AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮ ಕುರಿತ ವಿವಾದ; ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ಕೋರ್ಟ್ ರಿಲೀಫ್

ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿಗಳನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ತಾವು ನೀಡಿದ್ದ ವಿವಾದಾತ್ಮಕ ಹೇಳಿಕೆಗಳ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ವಿವಿಧ ಎಫ್‌ಐಆರ್‌ಗಳು ಮತ್ತು ದೂರುಗಳನ್ನು ಕ್ರೋಢೀಕರಿಸಲು ನಿರ್ದೇಶನಗಳನ್ನು ಕೋರಿ ಉದಯನಿಧಿ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಒಳಪಡಿಸಿತ್ತು.

ಸನಾತನ ಧರ್ಮ ಕುರಿತ ವಿವಾದ; ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ಕೋರ್ಟ್ ರಿಲೀಫ್
Udhayanidhi Stalin
ಸುಷ್ಮಾ ಚಕ್ರೆ
|

Updated on: Jan 28, 2025 | 3:25 PM

Share

ನವದೆಹಲಿ: ಕಳೆದ ವರ್ಷ ತಮ್ಮ ಭಾಷಣದಲ್ಲಿ ‘ಸನಾತನ ಧರ್ಮ’ದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ ಡಿಸಿಎಂ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಮೂರು ರಿಟ್ ಅರ್ಜಿಗಳನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ರಿಟ್ ಅರ್ಜಿಗಳನ್ನು ಹೇಗೆ ನಿರ್ವಹಿಸಬಹುದು ಎಂದು ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ನ್ಯಾಯಪೀಠ ಕೇಳಿದೆ.

2023ರ ಸೆಪ್ಟೆಂಬರ್ ತಿಂಗಳಲ್ಲಿ ಚೆನ್ನೈನಲ್ಲಿ ನಡೆದ ಸಮ್ಮೇಳನವೊಂದರಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ‘ಸನಾತನ ಧರ್ಮ’ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂನಂತೆ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: ಸನಾತನ ಧರ್ಮ ಕುರಿತ ವಿವಾದಾತ್ಮಕ ಹೇಳಿಕೆ; ಸಚಿವ ಉದಯನಿಧಿ ಸ್ಟಾಲಿನ್ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಕಾನೂನಿನ ಅಡಿಯಲ್ಲಿ ಲಭ್ಯವಿರುವ ಪರಿಹಾರಗಳನ್ನು ಪಡೆಯುವ ಸ್ವಾತಂತ್ರ್ಯದೊಂದಿಗೆ ಅರ್ಜಿಯನ್ನು ಹಿಂಪಡೆಯಲಾಗಿದೆ ಎಂದು ರಿಟ್ ಅರ್ಜಿಗಳನ್ನು ವಜಾಗೊಳಿಸಲಾಯಿತು. ತಮ್ಮ ಭಾಷಣದ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ವಿವಿಧ ಎಫ್‌ಐಆರ್‌ಗಳು ಮತ್ತು ದೂರುಗಳನ್ನು ಕ್ರೋಢೀಕರಿಸಲು ನಿರ್ದೇಶನಗಳನ್ನು ಕೋರಿ ಉದಯನಿಧಿ ಸ್ಟಾಲಿನ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಒಳಪಡಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ