AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಭದ್ರತೆ ಲೋಪ ತನಿಖೆಯ ನೇತೃತ್ವ ವಹಿಸಲಿರುವ ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಯಾರು? -ಇಂದು ಹೆಸರು ಪ್ರಕಟಿಸಲಿರುವ ಸಿಜೆಐ

ಪ್ರಧಾನಿ ಮೋದಿ ಭದ್ರತೆ ಲೋಪಕ್ಕೆ ಸಂಬಂಧಪಟ್ಟ ತನಿಖೆ ನಡೆಸಲು ನಾವು ಸಮಿತಿ ರಚನೆ ಮಾಡುತ್ತೇವೆ. ಈ ಸಮಿತಿ ನಮಗೆ ವರದಿ ನೀಡಲಿದೆ ಎಂದು, ಜನವರಿ 10ರಂದು ನಡೆಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್​ ಹೇಳಿತ್ತು.

ಪ್ರಧಾನಿ ಭದ್ರತೆ ಲೋಪ ತನಿಖೆಯ ನೇತೃತ್ವ ವಹಿಸಲಿರುವ ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಯಾರು? -ಇಂದು ಹೆಸರು ಪ್ರಕಟಿಸಲಿರುವ ಸಿಜೆಐ
ಸುಪ್ರೀಂಕೋರ್ಟ್​
TV9 Web
| Edited By: |

Updated on:Jan 12, 2022 | 9:58 AM

Share

ಪಂಜಾಬ್​​ನಲ್ಲಿ ಉಂಟಾದ ಪ್ರಧಾನಿ ಭದ್ರತೆ ಲೋಪಕ್ಕೆ (PM Security Breach) ಸಂಬಂಧಪಟ್ಟಂತ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್ (Supreme Court)​, ಘಟನೆ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ನೇತೃತ್ವದ  ನಾಲ್ವರು ಸದಸ್ಯರ ಸಮಿತಿ ರಚಿಸುವುದಾಗಿ ಹೇಳಿದೆ. ಆ ನ್ಯಾಯಮೂರ್ತಿಗಳು ಯಾರು ಎಂಬುದನ್ನು ಇಂದು ಸುಪ್ರೀಂಕೋರ್ಟ್ ಹೇಳಲಿದೆ.  ಜನವರಿ 10ರಂದು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್​ ಮತ್ತು ಹಿಮಾ ಕೊಹ್ಲಿ ನೇತೃತ್ವದ ಪೀಠ, ಪ್ರಧಾನಿ ಮೋದಿ ಭದ್ರತೆ ಲೋಪಕ್ಕೆ ಸಂಬಂಧಪಟ್ಟು ನಡೆಯುತ್ತಿರುವ ಎಲ್ಲ ತನಿಖೆಗಳನ್ನೂ ನಿಲ್ಲಿಸುವಂತೆ ಆದೇಶ ನೀಡಿತ್ತು. ಹಾಗೇ. ತಾವೇ ಸಮಿತಿ ರಚಿಸುವುದಾಗಿ ತಿಳಿಸಿತ್ತು. ಆದರೆ ನಿವೃತ್ತ ನ್ಯಾಯಮೂರ್ತಿಯ ಹೆಸರನ್ನು ಪ್ರಕಟಪಡಿಸಿರಲಿಲ್ಲ.  

ಪ್ರಧಾನಿ ಮೋದಿ ಭದ್ರತೆ ಲೋಪಕ್ಕೆ ಸಂಬಂಧಪಟ್ಟ ತನಿಖೆ ನಡೆಸಲು ನಾವು ಸಮಿತಿ ರಚನೆ ಮಾಡುತ್ತೇವೆ. ಈ ಸಮಿತಿ ನಮಗೆ ವರದಿ ನೀಡಲಿದೆ. ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಈ ತನಿಖಾ ಸಮಿತಿಯ ನೇತೃತ್ವ ವಹಿಸುತ್ತಾರೆ. ಚಂಡಿಗಢ್​​ನ ಡಿಜಿಪಿ (ಪೊಲೀಸ್ ಮಹಾನಿರ್ದೇಶಕರು), ರಾಷ್ಟ್ರೀಯ ತನಿಖಾದಳದ ಐಜಿ (IG Of NIA), ಪಂಜಾಬ್​-ಹರ್ಯಾಣ ಹೈಕೋರ್ಟ್​​ನ ರಿಜಿಸ್ಟ್ರಾರ್​ ಜನರಲ್​ ಮತ್ತು ಪಂಜಾಬ್​​ನ ಹೆಚ್ಚುವರಿ ಡಿಜಿಪಿ (ಭದ್ರತಾ ದಳ) ಈ ಸಮಿತಿಯಲ್ಲಿ ಇರುತ್ತಾರೆ ಎಂದು ಸಿಜೆಐ ಎನ್​.ವಿ.ರಮಣ ತಿಳಿಸಿದ್ದರು.

ಜನವರಿ 5ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಜಾಬ್​ನ ಫಿರೋಜ್​ಪುರಕ್ಕೆ ಭೇಟಿ ನೀಡುವವರು ಇದ್ದರು. ಆದರೆ ಅವರು ಪ್ರಯಾಣಿಸಬೇಕಾದ ರಸ್ತೆ ಮಾರ್ಗದಲ್ಲಿ ರೈತರು ಪ್ರತಿಭಟನೆ ನಡೆಸಿದ್ದರಿಂದ, ಭದ್ರತೆ ಲೋಪವಾಗಿ ವಾಪಸ್​ ಬಂದಿದ್ದರು. ಅದಕ್ಕೂ ಮೊದಲು ಹುಸ್ಸೇನಿವಾಲಾ ಫ್ಲೈಓವರ್ ಮೇಲೆ ಅವರು 15-20 ನಿಮಿಷ ಕಾಯುವಂತಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಾಯರ್ಸ್ ವೈಸ್​ ಎಂಬ ಎನ್​ಜಿಒ ಸುಪ್ರೀಂಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಅದರ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಲ್ಲೆ, ಸದ್ಯ ನಡೆಯುತ್ತಿರುವ ಎಲ್ಲ ತನಿಖೆಗಳನ್ನೂ ನಿಲ್ಲಿಸುವಂತೆ ಆದೇಶ ನೀಡಿದೆ. ಈ ಮಧ್ಯೆ ಪ್ರಧಾನಿ ಮೋದಿ ಭದ್ರತೆ ಲೋಪಕ್ಕೆ ಸಂಬಂಧಪಟ್ಟಂತೆ ಯಾವುದೇ ರೀತಿಯ ವಿಚಾರಣೆ ನಡೆಸದಂತೆ ಸುಪ್ರೀಂಕೋರ್ಟ್ ವಕೀಲರುಗಳಿಗೆ ಒಂದೇ ಸಮ ಬೆದರಿಕೆ ಕರೆಗಳು ಬರುತ್ತಿವೆ.

ಇದನ್ನೂ ಓದಿ: National Youth Day 2022: ಇಂದು ಪುದುಚೇರಿಯಲ್ಲಿ 25ನೇ ಯುವಜನ ಉತ್ಸವ ಉದ್ಘಾಟಿಸಲಿರುವ ಪ್ರಧಾನಿ ಮೋದಿ; ತಂತ್ರಜ್ಞಾನ ಕೇಂದ್ರ ಲೋಕಾರ್ಪಣೆ

Published On - 8:53 am, Wed, 12 January 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​