AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stalin: ನೀವೊಬ್ರು ಮಿನಿಸ್ಟರು, ಜವಾಬ್ದಾರಿ ಇರಲಿ: ಸನಾತನ ಧರ್ಮ ಅಳಿಸಬೇಕೆಂದಿದ್ದ ಉದಯನಿಧಿ ಸ್ಟಾಲಿನ್​ಗೆ ಸುಪ್ರೀಂ ತರಾಟೆ

Supreme Court on Udayanidhi Stalin: ಸನಾತನ ಧರ್ಮವನ್ನು ನಿಂದಿಸಿ ಮಾತನಾಡಿದ್ದ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್​ಗೆ ಸರ್ವೋಚ್ಚ ನ್ಯಾಯಾಲಯ ತಿಳಿ ಹೇಳಿದೆ. ನೀವು ಸಚಿವರಾಗಿದ್ದೀರಿ. ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆ ಹೊಂದಿರಬೇಕು ಎಂದು ಸಿಎಂ ಸ್ಟಾಲಿನ್ ಅವರ ಮಗನಾದ ಉದಯನಿಧಿಗೆ ಕೋರ್ಟ್ ಹೇಳಿದೆ. ದೇಶಾದ್ಯಂತ ಹಲವೆಡೆ ಸ್ಟಾಲಿನ್ ವಿರುದ್ಧ ಎಫ್​ಐಆರ್​ಗಳು ದಾಖಲಾಗಿವೆ. ಅವನ್ನು ಒಂದೇ ಕಡೆ ಹಾಕುವಂತೆ ಸ್ಟಾಲಿನ್ ಸುಪ್ರೀಂ ಮೆಟ್ಟಿಲೇರಿದ್ದಾರೆ.

Stalin: ನೀವೊಬ್ರು ಮಿನಿಸ್ಟರು, ಜವಾಬ್ದಾರಿ ಇರಲಿ: ಸನಾತನ ಧರ್ಮ ಅಳಿಸಬೇಕೆಂದಿದ್ದ ಉದಯನಿಧಿ ಸ್ಟಾಲಿನ್​ಗೆ ಸುಪ್ರೀಂ ತರಾಟೆ
ಉದಯನಿಧಿ ಸ್ಟಾಲಿನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 04, 2024 | 6:49 PM

Share

ನವದೆಹಲಿ, ಮಾರ್ಚ್ 4: ಸನಾತನ ಧರ್ಮದ ವಿರುದ್ಧ ಕಟುವಾಗಿ ಮಾತನಾಡಿದ್ದ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ (Udayanidhi Stalin) ಅವರಿಗೆ ಸುಪ್ರೀಂಕೋರ್ಟ್ ಜವಾಬ್ದಾರಿಯ ಪಾಠ ಹೇಳಿದೆ. ಸೂಕ್ಷ್ಮ ವಿಚಾರಗಳಲ್ಲಿ ಯಾವ ರೀತಿ ಮಾತನಾಡಬೇಕು ಎಂಬ ಜವಾಬ್ದಾರಿ ಸಚಿವರಾದವರಿಗೆ ಇರಬೇಕು. ಪದಪ್ರಯೋಗದಲ್ಲಿ ಎಚ್ಚರಿಕೆ ವಹಿಸಬೇಕಿತ್ತು ಎಂದು ಸಿಎಂ ಸ್ಟಾಲಿನ್ ಅವರ ಮಗನಾದ ಉದಯನಿಧಿಗೆ ಕೋರ್ಟ್ ತಿಳಿಹೇಳಿದೆ. ಸನಾತನ ಧರ್ಮ (Sanatan Dharma) ವಿರುದ್ಧ ಸ್ಟಾಲಿನ್ ನೀಡಿದ ಹೇಳಿಕೆಗಳ ವಿರುದ್ಧ ದೇಶದ ವಿವಿಧೆಡೆ ಎಫ್​ಐಆರ್​ಗಳು ದಾಖಲಾಗಿವೆ. ಅವೆಲ್ಲವನ್ನೂ ಒಂದುಸೇರಿಸಬೇಕು ಎಂದು ಸ್ಟಾಲಿನ್ ಮಾಡಿಕೊಂಡ ಮನವಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ನಡೆಸುತ್ತಿದೆ. ಮಾರ್ಚ್ 15ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ.

ಉತ್ತರಪ್ರದೇಶ, ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ ಉದಯನಿಧಿ ಮೇಲೆ ಎಫ್​ಐಆರ್​ಗಳು ದಾಖಲಾಗಿವೆ. ಈ ಸಂಬಂಧ ಜಾಮೀನು ನೀಡುವಂತೆ ಉದಯನಿಧಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅರ್ಜಿ ಹಾಕಿದ್ದರು. ಸಂಜೀವ್ ಖನ್ನ ಮತ್ತು ದೀಪಾಂಕರ್ ದತ್ತ ಅವರಿರುವ ಸರ್ವೋಚ್ಚ ನ್ಯಾಯಪೀಠ ಇದರ ವಿಚಾರಣೆ ನಡೆಸಿ, ಸಂಬಂಧಪಟ್ಟ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸುವಂತೆ ಸ್ಟಾಲಿನ್ ಪರ ವಕೀಲರಿಗೆ ತಿಳಿಸಿತು.

ಇದನ್ನೂ ಓದಿ: ಪಕ್ಷದ ಕಚೇರಿ ಖಾಲಿ ಮಾಡುವಂತೆ ಎಎಪಿಗೆ ಸುಪ್ರೀಂಕೋರ್ಟ್ ಸೂಚನೆ; ಜೂನ್ 15ರವರೆಗೂ ಗಡುವು

ಆದರೆ, ಆರು ರಾಜ್ಯಗಳಲ್ಲಿ ಪ್ರಕರಣಗಳಿರುವುದರಿಂದ ಆರು ಹೈಕೋರ್ಟ್​​ಗಳಿಗೆ ಹೋಗಬೇಕಾಗುತ್ತದೆ ಎಂದು ಹತಾಶೆ ತೋರ್ಪಡಿಸಿದ ಸಿಂಘ್ವಿ, ನೂಪುರ್ ಶರ್ಮಾ ಪ್ರಕರಣವನ್ನು ಉಲ್ಲೇಖಿಸಿ ವಿವಿಧ ಎಫ್​ಐಆರ್​ಗಳನ್ನು ಒಂದುಗೂಡಿಸುವಂತೆ ಕೇಳಿಕೊಂಡರು. ಇದಕ್ಕೆ ನ್ಯಾಯಪೀಠ, ಹೇಳಿಕೆ ಕೊಡುವ ಮುಂಚೆ ಯೋಚಿಸಬೇಕಿತ್ತು ಎಂದು ತಿವಿಯಿತು.

‘ಸಂವಿಧಾನದಲ್ಲಿ ವಾಕ್ ಸ್ವಾತಂತ್ರ್ಯದ ಹಕ್ಕನ್ನು ದುರ್ಬಳಕೆ ಮಾಡಿಕೊಂಡಿದ್ದೀರಿ. ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ದುರ್ಬಳಕೆ ಮಾಡಿಕೊಂಡಿದ್ದೀರಿ. ಈಗ ಸಂವಿಧಾನದ 32ನೇ ಆರ್ಟಿಕಲ್ ಅಡಿಯಲ್ಲಿ ನಿಮ್ಮ ಹಕ್ಕು ಪಡೆಯಲು ಹೊರಟಿದ್ದೀರಾ? ನೀವು ಹೇಳಿದ ಪರಿಣಾಮಗಳೇನು ಗೊತ್ತಾ,’ ಎಂದು ವಕೀಲ ಸಿಂಘ್ವಿ ಮೂಲಕ ಉದಯನಿಧಿ ಸ್ಟಾಲಿನ್​ಗೆ ಕೋರ್ಟ್ ಪ್ರಶ್ನೆ ಮಾಡಿತು.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಮಗ ಮತ್ತು ಆ ಸರ್ಕಾರದಲ್ಲಿ ಸಚಿವರೂ ಆಗಿರುವ ಉದಯನಿಧಿ ಸ್ಟಾಲಿನ್ ಅವರು ಕೆಲ ತಿಂಗಳ ಹಿಂದೆ, ಸನಾತನ ಧರ್ಮದ (ಹಿಂದೂ ಧರ್ಮ) ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಮಹಿಳೆಗೆ ಮಾಸಿಕ 1,000 ರೂ ಧನಸಹಾಯ; ಶಿಕ್ಷಣ ಕ್ಷೇತ್ರಕ್ಕೆ ಶೇ. 21ಕ್ಕಿಂತ ಹೆಚ್ಚು ಹಣ; ದೆಹಲಿ ಸರ್ಕಾರದ ಬಜೆಟ್ ಧಮಾಕ

ಮಲೇರಿಯಾ, ಡೆಂಗಿ ರೋಗ ತರುವ ವೈರಾಣುಗಳನ್ನು ನಾಶ ಮಾಡುತ್ತೇವೆ. ಸನಾತನ ಧರ್ಮ ಕೂಡ ಕೊರೋನಾ ವೈರಸ್, ಮಲೇರಿಯಾದಂತೆ. ಆ ಧರ್ಮವು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಅದನ್ನು ನಾಶಪಡಿಸಬೇಕು ಎಂದು ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದರು.

ತಮ್ಮ ಹೇಳಿಕೆಯನ್ನು ಅವರು ಹಲವು ಬಾರಿ ಸಮರ್ಥಿಸಿಕೊಂಡಿರುವುದೂ ಹೌದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!