AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Vista Project: ಕೇಂದ್ರದ ವಿಸ್ಟಾ ಯೋಜನೆಗೆ ತಡೆ ಸಂಬಂಧ ನಾವು ಹಸ್ತಕ್ಷೇಪ ಮಾಡುವುದಿಲ್ಲ..ದೆಹಲಿ ಹೈಕೋರ್ಟ್​ ಆದೇಶಕ್ಕೆ ಒಪ್ಪಿಗೆ: ಸುಪ್ರೀಂಕೋರ್ಟ್​

ಅರ್ಜಿದಾರರು ಕೊವಿಡ್​ 19 ಕಾರಣದಿಂದ ಕೆಲಸವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು ಹೇಳಿದ್ದಾರೆ. ಆದರೆ ಇಲ್ಲಿ ಅರ್ಜಿದಾರರು ಒಂದೇ ಒಂದು ಆಯ್ದ ಯೋಜನೆಗೆ ಸವಾಲು ಹಾಕಿದ್ದಾರೆ ಎಂದು ಹೈಕೋರ್ಟ್ ತನ್ನ ತೀರ್ಪಿನ ವೇಳೆ ಉಲ್ಲೇಖಿಸಿತ್ತು.

Central Vista Project: ಕೇಂದ್ರದ ವಿಸ್ಟಾ ಯೋಜನೆಗೆ ತಡೆ ಸಂಬಂಧ ನಾವು ಹಸ್ತಕ್ಷೇಪ ಮಾಡುವುದಿಲ್ಲ..ದೆಹಲಿ ಹೈಕೋರ್ಟ್​ ಆದೇಶಕ್ಕೆ ಒಪ್ಪಿಗೆ: ಸುಪ್ರೀಂಕೋರ್ಟ್​
ಸುಪ್ರೀಂ​ ಕೋರ್ಟ್
TV9 Web
| Edited By: |

Updated on:Jun 29, 2021 | 1:30 PM

Share

ದೆಹಲಿ: ಕೇಂದ್ರ ವಿಸ್ಟಾ ಯೋಜನೆಯಡಿ ನಡೆಯುತ್ತಿರುವ ನೂತನ ಪಾರ್ಲಿಮೆಂಟ್​ ಕಟ್ಟಡ ನಿರ್ಮಾಣ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತಾತ್ಕಾಲಿಕ ತಡೆ ನೀಡುವಂತೆ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್​​ನ ವಿಭಾಗೀಯ ಪೀಠ ಮೇ 31ರಂದು ವಜಾಗೊಳಿಸಿತ್ತು. ಇದೀಗ ಸುಪ್ರೀಂಕೋರ್ಟ್​ ಕೂಡ ಹೈಕೋರ್ಟ್​​ನ ತೀರ್ಪಿನಲ್ಲಿ ನಾವು ಹಸ್ತಕ್ಷೇಪ ತೋರುವುದಿಲ್ಲ. ದೆಹಲಿ ಹೈಕೋರ್ಟ್ ತೀರ್ಪನ್ನು ಒಪ್ಪುತ್ತೇವೆ ಎಂದಿದೆ. ದೆಹಲಿ ಹೈಕೋರ್ಟ್​ ಅರ್ಜಿಗಳನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ, ಹಲವು ಅರ್ಜಿದಾರರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಸರ್ವೋಚ್ಛ ನ್ಯಾಯಾಲಯ ಅದರ ವಿಚಾರಣೆಯನ್ನು ನಿರಾಕರಿಸಿದೆ.

ಅರ್ಜಿದಾರರು ಕೊವಿಡ್​ 19 ಕಾರಣದಿಂದ ಕೆಲಸವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು ಹೇಳಿದ್ದಾರೆ. ಆದರೆ ಇಲ್ಲಿ ಅರ್ಜಿದಾರರು ಒಂದೇ ಒಂದು ಆಯ್ದ ಯೋಜನೆಗೆ ಸವಾಲು ಹಾಕಿದ್ದಾರೆ ಎಂದು ಹೈಕೋರ್ಟ್ ತನ್ನ ತೀರ್ಪಿನ ವೇಳೆ ಉಲ್ಲೇಖಿಸಿದ್ದ ಅಂಶವನ್ನೇ ಸುಪ್ರೀಂಕೋರ್ಟ್ ಕೂಡ ಒತ್ತಿಹೇಳಿದ್ದು, ಹೈಕೋರ್ಟ್​ನ ದೃಷ್ಟಿಕೋನ ಸರಿಯಾಗಿಯೇ ಇದೆ ಎಂದು ಹೇಳಿದೆ. ಸಾರ್ವಜನಿಕವಾಗಿ ನಾವು ತುಂಬ ಉತ್ಸಾಹಭರಿತರಾಗಿದ್ದು, ಉಳಿದ ಯೋಜನೆಗಳ ಬಗ್ಗೆಯೂ ನಾವು ಕಳವಳಹೊಂದಿದ್ದೇವೆ ಎಂಬುದನ್ನು ಸಾಬೀತು ಪಡಿಸುವ ಸ್ಥಿತಿಯಲ್ಲಿ ಅರ್ಜಿದಾರರು ಇಲ್ಲ. ನಾವು ಹೈಕೋರ್ಟ್​ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಅಲ್ಲದೆ, ವಿಸ್ಟಾ ಯೋಜನೆ ಗುತ್ತಿಗೆದಾರ ಕೊವಿಡ್​ 19 ಪ್ರೋಟೋಕಾಲ್​ಗಳನ್ನು ಪಾಲಿಸುತ್ತಲೇ ಕೆಲಸ ನಡೆಸುತ್ತಿದ್ದರೂ, ಅರ್ಜಿದಾರರು ತಮ್ಮ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಾಕಿದ್ದು ಗಮನಕ್ಕೆ ಬಂದಿದ್ದಾಗಿ ಕೋರ್ಟ್​ ಹೇಳಿದೆ.

ಕೊವಿಡ್​ ಎರಡನೇ ಅಲೆಯ ಉಲ್ಬಣದ ಮಧ್ಯೆಯೂ ಕೇಂದ್ರ ಸರ್ಕಾರ ವಿಸ್ಟಾ ಯೋಜನೆಯನ್ನು ಮುಂದುವರಿಸಿದ್ದರ ಬಗ್ಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಅದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಬೇಕು ಎಂದು ಹಲವರು ಹೈಕೋರ್ಟ್​ಗೆ ಪಿಐಎಲ್​ ಸಲ್ಲಿಸಿದ್ದವು. ವಿಚಾರಣೆ ನಡೆಸಿ್ದ ಮುಖ್ಯ ನ್ಯಾಯಾಧೀಶ ಡಿ.ಎನ್​.ಪಟೇಲ್​ ಮತ್ತು ಜಸ್ಟೀಸ್​​ ಜ್ಯೋತಿ ಸಿಂಗ್​ ಅವರ ದ್ವಿಸದಸ್ಯ ಪೀಠ, ಅರ್ಜಿಗಳನ್ನು ವಜಾಗೊಳಿಸಿದ್ದರು.

ಇದನ್ನೂ ಓದಿ: MS Dhoni: ಧೋನಿಯ ಹೆಲ್ಮೆಟ್​ಗೆ ರಾಷ್ಟ್ರಧ್ವಜವನ್ನು ಹೊಂದುವ ಭಾಗ್ಯ ಸಿಗಲಿಲ್ಲ; ಇದರ ಹಿಂದಿನ ಅಸಲಿ ಕಾರಣ ಗೊತ್ತಾ?

Supreme Court refuses to interfere with Delhi High Court order about Central Vista Project

Published On - 1:29 pm, Tue, 29 June 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ