ರಾಜಕೀಯ ಹಾಗೂ ಧರ್ಮ ಬೇರ್ಪಟ್ಟಾಗ ದ್ವೇಷಪೂರಿತ ಭಾಷಣಗಳು ನಿಲ್ಲುತ್ತವೆ: ಸುಪ್ರೀಂಕೋರ್ಟ್​

ದ್ವೇಷಪೂರಿತ ಭಾಷಣವನ್ನು ನಿಲ್ಲಿಸಬೇಕೆಂದರೆ ಧರ್ಮವನ್ನು ರಾಜಕೀಯದಿಂದ ಬೇರ್ಪಡಿಸಬೇಕು ಎಂದು ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ. ರಾಜಕೀಯವನ್ನು ಧರ್ಮದಿಂದ ಬೇರ್ಪಡಿಸುವವರೆಗೆ ನಾವು ದ್ವೇಷದ ಭಾಷಣವನ್ನು ತೊಡೆದುಹಾಕಲು ಸಾಧ್ಯವಿಲ್ಲ.

ರಾಜಕೀಯ ಹಾಗೂ ಧರ್ಮ ಬೇರ್ಪಟ್ಟಾಗ ದ್ವೇಷಪೂರಿತ ಭಾಷಣಗಳು ನಿಲ್ಲುತ್ತವೆ: ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​

Updated on: Mar 30, 2023 | 8:42 AM

ದ್ವೇಷಪೂರಿತ ಭಾಷಣವನ್ನು ನಿಲ್ಲಿಸಬೇಕೆಂದರೆ ಧರ್ಮವನ್ನು ರಾಜಕೀಯದಿಂದ ಬೇರ್ಪಡಿಸಬೇಕು ಎಂದು ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ. ರಾಜಕೀಯವನ್ನು ಧರ್ಮದಿಂದ ಬೇರ್ಪಡಿಸುವವರೆಗೆ ನಾವು ದ್ವೇಷದ ಭಾಷಣವನ್ನು ತೊಡೆದುಹಾಕಲು ಸಾಧ್ಯವಿಲ್ಲ. ರಾಜಕಾರಣಿಗಳು ಧರ್ಮವನ್ನು ಬಳಸುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನಮ್ಮ ದೇಶದಲ್ಲಿ ಧರ್ಮ ಮತ್ತು ರಾಜಕೀಯ ಒಂದಕ್ಕೊಂದು ಹೆಣೆದುಕೊಂಡಿದೆ. ದ್ವೇಷದ ಭಾಷಣಗಳಿಗೆ ಇವೇ ಕಾರಣ. ಒಂದೊಂದು ಧರ್ಮದವರ ಮನವೊಲಿಸಲು ಮತ್ತೊಂದು ಧರ್ಮವನ್ನು ತೆಗಳುವ ಕೆಲಸವಾಗುತ್ತಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಕೆಎಂ ಜೋಸೆಫ್ ಮತ್ತು ನ್ಯಾಯಮೂರ್ತಿ ಬಿವಿ ನಾಗರತ್ನ ಅವರ ಪೀಠವು ದ್ವೇಷದ ಭಾಷಣವನ್ನು ವಿಷವರ್ತುಲವೆಂದು ಬಣ್ಣಿಸಿದೆ. ಸಹೋದರತ್ವದ ಕಲ್ಪನೆಯು ಹೋಗಿ ಎಲ್ಲರ ಮನಸ್ಸಿನಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ.

ಪಂಡಿತ್ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರಂತಹ ಭಾಷಣಕಾರರನ್ನು ದೇಶವು ಹೊಂದಿದ್ದ ಕಾಲವೊಂದಿತ್ತು. ಅವರ ಭಾಷಣ ಕೇಳಲು ದೂರದ ಊರುಗಳಿಂದ ಮಧ್ಯರಾತ್ರಿ ಜನ ಬರುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ವ್ಯಕ್ತಿಗಳ ಮನಸ್ಥಿತಿ ಬದಲಾಗುತ್ತಿದೆ.

ಮತ್ತಷ್ಟು ಓದಿ: ದ್ವೇಷಪೂರಿತ ಭಾಷಣ ಪ್ರಕರಣ: SP ನಾಯಕ ಅಜಂ ಖಾನ್​ಗೆ ಜಾಮೀನು

ಪ್ರತಿಯೊಬ್ಬ ಪ್ರಜೆಯೂ ಸಂಯಮದಿಂದ ವರ್ತಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ದೇಶದ ಜನತೆಯು ಬೇರೆಯವರನ್ನು ಅವಮಾನಿಸುವುದಿಲ್ಲ ಎಂದು ಪ್ರಮಾಣ ಮಾಡಬೇಕು. ರಾಜಕೀಯ ಮತ್ತು ಧರ್ಮ ಎರಡೂ ಪ್ರತ್ಯೇಕವಾದಾಗ ಮಾತ್ರ ಇದು ಕೊನೆಗೊಳ್ಳುತ್ತದೆ ಎಂದು ನ್ಯಾಯಾಲಯ ಹೇಳಿದೆ. ಅಂದರೆ ರಾಜಕೀಯದಲ್ಲಿ ಧರ್ಮದ ಬಳಕೆ ನಿಲ್ಲುತ್ತದೆ.

ರಾಜಕೀಯವನ್ನು ಧರ್ಮದೊಂದಿಗೆ ಬೆರೆಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ನ್ಯಾಯಾಲಯವು ಇತ್ತೀಚಿನ ತೀರ್ಪಿನಲ್ಲಿ ಹೇಳಿರುವುದನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೋಸೆಫ್ ನೆನಪಿಸಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us