ ಒತ್ತಿಹೇಳಿದ್ದು, ಹೈಕೋರ್ಟ್​ನ ದೃಷ್ಟಿಕೋನ ಸರಿಯಾಗಿಯೇ ಇದೆ ಎಂದು ಹೇಳಿದೆ. ಸಾರ್ವಜನಿಕವಾಗಿ ನಾವು ತುಂಬ ಉತ್ಸಾಹಭರಿತರಾಗಿದ್ದು, ಉಳಿದ ಯೋಜನೆಗಳ ಬಗ್ಗೆಯೂ ನಾವು ಕಳವಳಹೊಂದಿದ್ದೇವೆ ಎಂಬುದನ್ನು ಸಾಬೀತು ಪಡಿಸುವ ಸ್ಥಿತಿಯಲ್ಲಿ ಅರ್ಜಿದಾರರು ಇಲ್ಲ. ನಾವು ಹೈಕೋರ್ಟ್​ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಅಲ್ಲದೆ, ವಿಸ್ಟಾ ಯೋಜನೆ ಗುತ್ತಿಗೆದಾರ ಕೊವಿಡ್​ 19 ಪ್ರೋಟೋಕಾಲ್​ಗಳನ್ನು ಪಾಲಿಸುತ್ತಲೇ ಕೆಲಸ ನಡೆಸುತ್ತಿದ್ದರೂ, ಅರ್ಜಿದಾರರು ತಮ್ಮ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಾಕಿದ್ದು ಗಮನಕ್ಕೆ ಬಂದಿದ್ದಾಗಿ ಕೋರ್ಟ್​ ಹೇಳಿದೆ.

ಕೊವಿಡ್​ ಎರಡನೇ ಅಲೆಯ ಉಲ್ಬಣದ ಮಧ್ಯೆಯೂ ಕೇಂದ್ರ ಸರ್ಕಾರ ವಿಸ್ಟಾ ಯೋಜನೆಯನ್ನು ಮುಂದುವರಿಸಿದ್ದರ ಬಗ್ಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಅದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಬೇಕು ಎಂದು ಹಲವರು ಹೈಕೋರ್ಟ್​ಗೆ ಪಿಐಎಲ್​ ಸಲ್ಲಿಸಿದ್ದವು. ವಿಚಾರಣೆ ನಡೆಸಿ್ದ ಮುಖ್ಯ ನ್ಯಾಯಾಧೀಶ ಡಿ.ಎನ್​.ಪಟೇಲ್​ ಮತ್ತು ಜಸ್ಟೀಸ್​​ ಜ್ಯೋತಿ ಸಿಂಗ್​ ಅವರ ದ್ವಿಸದಸ್ಯ ಪೀಠ, ಅರ್ಜಿಗಳನ್ನು ವಜಾಗೊಳಿಸಿದ್ದರು.

ಇದನ್ನೂ ಓದಿ: MS Dhoni: ಧೋನಿಯ ಹೆಲ್ಮೆಟ್​ಗೆ ರಾಷ್ಟ್ರಧ್ವಜವನ್ನು ಹೊಂದುವ ಭಾಗ್ಯ ಸಿಗಲಿಲ್ಲ; ಇದರ ಹಿಂದಿನ ಅಸಲಿ ಕಾರಣ ಗೊತ್ತಾ?

Supreme Court refuses to interfere with Delhi High Court order about Central Vista Project

Published On - 1:29 pm, Tue, 29 June 21

Follow Us
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?