AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿರ್ವಹಣೆ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್

ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ಬಹುಮುಖ್ಯವಾಗಿ ಆಕ್ಸಿಜನ್​ ಪೂರೈಕೆ, ಅಗತ್ಯ ಔಷಧೀಯ ಉತ್ಪನ್ನಗಳ ಪೂರೈಕೆ, ಕೊರೊನಾ ಲಸಿಕೆ ವಿತರಣೆ ಹಾಗೂ ಲಾಕ್​ಡೌನ್ ಮಾಡುವ ಅಧಿಕಾರದ ಬಗ್ಗೆ ವಿಚಾರಣೆ ನಡೆಯಲಿದ್ದು, ಅಮಿಕಸ್ ಕ್ಯೂರಿ ಹಾಗೂ ಕೇಂದ್ರ ಸರ್ಕಾರದ ಅಭಿಪ್ರಾಯವನ್ನು ಆಲಿಸಲಾಗುವುದು ಎಂದು ಸುಪ್ರೀಂ ತಿಳಿಸಿದೆ.

ಕೊರೊನಾ ನಿರ್ವಹಣೆ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್​
Skanda
| Edited By: |

Updated on: Apr 22, 2021 | 3:38 PM

Share

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ಅತ್ಯಂತ ಅಪಾಯಕಾರಿ ವರ್ತನೆ ತೋರುತ್ತಿದ್ದು, ಆರೋಗ್ಯ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ. ಒಂದೆಡೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಇನ್ನೊಂದೆಡೆ ವೈದ್ಯಕೀಯ ವ್ಯವಸ್ಥೆಗಳಲ್ಲಿ ಕೊರತೆ ಕಾಣಿಸಿಕೊಳ್ಳುತ್ತಿರುವುದರಿಂದ ಪರಿಸ್ಥಿತಿ ನಿಯಂತ್ರಣ ಕ್ಲಿಷ್ಟಕರವಾಗಿದೆ. ಈ ಸಂದರ್ಭದಲ್ಲಿ ಸರ್ವೋಚ್ಛ ನ್ಯಾಯಾಲಯ ಕೊರೊನಾಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದು, ಮುಖ್ಯ ನ್ಯಾಯಮೂರ್ತಿ ಎಸ್.​ಎ .ಬೋಬ್ಡೆ ನೇತೃತ್ವದ ಪೀಠ ಹರೀಶ್ ಸಾಳ್ವೆ ಅವರನ್ನು ಸಲಹೆಗಾರರನ್ನಾಗಿ ನೇಮಿಸಿಕೊಂಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸರ್ವೋಚ್ಛ ನ್ಯಾಯಾಲಯ, ಕೊರೊನಾಕ್ಕೆ ಸಂಬಂಧಿಸಿದಂತೆ ದೆಹಲಿ, ಬಾಂಬೆ, ಸಿಕ್ಕಿಂ, ಮಧ್ಯಪ್ರದೇಶ, ಕೋಲ್ಕತ್ತಾ ಮತ್ತು ಅಲಹಾಬಾದ್ ಈ ಆರು ನ್ಯಾಯಾಲಯಗಳೂ ಉತ್ತಮವಾಗಿಯೇ ಕಾರ್ಯ ನಿರ್ವಹಿಸಿವೆ. ಆದರೆ, ಕೊರೊನಾ ನಿರ್ವಹಣೆ ಕುರಿತಾದ ವಿಚಾರಣೆಯಲ್ಲಿ ಸ್ವಲ್ಪ ಗೊಂದಲ ಸೃಷ್ಟಿಯಾಗಿದೆ ಎಂದು ತಿಳಿಸಿದೆ.

ಹೀಗಾಗಿ ಕೊರೊನಾ ನಿರ್ವಹಣೆ ವಿಚಾರದ ಬಗ್ಗೆ ನಾಳೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಅಮಿಕಸ್ ಕ್ಯೂರಿಯಾಗಿ ನೇಮಕಗೊಂಡಿರುವ ಹರೀಶ್ ಸಾಳ್ವೆ ಹಾಜರಿರಲಿದ್ದಾರೆ. ಜತೆಗೆ, ರಾಜ್ಯಗಳಲ್ಲಿ ಲಾಕ್‌ಡೌನ್ ಘೋಷಣೆ ಮಾಡುವ ವಿಚಾರದ ಬಗ್ಗೆ ಹಾಗೂ ಹೈಕೋರ್ಟ್‌ಗಳ ನ್ಯಾಯಾಂಗ ಅಧಿಕಾರದ ಬಗ್ಗೆ ಪರಿಶೀಲನೆ ನಡೆಯಲಿದೆ.

ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ಬಹುಮುಖ್ಯವಾಗಿ ಆಕ್ಸಿಜನ್​ ಪೂರೈಕೆ, ಅಗತ್ಯ ಔಷಧೀಯ ಉತ್ಪನ್ನಗಳ ಪೂರೈಕೆ, ಕೊರೊನಾ ಲಸಿಕೆ ವಿತರಣೆ ಹಾಗೂ ಲಾಕ್​ಡೌನ್ ಮಾಡುವ ಅಧಿಕಾರದ ಬಗ್ಗೆ ವಿಚಾರಣೆ ನಡೆಯಲಿದ್ದು, ಅಮಿಕಸ್ ಕ್ಯೂರಿ ಹಾಗೂ ಕೇಂದ್ರ ಸರ್ಕಾರದ ಅಭಿಪ್ರಾಯವನ್ನು ಆಲಿಸಲಾಗುವುದು ಎಂದು ಸುಪ್ರೀಂ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೊಸ ದಾಖಲೆ ಬರೆದ ಭಾರತ! ಒಂದೇ ದಿನದಲ್ಲಿ 3.14 ಲಕ್ಷ ಹೊಸ ಪ್ರಕರಣ ದಾಖಲು 

ವೈದ್ಯಕೀಯ ಆಮ್ಲಜನಕ ಕೊರತೆ: ಬೇಡಿಕೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಎಂದು ರಾಜ್ಯಗಳಿಗೆ ಸಲಹೆ ನೀಡಿದ ಪಿಯೂಷ್ ಗೋಯಲ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ