AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಹಿಂಸಾಚಾರ ಪೀಡಿತ ಜಹಾಂಗೀರ್‌ಪುರಿಯಲ್ಲಿ ಧ್ವಂಸ ಕಾರ್ಯಾಚರಣೆ ನಿಲ್ಲಿಸಲು ಸುಪ್ರೀಂಕೋರ್ಟ್ ಆದೇಶ

ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಧ್ವಂಸ ಕಾರ್ಯಾಚರಣೆಯನ್ನು ನಿಲ್ಲಿಸಿ ಸುಪ್ರೀಂಕೋರ್ಟ್ ಬುಧವಾರ ಯಥಾಸ್ಥಿತಿಗೆ ಆದೇಶಿಸಿದೆ.

ದೆಹಲಿಯ ಹಿಂಸಾಚಾರ ಪೀಡಿತ ಜಹಾಂಗೀರ್‌ಪುರಿಯಲ್ಲಿ ಧ್ವಂಸ ಕಾರ್ಯಾಚರಣೆ ನಿಲ್ಲಿಸಲು ಸುಪ್ರೀಂಕೋರ್ಟ್ ಆದೇಶ
ಸುಪ್ರೀಂಕೋರ್ಟ್
TV9 Web
| Edited By: |

Updated on:Apr 20, 2022 | 2:59 PM

Share

ದೆಹಲಿ: ಹನುಮ ಜಯಂತಿಯಂದು ನಡೆದ ಹಿಂಸಾಚಾರದಿಂದ ತತ್ತರಿಸಿರುವ ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿಯಲ್ಲಿ (Jahangirpuri) ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಧ್ವಂಸ ಕಾರ್ಯಾಚರಣೆಯನ್ನು ನಿಲ್ಲಿಸಿ ಸುಪ್ರೀಂಕೋರ್ಟ್ (Supreme Court) ಬುಧವಾರ ಯಥಾಸ್ಥಿತಿಗೆ (status quo)ಆದೇಶಿಸಿದೆ. ಹಿರಿಯ ವಕೀಲರಾದ ದುಷ್ಯಂತ್ ದವೆ, ಕಪಿಲ್ ಸಿಬಲ್, ಪಿವಿ ಸುರೇಂದ್ರನಾಥ್ ಮತ್ತು ಪ್ರಶಾಂತ್ ಭೂಷಣ್ ಅವರು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರ ಮುಂದೆ ಈ ವಿಷಯ ಪ್ರಸ್ತಾಪಿಸಿದರು. ಗಲಭೆ ಪೀಡಿತ ಜಹಾಂಗೀರ್‌ಪುರಿಯಲ್ಲಿ ಧ್ವಂಸಗೊಳಿಸುವ ಕಾರ್ಯಾಚರಣೆ ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ ಮತ್ತು ಯಾರಿಗೂ ನೋಟಿಸ್ ನೀಡಿಲ್ಲ ಎಂದು ದುಶ್ಯಂತ್ ದವೆ ಉಲ್ಲೇಖಿಸಿದ್ದರಿಂದ, ಸಿಜೆಐ ಯಥಾಸ್ಥಿತಿಗೆ ಆದೇಶಿಸಿದ್ದಾರೆ. “ಇತರ ವಿಷಯದ ಜೊತೆಗೆ ವಿಷಯವನ್ನು ನಾಳೆ ತೆಗೆದುಕೊಳ್ಳಲಿ” ಎಂದು ಸಿಜೆಐ ಹೇಳಿದರು.ಮಧ್ಯಪ್ರದೇಶದ ಖರಗೋನ್​​ನಲ್ಲಿ ನಡೆದ ಗಲಭೆ-ಆರೋಪಿಗಳ ಆಸ್ತಿಗಳನ್ನು ಧ್ವಂಸಗೊಳಿಸಲು ಬುಲ್ಡೋಜರ್‌ಗಳನ್ನು ಬಳಸುವುದರ ವಿರುದ್ಧ ಜಮೀಯತ್ ಉಲಾಮಾ-ಇ-ಹಿಂದ್ ಸಲ್ಲಿಸಿದ ಮನವಿಯಲ್ಲಿಯೂ ಜಹಾಂಗೀರ್‌ಪುರಿ ಧ್ವಂಸ ಅಭಿಯಾನದ ವಿಷಯವನ್ನು ಉಲ್ಲೇಖಿಸಲಾಗಿದೆ. ಜಹಾಂಗೀರ್‌ಪುರಿ ಧ್ವಂಸವು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗಬೇಕಿತ್ತು ಆದರೆ ಈ ವಿಷಯವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪಿಸಬೇಕಾಗಿರುವುದರಿಂದ, ಕಾರ್ಯಾಟರಣೆ 9 ಗಂಟೆಗೆ ಪ್ರಾರಂಭವಾಯಿತು ಎಂದು ದವೆ ಹೇಳಿದರು.

ಜಹಾಂಗೀರ್‌ಪುರಿ ಧ್ವಂಸ ಪ್ರಕರಣವನ್ನು ದೆಹಲಿ ಹೈಕೋರ್ಟ್‌ನಲ್ಲಿ ಉಲ್ಲೇಖಿಸಲಾಗಿದೆ. ನಿವಾಸಿಗಳಿಗೆ ಪೂರ್ವ ಸೂಚನೆ ನೀಡಲಾಗಿಲ್ಲ. ಅವರಲ್ಲಿ ಹಲವರಿಗೆ ಮನೆಯಲ್ಲಿಯೂ ಇಲ್ಲ ಎಂದು ವಕೀಲರು ಹೇಳಿದ್ದಾರೆ. ದೆಹಲಿ ಹೈಕೋರ್ಟ್‌ನಲ್ಲಿ ವಕೀಲರು ಧ್ವಂಸ ಕಾರ್ಯಾಚರಣೆಯನ್ನು ಮಧ್ಯಾಹ್ನ 2 ಗಂಟೆಯವರೆಗೆ ನಿಲ್ಲಿಸುವಂತೆ ಕೋರಿದ್ದಾರೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು ನ್ಯಾಯಮೂರ್ತಿ ನವೀನ್ ಚಾವ್ಲಾ ಅವರ ಪೀಠವು ಇಂದೇ ವಿಷಯದ ಪಟ್ಟಿಗೆ ಅನುಮತಿ ನೀಡಿದೆ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಅವರಿಗೆ ಸೂಚನೆಗಳೊಂದಿಗೆ ಸಿದ್ಧರಾಗುವಂತೆ ಕೇಳಿದೆ. ಇದು ಸಾರ್ವಜನಿಕ ಭೂಮಿಯನ್ನು ಅತಿಕ್ರಮಣವಾಗಿದ್ದರೆ ಇದು ಕಾನೂನುಬಾಹಿರವೇ ಎಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಕೇಳಿತು. ಸಂಬಂಧಿಸಿದ ಪ್ರದೇಶವು ಅಧಿಸೂಚಿತ ‘ಜುಗ್ಗಿ ಕ್ಲಸ್ಟರ್’ ಆಗಿದೆಯೇ ಎಂದು ದೆಹಲಿ ಹೈಕೋರ್ಟ್ ಪೀಠವು ಕೇಳಿದೆ.

ಬಿಜೆಪಿ ಆಡಳಿತವಿರುವ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಬುಧವಾರ ಮತ್ತು ಗುರುವಾರ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಧ್ವಂಸ ಕಾರ್ಯಾಚರಣೆ ನಿಗದಿಪಡಿಸಿದೆ. ನಾಗರಿಕ ಮಂಡಳಿಯು ದೆಹಲಿ ಪೊಲೀಸರಿಂದ 400 ಪೊಲೀಸ್ ಸಿಬ್ಬಂದಿಯನ್ನು ಇದಕ್ಕಾಗಿ ಕೋರಿದೆ.

ಧ್ವಂಸ ಕಾರ್ಯಾಚರಣೆಗೆ ಸಿದ್ಧತೆಯಾಗಿ ಬುಧವಾರ ಬೆಳಗ್ಗೆ ಜಹಾಂಗೀರ್​​ಪುರಿಯಲ್ಲಿ ಭಾರೀ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿತ್ತು. ಉಪ ಪೊಲೀಸ್ ಆಯುಕ್ತ (ಡಿಸಿಪಿ), ವಾಯುವ್ಯ, ಉಷಾ ರಂಗಣ್ಣಿ ಮತ್ತು ಇತರ ಪೊಲೀಸ್ ಸಿಬ್ಬಂದಿ ಬೆಳಿಗ್ಗೆ ಪ್ರದೇಶವನ್ನು ಪರಿಶೀಲಿಸಿದರು.

ಎನ್‌ಡಿಎಂಸಿ ಮೇಯರ್ ರಾಜಾ ಇಕ್ಬಾಲ್ ಸಿಂಗ್, ಸುಪ್ರಿಂಕೋರ್ಟ್ ಆದೇಶವನ್ನು ಅನುಸರಿಸಲಾಗುವುದು ಮತ್ತು ಕೆಡವುವ ಕಾರ್ಯ ಆರಂಭವಾದ ಕೂಡಲೇ ಆದೇಶ ಬಂದಿರುವುದರಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಎನ್‌ಡಿಎಂಸಿ ಕಮಿಷನರ್ ಸಂಜಯ್ ಗೋಯೆಲ್ ಮಾತನಾಡಿ, ನಾಗರಿಕ ಸಂಸ್ಥೆಯು ಮೊದಲು ಆದೇಶವನ್ನು ಜಾರಿಗೊಳಿಸುತ್ತದೆ ನಂತರ ಅದರಂತೆ ಕಾರ್ಯನಿರ್ವಹಿಸುತ್ತದೆ ಎಂದಿದ್ದಾರೆ. ಸುಪ್ರೀಂಕೋರ್ಟ್‌ನ ಆದೇಶದ ಸುಮಾರು ಒಂದು ಗಂಟೆಯ ನಂತರ, ದುಶ್ಯಂತ್ ದವೆ ಮತ್ತೆ ವಿಷಯವನ್ನು ಪ್ರಸ್ತಾಪಿಸಿ ಕೆಡವುವ ಕಾರ್ಯಾಚರಣೆಯನ್ನು ನಿಲ್ಲಿಸಿಲ್ಲ ಎಂದು ದೂರಿದರು. ನಂತರ ಎನ್‌ಡಿಎಂಸಿ ಮೇಯರ್, ಕಮಿಷನರ್ ಮತ್ತು ದೆಹಲಿ ಪೊಲೀಸ್ ಆಯುಕ್ತರಿಗೆ ತಡೆಯಾಜ್ಞೆಯನ್ನು ತಿಳಿಸುವಂತೆ ಸಿಜೆಐ ಸುಪ್ರೀಂಕೋರ್ಟ್  ರಿಜಿಸ್ಟ್ರಿಯನ್ನು ಕೇಳಿದರು.

ಇದನ್ನೂ ಓದಿ: Jahangirpuri violence ಜಹಾಂಗೀರ್‌ಪುರಿ ಹಿಂಸಾಚಾರ ಪ್ರಕರಣದ ತನಿಖೆ ಕ್ರೈಂ ಬ್ರಾಂಚ್‌ಗೆ ಹಸ್ತಾಂತರ

Published On - 2:38 pm, Wed, 20 April 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ