AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿ ಮದರಸಾ ಕಾಯ್ದೆ ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಮದರಸಾ ಎಜುಕೇಶನ್ ಆಕ್ಟ್ 2004' ಅಸಂವಿಧಾನಿಕ ಎಂದು ಅಲಹಾಬಾದ್ ಹೈಕೋರ್ಟ್ ಮಾರ್ಚ್ 22 ರಂದು ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏಪ್ರಿಲ್ 5) ತಡೆಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ನೀಡಿದೆ. ಹೈಕೋರ್ಟ್ ಈ ಕಾಯ್ದೆಯ ನಿಬಂಧನೆಗಳನ್ನು ತಪ್ಪಾಗಿ ಅರ್ಥಮಾಡಿಕೊಂಡಿದೆ ಎಂದು ಹೇಳಲಾಗಿದೆ.

ಯುಪಿ ಮದರಸಾ ಕಾಯ್ದೆ ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಸುಪ್ರೀಂ ಕೋರ್ಟ್
ಅಕ್ಷಯ್​ ಪಲ್ಲಮಜಲು​​
|

Updated on: Apr 05, 2024 | 2:19 PM

Share

ಉತ್ತರ ಪ್ರದೇಶ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್ 2004′ ಅಸಂವಿಧಾನಿಕ ಎಂದು ಅಲಹಾಬಾದ್ ಹೈಕೋರ್ಟ್ ಮಾರ್ಚ್ 22 ರಂದು ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏಪ್ರಿಲ್ 5) ತಡೆಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ನೀಡಿದೆ. ಹೈಕೋರ್ಟ್ ಈ ಕಾಯ್ದೆಯ ನಿಬಂಧನೆಗಳನ್ನು ತಪ್ಪಾಗಿ ಅರ್ಥಮಾಡಿಕೊಂಡಿದೆ ಎಂದು ಹೇಳಲಾಗಿದೆ.

ಹೈಕೋರ್ಟಿನ ಈ ತೀರ್ಪಿನಿಂದ ಸುಮಾರು 17 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತವೆ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ ನೀಡಿದೆ. ಈ ಕಾಯಿದೆಯು ಯಾವುದೇ ಧಾರ್ಮಿಕ ಸೂಚನೆಗಳನ್ನು ಒದಗಿಸುವುದಿಲ್ಲ. ಮದರಸಾದ ಮಂಡಳಿಯ ಸ್ಥಾಪನೆಯು ಜಾತ್ಯತೀತತೆಯನ್ನು ಉಲ್ಲಂಘಿಸುತ್ತದೆ ಎಂಬ ಹೈಕೋರ್ಟ್‌ನ ಹೇಳಿಕೆ ಬಗ್ಗೆ ಅಲ್ಲಿನ ಅಧಿಕಾರಿಗಳೊಂದಿಗೆ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಮದರಸದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಮದರಸ ಹೊಡೆದು ಹಾಕುವುದು ಸರಿಯಲ್ಲ, ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ರಾಜ್ಯವು ಕಾನೂನುಬದ್ಧ ಸಾರ್ವಜನಿಕ ಹಿತಾಸಕ್ತಿ ತರಬೇಕು. 2004 ರಲ್ಲಿ ಜಾರಿಗೊಳಿಸಲಾದ ಸಂಪೂರ್ಣ ಕಾನೂನನ್ನು ತಿರಸ್ಕರಿಸುವ ಅಗತ್ಯವಿದೆಯೇ ಎಂದು ಸುಪ್ರೀಂ ಹೇಳಿದೆ.

ಈ ಕುರಿತು ಅಂಜುಮ್ ಕಡಾರಿ, ಮ್ಯಾನೇಜರ್ಸ್ ಅಸೋಸಿಯೇಷನ್ ​​ಮದರಿಸ್ ಅರೇಬಿಯಾ (ಯುಪಿ), ಅಖಿಲ ಭಾರತ ಶಿಕ್ಷಕರ ಸಂಘ ಮದರಿಸ್ ಅರೇಬಿಯಾ (ಹೊಸದಿಲ್ಲಿ), ಮ್ಯಾನೇಜರ್ ಅಸೋಸಿಯೇಶನ್ ಅರ್ಬಿ ಮದರ್ಸಾ ನಾಯ್ ಬಜಾರ್ ಮತ್ತು ಶಿಕ್ಷಕರ ಸಂಘ ಮದರಿಸ್ ಅರೇಬಿಯಾ ಕಾನ್ಪುರ್ ಅರ್ಜಿಯನ್ನು ಸಲ್ಲಿಸಿದೆ. ಉತ್ತರ ಪ್ರದೇಶ ರಾಜ್ಯದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ , ರಾಜ್ಯ ಸರ್ಕಾರ ಹೈಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳುತ್ತಿದೆ. ಹೈಕೋರ್ಟ್‌ನಲ್ಲಿ ರಾಜ್ಯವು ತನ್ನ ಕಾನೂನನ್ನು ಸಮರ್ಥಿಸಿಕೊಂಡರೂ ಏಕೆ ಅದನ್ನು ಸಮರ್ಥಿಸುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನ್ಯಾಯಪತ್ರ: 2024ರ ಲೋಕಸಭಾ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್​

ಮ್ಯಾನೇಜರ್ಸ್ ಅಸೋಸಿಯೇಷನ್ ​​ಮದರಿಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘಿ , ಮದರ್ಸಾ ಆಡಳಿತವು 120 ವರ್ಷಗಳಿಂದ ಇದ್ದ ಯಥಾಸ್ಥಿತಿಯಾಗಿದ್ದು, ಈಗ ಹಠಾತ್ತನೆ ಅಸ್ತವ್ಯಸ್ತವಾಗಿದೆ, 17 ಲಕ್ಷ ವಿದ್ಯಾರ್ಥಿಗಳು ಮತ್ತು 10,000 ಶಿಕ್ಷಕರ ಮೇಲೆ ಪರಿಣಾಮ ಬೀರಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ