AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sedition Law: ದೇಶದ್ರೋಹ ಕಾಯ್ದೆಗೆ ಸುಪ್ರೀಂಕೋರ್ಟ್​ ತಡೆ; ಜೈಲಿನಲ್ಲಿರುವವರಿಗೆ ಜಾಮೀನು ಕೋರಲು ಅವಕಾಶ

ಕೇಂದ್ರ ಸರ್ಕಾರವು ತನ್ನ ನಿಲುವು ಸ್ಪಷ್ಟಪಡಿಸುವವರೆಗೆ ದೇಶದ್ರೋಹ ಆರೋಪ ಹೊರಿಸುವ ಈ ಕಾಯ್ದೆ ಅನೂರ್ಜಿತಗೊಂಡಿರುತ್ತದೆ.

Sedition Law: ದೇಶದ್ರೋಹ ಕಾಯ್ದೆಗೆ ಸುಪ್ರೀಂಕೋರ್ಟ್​ ತಡೆ; ಜೈಲಿನಲ್ಲಿರುವವರಿಗೆ ಜಾಮೀನು ಕೋರಲು ಅವಕಾಶ
ಸುಪ್ರೀಂಕೋರ್ಟ್
TV9 Web
| Edited By: |

Updated on:May 11, 2022 | 12:48 PM

Share

ದೆಹಲಿ: ಬ್ರಿಟಿಷರು ಭಾರತವನ್ನು ತಮ್ಮ ಅಧೀನದಲ್ಲಿ ಇರಿಸಿಕೊಳ್ಳುವ ಉದ್ದೇಶದಿಂದ ರೂಪಿಸಿದ್ದ ದೇಶದ್ರೋಹ ಕಾಯ್ದೆಯನ್ನು ಉಳಿಸಿಕೊಳ್ಳುವುದೋ? ಬೇಡವೋ ಎನ್ನುವ ಬಗ್ಗೆ ಸುಪ್ರೀಂಕೋರ್ಟ್​ ಬುಧವಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೇಂದ್ರ ಸರ್ಕಾರವು ತನ್ನ ನಿಲುವು ಸ್ಪಷ್ಟಪಡಿಸುವವರೆಗೆ ಈ ಕಾಯ್ದೆ ಅನೂರ್ಜಿತಗೊಂಡಿರುತ್ತದೆ. ದೇಶದ್ರೋಹ ಕಾಯ್ದೆಯ ಅಡಿ ದಾಖಲಾಗಿರುವ ಎಲ್ಲ ಪ್ರಕರಣಗಳ ವಿಚಾರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕು ಎಂದು ಸೂಚಿಸಿದೆ. ದೇಶದ್ರೋಹ ಆರೋಪ ಎದುರಿಸುತ್ತಿರುವವರು ಜಾಮೀನಿಗಾಗಿ ನ್ಯಾಯಾಲಯಗಳಿಗೆ ಮನವಿ ಮಾಡಬಹುದಾಗಿದೆ.

ಕೇಂದ್ರ ಸರ್ಕಾರವು ತನ್ನ ನಿಲುವು ಸ್ಪಷ್ಟಪಡಿಸಿ, ಸುಪ್ರೀಂಕೋರ್ಟ್ ಮುಂದಿನ ನಿರ್ದೇಶನ ನೀಡುವವರೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾರ ವಿರುದ್ಧವೂ ಭಾರತೀಯ ದಂಡ ಸಂಹಿತೆ (Indian Penal Code – IPC) 124ಎ ವಿಧಿಯ ಅನ್ವಯ (ದೇಶದ್ರೋಹ ಕಾಯ್ದೆ) ಅನ್ವಯ ಪ್ರಕರಣಗಳನ್ನು ದಾಖಲಿಸಬಾರದು ಎಂದು ಸೂಚಿಸಿದೆ.

‘ಈ ವಿಧಿಯ ಅನ್ವಯ ಪ್ರಕರಣಗಳನ್ನು ದಾಖಲಿಸಬೇಕೆ? ಎರಡೂ ಪಕ್ಷಗಳ ಕಕ್ಷಿದಾರರು ನ್ಯಾಯಾಲಯವನ್ನು ಪ್ರವೇಶಿಸಲು ಅವಕಾಶವಿದೆ. ಇಂಥ ಪ್ರಕರಣಗಳನ್ನು ನ್ಯಾಯಾಲಯಗಳು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲಿವೆ. ಈಗಾಗಲೇ ಈ ಕಾಯ್ದೆಯ ಅನ್ವಯ ಯಾವುದೇ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದರೆ, ಅಂಥವರು ಜಾಮೀನಿಗಾಗಿ ನ್ಯಾಯಾಲಯಗಳನ್ನು ಕೋರಬಹುದು’ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಐಪಿಸಿ 124ಎ ವಿಧಿಯನ್ನು ಸದ್ಯದ ಮಟ್ಟಿಗೆ ಅನೂರ್ಜಿತಗೊಳಿಸುವುದು ಸರಿ ಎನಿಸುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳು ಯಾವೊಬ್ಬ ವ್ಯಕ್ತಿಯ ವಿರುದ್ಧವೂ ಈ ವಿಧಿಯ ಅನ್ವಯ ಪ್ರಕರಣಗಳನ್ನು ದಾಖಲಿಸಬಾರದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಸೂಚಿಸಿದರು.

ಐಪಿಸಿ 124ಎ ವಿಧಿಯ ಅನ್ವಯ ಕಾನೂನು ಬದ್ಧವಾಗಿ ಸ್ಥಾಪನೆಯಾದ ಸರ್ಕಾರದ ವಿರುದ್ಧ ಬರಹ, ಮಾತು, ಸಂಜ್ಞೆಗಳ ಮೂಲಕ ಅಸಮಾಧಾನ ತೋರಿಸುವುದು ದೇಶದ್ರೋಹವಾಗುತ್ತದೆ. ಇಂಥ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಲು ಅವಕಾಶವಿದೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಲಿಂಕ್: Supreme Court Sedition Law Hearing Highlights

ಇದನ್ನೂ ಓದಿ: Sedition law ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ ದೇಶದ್ರೋಹ ಕಾನೂನು ತಡೆಹಿಡಿಯಿರಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಾಕೀತು

ಇದನ್ನೂ ಓದಿ: ಯಾವುದು ದೇಶದ್ರೋಹ: ಐಪಿಸಿ 124ಎ ವಿಧಿ ಮರುಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್​ಗೆ ತಿಳಿಸಿದ ಕೇಂದ್ರ ಸರ್ಕಾರ

Published On - 12:24 pm, Wed, 11 May 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ