AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET PG 2022 ನೀಟ್ ಪಿಜಿ ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​​​ ನಕಾರ

 ಮುಂದೂಡಿಕೆಯಿಂದ ಪರೀಕ್ಷೆಗೆ ಸಿದ್ಧರಾಗಿರುವ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತದೆ ಎಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಗಮನಿಸಿತು. ನಾವು ಇದನ್ನು ಮಾಡುವುದು ಹೇಗೆ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಕೇಳಿದ್ದಾರೆ.

NEET PG 2022 ನೀಟ್ ಪಿಜಿ ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​​​ ನಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 13, 2022 | 1:47 PM

Share

ದೆಹಲಿ: ನೀಟ್ ಪಿಜಿ 2022 (NEET-PG 2022)ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಶುಕ್ರವಾರ ತಿರಸ್ಕರಿಸಿದ ಸುಪ್ರೀಂಕೋರ್ಟ್ (Supreme Court) ಹೀಗೆ ಮಾಡಿದರೆ ಕೆಲವರ ಕಾರಣದಿಂದಾಗಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಸಾವಿರಾರು ಮಂದಿಗೆ ತೊಂದರೆಯಾಗುತ್ತದೆ ಎಂದು ಹೇಳಿದೆ. ನೀಟ್ ಪಿಜಿ 2021 ರ ಕೌನ್ಸೆಲಿಂಗ್‌ನಲ್ಲಿ ವಿಳಂಬವನ್ನು ಉಲ್ಲೇಖಿಸಿ ಪರೀಕ್ಷೆಯನ್ನು ಮುಂದೂಡುವಂತೆ ಕೇಂದ್ರ ಸರ್ಕಾರಕ್ಕೆ ಪದೇ ಪದೇ ಒತ್ತಾಯಿಸಿದ ನಂತರ ಸುಪ್ರೀಂಕೋರ್ಟ್‌ನಲ್ಲಿ ಈ ಮನವಿ ಸಲ್ಲಿಸಲಾಗಿದೆ. ಭಾರತೀಯ ವೈದ್ಯಕೀಯ ಸಂಘ (IMA) ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಅವರಿಗೆ ಪರೀಕ್ಷೆಯನ್ನು ಮರು ನಿಗದಿಪಡಿಸುವಂತೆ ಮನವಿ ಮಾಡಿತ್ತು. ಮಾಂಡವಿಯಾ ಅವರಿಗೆ ಬರೆದ ಪತ್ರದಲ್ಲಿ, ನೀಟ್ ಪಿಜಿ 2022 ಪರೀಕ್ಷೆಯ ದಿನಾಂಕ ಮತ್ತು 2021 ರ ಕೌನ್ಸೆಲಿಂಗ್‌ನ ನಡುವಿನ ಕಾಲವಧಿಯು ಅಂತಹ ಅತ್ಯಂತ ಕಷ್ಟಕರವಾದ ಪರೀಕ್ಷೆಗೆ ತಯಾರಾಗಲು ಮತ್ತು ಪರೀಕ್ಷೆಗೆ ಹಾಜರಾಗಲು ಆಕಾಂಕ್ಷಿಗಳಿಗೆ ತುಂಬಾ ಸಣ್ಣದು ಎಂದು ಐಎಂಎ ಹೇಳಿದೆ. ಆಕಾಂಕ್ಷಿಗಳು ಗೊಂದಲಕ್ಕೊಳಗಾಗಿದ್ದಾರೆ, ಇದು ಅವರ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದು ಅದು ಹೇಳಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ದ್ವಿಸದಸ್ಯ ಪೀಠವು ತನ್ನ ಆದೇಶದಲ್ಲಿ ಮುಂದೂಡಿಕೆಯು ಅವ್ಯವಸ್ಥೆ ಮತ್ತು ಅನಿಶ್ಚಿತತೆ ಮತ್ತು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯನ್ನು ಸೃಷ್ಟಿಸುತ್ತದೆ ಎಂದು ಹೇಳಿದೆ.

ಮುಂದೂಡಿಕೆಯಿಂದ ಪರೀಕ್ಷೆಗೆ ಸಿದ್ಧರಾಗಿರುವ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತದೆ ಎಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಗಮನಿಸಿತು. ನಾವು ಇದನ್ನು ಮಾಡುವುದು ಹೇಗೆ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಕೇಳಿದ್ದಾರೆ.

ಪರೀಕ್ಷೆಯನ್ನು ನಡೆಸುವಲ್ಲಿ ಯಾವುದೇ ವಿಳಂಬವು ರೆಸಿಡೆಂಟ್ ಡಾಕ್ಟರ್ಸ್​​​ಗಳ ಸಂಖ್ಯೆ ಕಡಿಮೆಯಾಗುವುದಕ್ಕೆ ಕಾರಣವಾಗುತ್ತದೆ ಎಂದು ಪೀಠವು ಗಮನಿಸಿದೆ. ನೀಟ್ ಪಿಜಿ 2022 ಅನ್ನು ಮುಂದೂಡುವ ವಿನಂತಿಯನ್ನು ಒಪ್ಪಲು ಸಾಧ್ಯವಿಲ್ಲ. ಯಾಕೆಂದರೆ ಇದು ರೋಗಿಗಳ ಆರೈಕೆ ಮತ್ತು ವೈದ್ಯರ ವೃತ್ತಿಜೀವನದ ಮೇಲೆ ಪರಿಣಾಮ ಬೀರುತ್ತದೆ, ರೋಗಿಗಳ ಆರೈಕೆಯ ಅಗತ್ಯ ಪ್ರಧಾನವಾದುದು ಎಂದಿದೆ. “ಸಾಂಕ್ರಾಮಿಕ ರೋಗದಿಂದಾಗಿ ಹಳಿತಪ್ಪಿದ ದೇಶವು ಹಳಿಗಳ ಮೇಲೆ ಹಿಂತಿರುಗುತ್ತಿದ್ದಂತೆ, ಈ ನ್ಯಾಯಾಲಯವು ನಿಗದಿಪಡಿಸಿದ ಸಮಯದ ವೇಳಾಪಟ್ಟಿಯನ್ನು ಅನುಸರಿಸಬೇಕು” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ
Image
NEET PG 2022: ನೀಟ್ ಪರೀಕ್ಷೆ ಮುಂದೂಡಲು ಆರೋಗ್ಯ ಸಚಿವರಿಗೆ ಐಎಂಎ ಮನವಿ
Image
ನೀಟ್​ ವಿರೋಧಿ ಮಸೂದೆ ಮಂಡಿಸಿದ ತಮಿಳುನಾಡು ಸರ್ಕಾರ; ಗೃಹ ಸಚಿವಾಲಯಕ್ಕೆ ಕಳಿಸಿಕೊಟ್ಟ ರಾಜ್ಯಪಾಲರು
Image
NEET 2022: ಎಎಂಎಫ್​ಎಸ್​ ಬಿಎಸ್​ಸಿ ನರ್ಸಿಂಗ್​ ಕಾಲೇಜುಗಳ ಪ್ರವೇಶ ಪರೀಕ್ಷೆಯಾಗಿ ನೀಟ್ ಬಳಕೆ, ಅರ್ಜಿ ಸಲ್ಲಿಸಲು ಮೇ 16 ಅಂತಿಮ ದಿನಾಂಕ
Image
GetCETGo: ಜೆಇಇ, ನೀಟ್, ಸಿಇಟಿಗಳಿಗೆ ಉಚಿತ ನೆರವು ನೀಡುವ ‘ಗೆಟ್ ಸೆಟ್ ಗೋ’ಗೆ ಚಾಲನೆ: ಪ್ರಯೋಜನ ಪಡೆಯೋದು ಹೇಗೆ?

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ  ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:16 pm, Fri, 13 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!