AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court: ಇಂದು ಸುಪ್ರೀಂಕೋರ್ಟ್​ನಲ್ಲಿ ಬಿಬಿಎಂಪಿ ಚುನಾವಣೆ, ಮೇಕೆದಾಟು ಡಿಪಿಆರ್​ ವಿಚಾರಣೆ

BBMP Election: ಬಿಬಿಎಂಪಿ ಚುನಾವಣೆ ಮತ್ತು ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ನಲ್ಲಿ ಇಂದು (ಜುಲೈ 26) ವಿಚಾರಣೆ ನಡೆಯಲಿದೆ.

Supreme Court: ಇಂದು ಸುಪ್ರೀಂಕೋರ್ಟ್​ನಲ್ಲಿ ಬಿಬಿಎಂಪಿ ಚುನಾವಣೆ, ಮೇಕೆದಾಟು ಡಿಪಿಆರ್​ ವಿಚಾರಣೆ
ಬಿಬಿಎಂಪಿ ಕಚೇರಿ ಮತ್ತು ಸುಪ್ರೀಂಕೋರ್ಟ್
TV9 Web
| Edited By: |

Updated on:Jul 26, 2022 | 10:35 AM

Share

ದೆಹಲಿ: ಸುಪ್ರೀಂಕೋರ್ಟ್​ನಲ್ಲಿ (Supreme Court of India) ಮಂಗಳವಾರ ಕರ್ನಾಟಕಕ್ಕೆ ಸಂಬಂಧಿಸಿದ ಎರಡು ಮಹತ್ವದ ಪ್ರಕರಣಗಳು ವಿಚಾರಣೆಗೆ ಬರಲಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ಚುನಾವಣೆ ಮತ್ತು ಮೇಕೆದಾಟು ಅಣೆಕಟ್ಟು (Mekedatu Dam) ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದ್ದು ವಾದಗಳನ್ನು ಮಂಡಿಸಲು ವಕೀಲರು ಸಿದ್ಧತೆ ನಡೆಸಿದ್ದಾರೆ.

ಬಿಬಿಎಂಪಿ ಚುನಾವಣೆ ನಡೆಸುವ ಸಂಬಂಧ ಇಂದು ಎಂಟು ವಾರಗಳ ಗಡುವು ಅಂತ್ಯವಾದ ಹಿನ್ನಲೆಯಲ್ಲಿ ನ್ಯಾಯಮೂರ್ತಿ ಎ.ಎಂ.ಕಾನ್ವಿಲ್ಕರ್ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಈ ವೇಳೆ ಕರ್ನಾಟಕ ಸರ್ಕಾರವು ಚುನಾವಣೆ ನಡೆಸಲು ಮತ್ತಷ್ಟು ಕಾಲಾವಕಾಶ ಕೋರುವ ಸಾಧ್ಯತೆಯಿದೆ. ಬಿಬಿಎಂಪಿ ವಾರ್ಡ್‌ಗಳ ಪುನರ್ ವಿಂಗಡನೆಯಾದರೂ ಮೀಸಲಾತಿ ನಿಗದಿಪಡಿಸಿ ಈವರೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿಲ್ಲ. ಹೀಗಾಗಿ ಮೀಸಲಾತಿ ಅಂತಿಮಗೊಳಿಸಲು ಕನಿಷ್ಠ ನಾಲ್ಕು ವಾರಗಳ ಸಮಯ ಕೇಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಸರ್ಕಾರದ ವಾದವನ್ನು ವಿರೋಧಿಸಿ, ಶೀಘ್ರ ಚುನಾವಣೆಗೆ ಸೂಚನೆ ನೀಡಬೇಕು ಎಂದು ಕೋರಲು ಅರ್ಜಿದಾರರಾದ ಶಿವರಾಜು ಮತ್ತು ವಾಜಿದ್ ತಯಾರಿ ಮಾಡಿಕೊಂಡಿದ್ದಾರೆ.

ಮೇಕೆದಾಟು ಡಿಪಿಆರ್​ ವಿವಾದದ ವಿಚಾರಣೆ

ಮೇಕೆದಾಟು ಅಣೆಕಟ್ಟಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿಗೆ (Detailed Project Report – DPR) ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು (Cauvery Water Management Authority – CWMA) ಒಪ್ಪಿಗೆ ನೀಡುವ ಕುರಿತು ತಮಿಳುನಾಡು ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆ ಸಹ ಇಂದು ಸುಪ್ರೀಂಕೋರ್ಟ್​ನಲ್ಲಿ ನಡೆಯಲಿದೆ. ನ್ಯಾಯಮೂರ್ತಿ ಎ.ಎಂ.ಕಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ಮೇಕೆದಾಟು ಪ್ರಕರಣದ ವಿಚಾರಣೆ ನಡೆಯಲಿದೆ.

ಮೇಕೆದಾಟು ಯೋಜನೆಯ ಡಿಪಿಆರ್​ಗೆ ಒಪ್ಪಿಗೆ ನೀಡದಂತೆ CWMA ಸೂಚಿಸಬೇಕು ಎಂದು ತಮಿಳುನಾಡು ಸರ್ಕಾರವು ಕೋರಿದೆ. ಸುಪ್ರೀಂಕೋರ್ಟ್​​ನಲ್ಲಿ ಮೂಲ ಅರ್ಜಿ ಇನ್ನೂ ಬಾಕಿಯಿದೆ. ಅದು ಇತ್ಯರ್ಥ ಆಗುವವರೆಗೆ ಮೇಕೆದಾಟು ಯೋಜನೆಗೆ CWMA ಒಪ್ಪಿಗೆ ಕೊಡಬಾರದು ಎಂದು ಕೋರಿದೆ. ತಮಿಳುನಾಡಿನ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಕಳೆದ ವಾರ ಚರ್ಚೆ ಮತ್ತು ಇತರ ಪ್ರಕ್ರಿಯೆ ಸಲ್ಲಿಸುವಂತೆ CWMAಗೆ ನೋಟಿಸ್ ನೀಡಿತ್ತು. ಈ ನೊಟೀಸ್​ಗೆ ಇಂದು CWMA ಪ್ರತಿಕ್ರಿಯಸಲಿದೆ. ಈ ಪ್ರತಿಕ್ರಿಯೆ ಆಧರಿಸಿ ಸುಪ್ರೀಂಕೋರ್ಟ್​ ಮುಂದಿನ ನಡೆಯನ್ನು ನಿರ್ಧರಿಸಲಿದೆ.

Published On - 10:35 am, Tue, 26 July 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?