AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Vista Project: ಕೇಂದ್ರದ ವಿಸ್ಟಾ ಯೋಜನೆಗೆ ತಡೆ ಸಂಬಂಧ ನಾವು ಹಸ್ತಕ್ಷೇಪ ಮಾಡುವುದಿಲ್ಲ..ದೆಹಲಿ ಹೈಕೋರ್ಟ್​ ಆದೇಶಕ್ಕೆ ಒಪ್ಪಿಗೆ: ಸುಪ್ರೀಂಕೋರ್ಟ್​

ಅರ್ಜಿದಾರರು ಕೊವಿಡ್​ 19 ಕಾರಣದಿಂದ ಕೆಲಸವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು ಹೇಳಿದ್ದಾರೆ. ಆದರೆ ಇಲ್ಲಿ ಅರ್ಜಿದಾರರು ಒಂದೇ ಒಂದು ಆಯ್ದ ಯೋಜನೆಗೆ ಸವಾಲು ಹಾಕಿದ್ದಾರೆ ಎಂದು ಹೈಕೋರ್ಟ್ ತನ್ನ ತೀರ್ಪಿನ ವೇಳೆ ಉಲ್ಲೇಖಿಸಿತ್ತು.

Central Vista Project: ಕೇಂದ್ರದ ವಿಸ್ಟಾ ಯೋಜನೆಗೆ ತಡೆ ಸಂಬಂಧ ನಾವು ಹಸ್ತಕ್ಷೇಪ ಮಾಡುವುದಿಲ್ಲ..ದೆಹಲಿ ಹೈಕೋರ್ಟ್​ ಆದೇಶಕ್ಕೆ ಒಪ್ಪಿಗೆ: ಸುಪ್ರೀಂಕೋರ್ಟ್​
ಸುಪ್ರೀಂ​ ಕೋರ್ಟ್
TV9 Web
| Edited By: |

Updated on:Jun 29, 2021 | 1:30 PM

Share

ದೆಹಲಿ: ಕೇಂದ್ರ ವಿಸ್ಟಾ ಯೋಜನೆಯಡಿ ನಡೆಯುತ್ತಿರುವ ನೂತನ ಪಾರ್ಲಿಮೆಂಟ್​ ಕಟ್ಟಡ ನಿರ್ಮಾಣ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತಾತ್ಕಾಲಿಕ ತಡೆ ನೀಡುವಂತೆ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್​​ನ ವಿಭಾಗೀಯ ಪೀಠ ಮೇ 31ರಂದು ವಜಾಗೊಳಿಸಿತ್ತು. ಇದೀಗ ಸುಪ್ರೀಂಕೋರ್ಟ್​ ಕೂಡ ಹೈಕೋರ್ಟ್​​ನ ತೀರ್ಪಿನಲ್ಲಿ ನಾವು ಹಸ್ತಕ್ಷೇಪ ತೋರುವುದಿಲ್ಲ. ದೆಹಲಿ ಹೈಕೋರ್ಟ್ ತೀರ್ಪನ್ನು ಒಪ್ಪುತ್ತೇವೆ ಎಂದಿದೆ. ದೆಹಲಿ ಹೈಕೋರ್ಟ್​ ಅರ್ಜಿಗಳನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ, ಹಲವು ಅರ್ಜಿದಾರರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಸರ್ವೋಚ್ಛ ನ್ಯಾಯಾಲಯ ಅದರ ವಿಚಾರಣೆಯನ್ನು ನಿರಾಕರಿಸಿದೆ.

ಅರ್ಜಿದಾರರು ಕೊವಿಡ್​ 19 ಕಾರಣದಿಂದ ಕೆಲಸವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು ಹೇಳಿದ್ದಾರೆ. ಆದರೆ ಇಲ್ಲಿ ಅರ್ಜಿದಾರರು ಒಂದೇ ಒಂದು ಆಯ್ದ ಯೋಜನೆಗೆ ಸವಾಲು ಹಾಕಿದ್ದಾರೆ ಎಂದು ಹೈಕೋರ್ಟ್ ತನ್ನ ತೀರ್ಪಿನ ವೇಳೆ ಉಲ್ಲೇಖಿಸಿದ್ದ ಅಂಶವನ್ನೇ ಸುಪ್ರೀಂಕೋರ್ಟ್ ಕೂಡ ಒತ್ತಿಹೇಳಿದ್ದು, ಹೈಕೋರ್ಟ್​ನ ದೃಷ್ಟಿಕೋನ ಸರಿಯಾಗಿಯೇ ಇದೆ ಎಂದು ಹೇಳಿದೆ. ಸಾರ್ವಜನಿಕವಾಗಿ ನಾವು ತುಂಬ ಉತ್ಸಾಹಭರಿತರಾಗಿದ್ದು, ಉಳಿದ ಯೋಜನೆಗಳ ಬಗ್ಗೆಯೂ ನಾವು ಕಳವಳಹೊಂದಿದ್ದೇವೆ ಎಂಬುದನ್ನು ಸಾಬೀತು ಪಡಿಸುವ ಸ್ಥಿತಿಯಲ್ಲಿ ಅರ್ಜಿದಾರರು ಇಲ್ಲ. ನಾವು ಹೈಕೋರ್ಟ್​ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಅಲ್ಲದೆ, ವಿಸ್ಟಾ ಯೋಜನೆ ಗುತ್ತಿಗೆದಾರ ಕೊವಿಡ್​ 19 ಪ್ರೋಟೋಕಾಲ್​ಗಳನ್ನು ಪಾಲಿಸುತ್ತಲೇ ಕೆಲಸ ನಡೆಸುತ್ತಿದ್ದರೂ, ಅರ್ಜಿದಾರರು ತಮ್ಮ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಾಕಿದ್ದು ಗಮನಕ್ಕೆ ಬಂದಿದ್ದಾಗಿ ಕೋರ್ಟ್​ ಹೇಳಿದೆ.

ಕೊವಿಡ್​ ಎರಡನೇ ಅಲೆಯ ಉಲ್ಬಣದ ಮಧ್ಯೆಯೂ ಕೇಂದ್ರ ಸರ್ಕಾರ ವಿಸ್ಟಾ ಯೋಜನೆಯನ್ನು ಮುಂದುವರಿಸಿದ್ದರ ಬಗ್ಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಅದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಬೇಕು ಎಂದು ಹಲವರು ಹೈಕೋರ್ಟ್​ಗೆ ಪಿಐಎಲ್​ ಸಲ್ಲಿಸಿದ್ದವು. ವಿಚಾರಣೆ ನಡೆಸಿ್ದ ಮುಖ್ಯ ನ್ಯಾಯಾಧೀಶ ಡಿ.ಎನ್​.ಪಟೇಲ್​ ಮತ್ತು ಜಸ್ಟೀಸ್​​ ಜ್ಯೋತಿ ಸಿಂಗ್​ ಅವರ ದ್ವಿಸದಸ್ಯ ಪೀಠ, ಅರ್ಜಿಗಳನ್ನು ವಜಾಗೊಳಿಸಿದ್ದರು.

ಇದನ್ನೂ ಓದಿ: MS Dhoni: ಧೋನಿಯ ಹೆಲ್ಮೆಟ್​ಗೆ ರಾಷ್ಟ್ರಧ್ವಜವನ್ನು ಹೊಂದುವ ಭಾಗ್ಯ ಸಿಗಲಿಲ್ಲ; ಇದರ ಹಿಂದಿನ ಅಸಲಿ ಕಾರಣ ಗೊತ್ತಾ?

Supreme Court refuses to interfere with Delhi High Court order about Central Vista Project

Published On - 1:29 pm, Tue, 29 June 21

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು