AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ಹೋರಾಟಗಾರರನ್ನು ನೀವು ಕಾಣುವ ರೀತಿ ಇದೇನಾ? ಸುಪ್ರೀಂ ಪ್ರಶ್ನೆ, ರಾಹುಲ್ ಗಾಂಧಿಗೆ ಮುಖಭಂಗ

ವಿ.ಡಿ. ಸಾವರ್ಕರ್ ವಿರುದ್ಧದ ಹೇಳಿಕೆ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ನೀಡಲಾದ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಆದರೆ ಸ್ವಾತಂತ್ರ್ಯ ಹೋರಾಟಗಾರರನ್ನು ನೀವು ನೋಡುವ ರೀತಿ ಇದೇನಾ? ಎಂದು ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಸುಪ್ರೀಂಕೋರ್ಟ್​ ತರಾಟೆಗೆ ತೆಗೆದುಕೊಂಡಿತು. ಇನ್ನೊಮ್ಮೆ ಈ ರೀತಿ ಹೇಳಿಕೆ ನೀಡಿದರೆ ಸ್ವಯಂ ಪ್ರೇರಿತ ದೂರು ದಾಖಲಿಸಿವುದಾಗಿ ಎಚ್ಚರಿಕೆ ನೀಡಿದೆ.

ಸ್ವಾತಂತ್ರ್ಯ ಹೋರಾಟಗಾರರನ್ನು ನೀವು ಕಾಣುವ ರೀತಿ ಇದೇನಾ? ಸುಪ್ರೀಂ ಪ್ರಶ್ನೆ, ರಾಹುಲ್ ಗಾಂಧಿಗೆ ಮುಖಭಂಗ
ರಾಹುಲ್ ಗಾಂಧಿ Image Credit source: Mathrubhumi English
ನಯನಾ ರಾಜೀವ್
|

Updated on:Apr 25, 2025 | 12:55 PM

Share

ನವದೆಹಲಿ, ಏಪ್ರಿಲ್ 25: ‘ಸ್ವಾತಂತ್ರ್ಯ ಹೋರಾಟಗಾರರನ್ನು ನೀವು ನೋಡುವ ರೀತಿ ಇದೇನಾ?’ ಎಂದು ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi)ಯನ್ನು ಸುಪ್ರೀಂಕೋರ್ಟ್​ ತರಾಟೆಗೆ ತೆಗೆದುಕೊಂಡಿತು.  ವಿಡಿ ಸಾವರ್ಕರ್ ನಮಗೆ ಸ್ವಾತಂತ್ರ್ಯ ತಂದುಕೊಟ್ಟದ್ದಾರೆ ಆದರೆ ನೀವೇನು ಮಾಡ್ತಿದ್ದೀರಾ ಎಂದು ಪೀಠ ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿಗೆ ಮುಖಭಂಗವಾಗಿದೆ.

ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಹೇಳಿಕೆಗಳನ್ನು ನಾವು ಅನುಮತಿಸುವುದಿಲ್ಲ, ಈ ಬಾರಿ ಸಾವರ್ಕರ್, ಮುಂದಿನ ಬಾರಿ ಯಾರಾದರೂ ಮಹಾತ್ಮಾ ಗಾಂಧಿ ಬ್ರಿಟಿಷರ ಸೇವಕರಾಗಿದ್ದರು ಎಂದು ಹೇಳುತ್ತಾರೆ ಅದೆಲ್ಲಾ ಕೇಳಬೇಕೇ?, ಮುಂದಿನ ಬಾರಿ ಅಂತಹ ಹೇಳಿಕೆಗಳನ್ನು ನೀಡಿದರೆ ನಾವು ಅದನ್ನು ತೀರಾ ಗಂಭೀರವಾಗಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ಪೀಠ ಎಚ್ಚರಿಸಿದೆ.

ಸಾವರ್ಕರ್ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಲಕ್ನೋ ನ್ಯಾಯಾಲಯದಲ್ಲಿ ಬಾಕಿ ಇರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ನ್ಯಾಯಾಲಯ ತಡೆ ನೀಡಿದ್ದರೂ, ಭವಿಷ್ಯದಲ್ಲಿ ಅವರು ಅಂತಹ ಯಾವುದೇ ಹೇಳಿಕೆಗಳನ್ನು ನೀಡಿದರೆ ಅವರ ವಿರುದ್ಧ ಸ್ವಯಂ ಪ್ರೇರಿತವಾಗಿ ಮೊಕದ್ದಮೆ ಹೂಡಲಾಗುವುದು ಎಂದು ಮೌಖಿಕವಾಗಿ ಎಚ್ಚರಿಸಿದೆ.

ಇದನ್ನೂ ಓದಿ
Image
ರಾಹುಲ್ ವಿದೇಶಕ್ಕೆ ಹೋದಾಗಲೆಲ್ಲಾ ದಾಳಿ: ಬಿಜೆಪಿ ಐಟಿ ಸೆಲ್​​ ವಿರುದ್ಧ ಕೇಸ್
Image
ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ರಾಹುಲ್ ಗಾಂಧಿ ಪತ್ರ
Image
ನ್ಯಾಷನಲ್ ಹೆರಾಲ್ಡ್ ಪ್ರಕರಣ; ಸೋನಿಯಾ, ರಾಹುಲ್ ಬೆಂಬಲಕ್ಕೆ ನಿಂತ ಖರ್ಗೆ
Image
ಅಧಿಕಾರಕ್ಕೆ ಬಂದರೆ ಶೇ.50ರ ಮೀಸಲಾತಿ ಮಿತಿ ರದ್ದು; ರಾಹುಲ್ ಗಾಂಧಿ

ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ಮನಮೋಹನ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ಪ್ರಕರಣ ಕೈಗೆತ್ತಿಕೊಂಡ ತಕ್ಷಣ, ನ್ಯಾಯಮೂರ್ತಿ ದತ್ತ ಅವರು ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು.

ಮತ್ತಷ್ಟು ಓದಿ:ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ತನ್ನಿ; ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ರಾಹುಲ್ ಗಾಂಧಿ ಪತ್ರ

ವಕೀಲರಿಗೆ ಪ್ರಶ್ನೆ ಮಾಡಿದ ನ್ಯಾ. ದತ್ತ ವೈಸರಾಯ್​ಗೆ ಮಹಾತ್ಮಾ ಗಾಂಧಿ ಬರೆದ ಪತ್ರದಲ್ಲೂ ‘Your Faithful Servant’ ಎಂಬ ಪದವನ್ನು ಬಳಸಿದ್ದಾರೆ ಎನ್ನುವ ಕಾರಣಕ್ಕೆ ಮಹಾತ್ಮ ಗಾಂಧಿಯನ್ನು ಬ್ರಿಟಿಷರ ಸೇವಕ ಎಂದು ಕರೆಯಬಹುದೇ ಎಂದು ಪ್ರಶ್ನಿಸಿದರು.

ಅವರು ಒಂದು ರಾಜಕೀಯ ಪಕ್ಷದ ರಾಜಕೀಯ ನಾಯಕರೇ? ನೀವು ಮಹಾರಾಷ್ಟ್ರಕ್ಕೆ ಹೋಗಿ ಹೇಳಿಕೆ ನೀಡಿ, ಅಲ್ಲಿ ಅವರನ್ನು ಪೂಜಿಸಲಾಗುತ್ತದೆ. ಹೀಗೆ ಮಾಡಬೇಡಿ ಎಂದು ನ್ಯಾಯಮೂರ್ತಿ ದತ್ತ ಹೇಳಿದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಾವರ್ಕರ್ ಬ್ರಿಟಿಷರ ಸೇವಕ ಮತ್ತು ಅವರು ಬ್ರಿಟಿಷರಿಂದ ಪಿಂಚಣಿ ಪಡೆದಿದ್ದರು ಎಂದು ರಾಹುಲ್ ಗಾಂಧಿ ಮಾಡಿದ ಭಾಷಣಕ್ಕಾಗಿ ಸಮನ್ಸ್​ ಜಾರಿ ಮಾಡಲಾಗಿತ್ತು.

ಸಮಾಜದಲ್ಲಿ ದ್ವೇಷವನ್ನು ಹರಡುವ ಉದ್ದೇಶದಿಂದ ರಾಹುಲ್ ಗಾಂಧಿ ಸಾವರ್ಕರ್ ಅವರನ್ನು ಬ್ರಿಟಿಷರ ಸೇವಕ ಎಂದು ಕರೆದಿದ್ದಾರೆ,  ಹಾಗೂ ಬ್ರಿಟಿಷರಿಂದ ಪಿಂಚಣಿ ಪಡೆದಿದ್ದಾರೆ ಎಂದು ಹೇಳಿರುವುದಾಗಿ ವಕೀಲ ನೃಪೇಂದ್ರ ಪಾಂಡೆ ದೂರು ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:38 pm, Fri, 25 April 25